ಆ್ಯಪ್ನಗರ

ಕತ್ತಲಾದ ಮೇಲೆ ಮಗಳನ್ನು MG ರೋಡ್‌ಗೆ ಕಳುಹಿಸಲ್ಲ: ದಿನೇಶ್ ಗುಂಡೂರಾವ್

ರಾತ್ರಿ ಹೊತ್ತು ಮಗಳನ್ನು ಎಂಜಿ ರೋಡ್‌ಗೆ ಕಳುಹಿಸೋಲ್ಲ ಎಂದು ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ 22 Jun 2017, 3:14 pm
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಸುಧಾರಿಸಿದೆ. ಆದರೂ ರಾತ್ರಿ ಹೊತ್ತು ಮಗಳನ್ನು ಎಂಜಿ ರೋಡ್‌ಗೆ ಕಳುಹಿಸುವುದಿಲ್ಲ ಎಂದು ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Vijaya Karnataka Web  wont send daughter to bengalurus mg road at night congress neta
ಕತ್ತಲಾದ ಮೇಲೆ ಮಗಳನ್ನು MG ರೋಡ್‌ಗೆ ಕಳುಹಿಸಲ್ಲ: ದಿನೇಶ್ ಗುಂಡೂರಾವ್


ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಬೆಂಗಳೂರಿನ ಎಂಜಿ ರಸ್ತೆಯಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದರು. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಆದರೆ, ಆಡಳಿತಾರೂಢ ಕಾಂಗ್ರೆಸ್ ಪಕ್ಷದ ನಾಯಕ ನೀಡಿರುವ ಹೇಳಿಕೆಯಿಂದ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಸುಧಾರಿಸಿಲ್ಲ ಎನ್ನುವ ಅನುಮಾನ ಮೂಡುತ್ತಿದೆ.

ಮಹಿಳೆಯರು ಪುರುಷರ ಸಹಾಯ ನಿರೀಕ್ಷಿಸಬಾರದು. ಘಟನೆಯ ವಿರುದ್ಧ ಧ್ವನಿ ಎತ್ತಬೇಕು ಎಂದು ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಮಿರರ್ ನೌ ಅರ್ಬನ್ ಚರ್ಚಾಕೂಟದಲ್ಲಿ ಅವರು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ