ಆ್ಯಪ್ನಗರ

ಹಂತ ಹಂತವಾಗಿ ಎಂಆರ್‌ಐ ಸ್ಕ್ಯಾ‌ನಿಂಗ್‌ ಸೌಕರ್ಯ

ರಾಜ್ಯದಲ್ಲಿ ಈಗಾಗಲೇ 11 ಮೆಡಿಕಲ್‌ ಕಾಲೇಜ್‌ ಹಾಗೂ 7 ಜಿಲ್ಲಾಸ್ಪತ್ರೆಗಳಲ್ಲಿ ಎಂಆರ್‌ಐ ಸ್ಕ್ಯಾ‌ನಿಂಗ್‌ ಸೆಂಟರ್‌ ಆರಂಭಿಸಲಾಗಿದೆ. ಹಂತ, ಹಂತವಾಗಿ ಅಗತ್ಯತೆಗೆ ಅನುಗುಣವಾಗಿ ಇತರೆ ಭಾಗಗಳಲ್ಲಿ ಸೌಕರ್ಯ ಕಲ್ಪಿಸಲಾಗುವುದು ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ ತಿಳಿಸಿದರು.

Vijaya Karnataka 17 Jun 2019, 5:00 am
ಹೊಸಪೇಟೆ : ರಾಜ್ಯದಲ್ಲಿ ಈಗಾಗಲೇ 11 ಮೆಡಿಕಲ್‌ ಕಾಲೇಜ್‌ ಹಾಗೂ 7 ಜಿಲ್ಲಾಸ್ಪತ್ರೆಗಳಲ್ಲಿ ಎಂಆರ್‌ಐ ಸ್ಕ್ಯಾ‌ನಿಂಗ್‌ ಸೆಂಟರ್‌ ಆರಂಭಿಸಲಾಗಿದೆ. ಹಂತ, ಹಂತವಾಗಿ ಅಗತ್ಯತೆಗೆ ಅನುಗುಣವಾಗಿ ಇತರೆ ಭಾಗಗಳಲ್ಲಿ ಸೌಕರ್ಯ ಕಲ್ಪಿಸಲಾಗುವುದು ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
Vijaya Karnataka Web step by step mri scanning facility
ಹಂತ ಹಂತವಾಗಿ ಎಂಆರ್‌ಐ ಸ್ಕ್ಯಾ‌ನಿಂಗ್‌ ಸೌಕರ್ಯ


ನಗರದ ಅಮರಾವತಿ ಪ್ರವಾಸಿ ಮಂದಿರದಲ್ಲಿ ಶನಿವಾರ ಅಧಿಕಾರಿಗಳ ಸಭೆಯ ಅಧ್ಯಕ್ಷ ತೆ ವಹಿಸಿ ಮಾತನಾಡಿದರು. ಸ್ಥಳೀಯ (ಹೊಸಪೇಟೆ) ಉಪವಿಭಾಗೀಯ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆ ಸರಕಾರದ ಮುಂದಿದೆ. ಕೂಡಲೇ ಮೇಲ್ದರ್ಜೆಗೆ ಏರಿಸುವ ಮೂಲಕ ಸಿಟಿ ಸ್ಕ್ಯಾ‌ನಿಂಗ್‌ ಸೆಂಟರ್‌ ಆರಂಭಿಸಲಾಗುವುದು. ನಕಲಿ ವೈದ್ಯರ ಕಂಡು ಬಂದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಖನಿಜ ಪ್ರತಿಷ್ಠಾನ ಯೋಜನೆಯ ಐದು ಕೋಟಿ ಅನುದಾನದಲ್ಲಿ ನರ್ಸಿಂಗ್‌ ಸ್ಕೂಲ್‌ ನೂತನ ಕಟ್ಟಡ ನಿರ್ಮಾಣ ಮಾಡಲಾಗುವುದು. ಬಳ್ಳಾರಿ ಜಿಲ್ಲಾಸ್ಪತ್ರೆಗೆ ಸಿಟಿ ಸ್ಕ್ಯಾ‌ನ್‌, ಬ್ಲಡ್‌ ಬ್ಯಾಂಕ್‌ ಹಾಗೂ ಪೂರ್ಣ ಪ್ರಮಾಣದ ಐಸಿಯು ಆರಂಭ ಸೇರಿದಂತೆ ಇನ್ನಿತರೆ ಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ಜಿಲ್ಲಾ ಶಸ್ತ್ರಚಿಕಿತ್ಸ ಡಾ.ಬಸವರೆಡ್ಡಿ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಶಿವರಾಜ್‌ ಹೆಡೆ, ತಾಲೂಕು ಆರೋಗ್ಯಾಧಿಕಾರಿ ಡಾ.ಭಾಸ್ಕರರೆಡ್ಡಿ, ಜಿಲ್ಲಾ ಸರ್ವೇಕ್ಷ ಣಾಧಿಕಾರಿ, ಕಾಯಕಲ್ಪ ಯೋಜನಾಧಿಕಾರಿ ಡಾ.ಅನಿಲ್‌, ಡಾ.ಲಕ್ಷ್ಮಿಕಾಂತ್‌, ಉಪವಿಭಾಗ ಮಟ್ಟದ ಸಾರ್ವಜನಿಕ ಸರಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸಲೀಮ್‌, ಕ್ಷೇತ್ರ ಆರೋಗ್ಯ ಶಿಕ್ಷ ಣಾಧಿಕಾರಿ ದೊಡ್ಡಮನಿ, ಕುಷ್ಠರೋಗ ಮೇಲ್ವಿಚಾರಕ ಎಂ.ಧರ್ಮನಗೌಡ ಇನ್ನಿತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ