ಆ್ಯಪ್ನಗರ

ನಾನು ಜೀವ ಇರೋವರೆಗೂ ಬಳ್ಳಾರಿಯಿಂದ ದೂರ ಆಗಲ್ಲ: ಸಚಿವ ಶ್ರೀರಾಮುಲು

ಸೆಪ್ಟೆಂಬರ್ 17ರಂದು ಪ್ರಧಾನಿ ಮೋದಿಯ ಹುಟ್ಟುಹಬ್ಬ. ಈ ಹಿನ್ನೆಲೆ ಬಳ್ಳಾರಿ ಜಿಲ್ಲೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ. ಜತೆಗೆ, ಕಲ್ಯಾಣ ಕರ್ನಾಟಕ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಮಂತ್ರಿ ನೇಮಕ ವಿಚಾರದ ಬಗ್ಗೆಯೂ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.

Vijaya Karnataka Web 16 Sep 2019, 1:50 pm
ಬಳ್ಳಾರಿ: ಪ್ರಧಾನಿ ಮೋದಿ ಅವರ ಜನ್ಮ ದಿನದ ನಿಮಿತ್ತ ಸ್ವಚ್ಚತಾ ಕಾರ್ಯ ಮಾಡ್ತಿದ್ದೇವೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ಜತೆಗೆ, ಮೋದಿ ಅವರಿಗೆ ಜನ್ಮ ದಿನದ ಶುಭಾಶಯಗಳು. ಅವರು ನೂರು ಕಾಲ ಚೆನ್ನಾಗಿ ಬಾಳಲಿ ಎಂದು ಸಚಿವ ಶ್ರೀರಾಮುಲು ಆಶಿಸಿದ್ದಾರೆ.
Vijaya Karnataka Web sriramulu


ಪ್ರಧಾನಿ ಮೋದಿ ಅವರ ಜನ್ಮ ದಿನದ ನಿಮಿತ್ತ ಸ್ವಚ್ಛತಾ ಕಾರ್ಯ ಮಾಡುತ್ತಾ ಇದ್ದೇವೆ. ಸರಳವಾಗಿ ಈ ರೀತಿ ಜಾಗೃತಿ ಮೂಡಿಸುತ್ತಿದ್ದೇವೆ ಎಂದೂ ಬಳ್ಳಾರಿಯಲ್ಲಿ ಸಚಿವ ಶ್ರೀರಾಮುಲು ತಿಳಿಸಿದರು.

ಇನ್ನು, ಕಲ್ಯಾಣ ಕರ್ನಾಟಕ ಧ್ವಜಾರೋಹಣ ಕಾರ್ಯಕ್ರಮ ವಿಚಾರವಾಗಿ ಮಾತನಾಡಿದ ಸಚಿವರು, ನಾನು ಜೀವ ಇರೋವರೆಗೂ ಬಳ್ಳಾರಿಯಿಂದ ದೂರ ಆಗಲ್ಲ. ನನಗೆ ಯಾದಗಿರಿ ಕೊಟ್ಟಿದ್ದಾರೆ. ನಾನು ಇದನ್ನು ಮಾಡುವೆ. ನಮ್ಮ ಜಿಲ್ಲೆಯಲ್ಲಿ ಲಕ್ಷಣ ಸವದಿ ಅವರು ಧ್ವಜಾರೋಹಣ ಮಾಡುತ್ತಾರೆ. ಆದರೆ, ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗೋ ಮಾತೇ ಇಲ್ಲ ಎಂದು ಬಳ್ಳಾರಿಯಲ್ಲಿ ಶ್ರೀರಾಮುಲು ಭರವಸೆ ನೀಡಿದ್ದಾರೆ. ಅಲ್ಲದೆ, ಹೊಸಪೇಟೆ ಜಿಲ್ಲೆ ಹೋರಾಟ ವಿಚಾರ ಗಮನಕ್ಕೆ ಬಂದಿದೆ. ಈ ಕುರಿತ ಸ್ಥಿತಿಗತಿಗಳ ಬಗ್ಗೆ ಗೊತ್ತಿಲ್ಲ. ನಾನು ಈ ಕುರಿತು ಚರ್ಚೆ ಮಾಡುವೆ ಎಂದು ಸಹ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನೊಂದೆಡೆ, ಬಳ್ಳಾರಿ ಜಿಲ್ಲೆ ಉಸ್ತುವಾರಿ ಮಂತ್ರಿಗಳ ನೇಮಕ ವಿಚಾರ ರಾಜ್ಯಪಾಲರಿಗೆ ಪಟ್ಟಿ ಹೋಗಿದೆ. ಆದರೆ, ರಾಜ್ಯಕ್ಕೆ ಹೊಸ ರಾಜ್ಯಪಾಲರು ಬರಬೇಕಿದೆ. ಆಗ ಫೈನಲ್ ಆಗುತ್ತೆ. ಬಳ್ಳಾರಿ ಉಸ್ತುವಾರಿ ಮಂತ್ರಿ ವಿಚಾರದಲ್ಲಿ ಪಕ್ಷದ ತಿರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ ಎಂದೂ ಶ್ರೀರಾಮುಲು ಹೇಳಿದರು. ಜತೆಗೆ, ವಿಮ್ಸ್ ಆಸ್ಪತ್ರೆಗೆ ಮೂಲ ಸೌಕರ್ಯ ಒದಗಿಸಲು ಮುಂದಾಗುವೆ. ಎಂಆರ್ ಐ ಕೂಡಲೇ ಪ್ರಾರಂಭ ಮಾಡಲು ನಾನು ವಿಮ್ಸ್ ಅಧಿಕಾರಿಗಳಿಗೆ ಆದೇಶ ಮಾಡಿದ್ದೇನೆ ಎಂದು ಬಳ್ಳಾರಿಯಲ್ಲಿ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ