ಆ್ಯಪ್ನಗರ

ಟ್ರ್ಯಾಕ್ಟರ್ ಪಲ್ಟಿ: ಬಾಲಕ ಸಾವು

ಪಟ್ಟಣ ಹೊರವಲಯದ ಜೋಳದಕೂಡ್ಲಿಗಿ ರಸ್ತೆಯಲ್ಲಿ ಶುಕ್ರವಾರ, ಮೈಲುಗಲ್ಲಿಗೆ ಡಿಕ್ಕಿ ಹೊಡೆದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ವಿಕ ಸುದ್ದಿಲೋಕ 30 Apr 2016, 8:18 am
ಕೊಟ್ಟೂರು (ಬಳ್ಳಾರಿ); ಪಟ್ಟಣ ಹೊರವಲಯದ ಜೋಳದಕೂಡ್ಲಿಗಿ ರಸ್ತೆಯಲ್ಲಿ ಶುಕ್ರವಾರ, ಮೈಲುಗಲ್ಲಿಗೆ ಡಿಕ್ಕಿ ಹೊಡೆದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
Vijaya Karnataka Web tractor overturns death of a young boy
ಟ್ರ್ಯಾಕ್ಟರ್ ಪಲ್ಟಿ: ಬಾಲಕ ಸಾವು


ಹರಪನಹಳ್ಳಿ ತಾಲೂಕು ಎನ್.ಚೀರನಹಳ್ಳಿ ಗ್ರಾಮದ ದರ್ಶನ್(15) ಮೃತ ಬಾಲಕ. ಅದೇ ಗ್ರಾಮದ ನಾಲ್ವರು ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೂವಿನಹಡಗಲಿ ತಾಲೂಕು ಇಟಿಗಿ ಗ್ರಾಮದಲ್ಲಿ ಮದುವೆ ಮುಗಿಸಿಕೊಂಡು ಎನ್.ಚೀರನಹಳ್ಳಿ ಗ್ರಾಮಕ್ಕೆ ಇವರೆಲ್ಲರೂ ಟ್ರ್ಯಾಕ್ಟರ್‌ನಲ್ಲಿ ವಾಪಸ್ ಹೋಗುತ್ತಿದ್ದರು. ಚಾಲಕನ ನಿರ್ಲಕ್ಷ್ಯದಿಂದ ಟ್ರ್ಯಾಕ್ಟರ್, ಮೈಲುಗಲ್ಲಿಗೆ ಡಿಕ್ಕಿಹೊಡೆದು, ಪಲ್ಟಿಯಾಗಿದೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ