ಆ್ಯಪ್ನಗರ

ವೈದಿಕ ಪಾಠಶಾಲೆಗೆ ಸ್ವಾಮೀಜಿ ಭೇಟಿ

ನಗರದ ಕೆಎಚ್‌ಬಿ ಕಾಲೊನಿಯಲ್ಲಿರುವ ಜಗದ್ಗುರು ಪಂಚಾಚಾರ್ಯ ವೈದಿಕ ಜೋತಿಷ್ಯ ಪಾಠ ಶಾಲೆಗೆ ಶುಕ್ರವಾರ ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ಧರಾಮ ಶಿವಾಚಾರ್ಯ ಸ್ವಾಮೀಜಿ ಭೇಟಿ ನೀಡಿದರು.

Vijaya Karnataka 23 Jun 2018, 5:00 am
ಸಿರುಗುಪ್ಪ : ನಗರದ ಕೆಎಚ್‌ಬಿ ಕಾಲೊನಿಯಲ್ಲಿರುವ ಜಗದ್ಗುರು ಪಂಚಾಚಾರ್ಯ ವೈದಿಕ ಜೋತಿಷ್ಯ ಪಾಠ ಶಾಲೆಗೆ ಶುಕ್ರವಾರ ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ಧರಾಮ ಶಿವಾಚಾರ್ಯ ಸ್ವಾಮೀಜಿ ಭೇಟಿ ನೀಡಿದರು.
Vijaya Karnataka Web BLR-BLY22SGP9


ಪಾಠಶಾಲೆಯ ವೈದಿಕ ಶಿಕ್ಷ ಕರು ಸ್ವಾಮೀಜಿಗಳನ್ನು ಪೂರ್ಣಕುಂಭ ಹಾಗೂ ಸಕಲ ವೇದ ಘೋಷಗಳೊಂದಿಗೆ ಸ್ವಾಗತಿಸಿಕೊಂಡರು. ಈ ವೇಳೆ ಡಾ.ಚನ್ನಸಿದ್ಧರಾಮ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಮಕ್ಕಳಿಗೆ ಶಿಕ್ಷ ಣದ ಜತೆಗೆ ಪುರಾತನ ಪರಂಪರೆಯ ಬಗ್ಗೆ ತಿಳಿಸಬೇಕು. ವೇದ, ಉಪನಿಷತ್ತು, ಜೋತಿಷ್ಯ ಪರಿಚಯಿಸಿ ಶ್ಲೋಕಗಳ ಅಭ್ಯಾಸ ಮಾಡಿಸಬೇಕು. ಇದರಿಂದ ಮಕ್ಕಳ ಬೌದ್ಧಿಕ ಮಟ್ಟ ಕೂಡ ಹೆಚ್ಚಲಿದೆ ಎಂದು ಹೇಳಿದರು. ಪಾಠಶಾಲೆಯ ಪ್ರಾಚಾರ್ಯ ಚಂದ್ರಮೌಳಿ ಶಾಸ್ತ್ರಿ, ಜಂಗಮ ಸಂಘದ ತಾಲೂಕು ಉಪಾಧ್ಯಕ್ಷ ಶಿವಕುಮಾರಸ್ವಾಮಿ, ಹಿರಿಯ ನ್ಯಾಯವಾದಿ ಎಚ್‌.ಕೆ.ಮಲ್ಲಿಕಾರ್ಜುನಸ್ವಾಮಿ, ವೈದಿಕ ಪಾಠಶಾಲೆ ಸಮಿತಿ ಸದಸ್ಯರಾದ ಬಸವರಾಜ, ವೀರೇಶ, ವಿರೂಪಾಕ್ಷಿ, ಮಲ್ಲಿಕಾರ್ಜುನ, ಸಿದ್ದಲಿಂಗಯ್ಯಸ್ವಾಮಿ ಸೇರಿ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ