ಆ್ಯಪ್ನಗರ

Medical Seat Fraud: ಬೆಂಗಳೂರಿನಲ್ಲಿ ಮೆಡಿಕಲ್‌ ಸೀಟು ಕೊಡಿಸುವ ಸೋಗಿನಲ್ಲಿ 11 ಲಕ್ಷ ರೂ. ವಂಚನೆ..!

Medical Seat Fraud In Bengaluru: ಅನಂತಪುರ ಜಿಲ್ಲೆ ಕಲ್ಯಾಣ ದುರ್ಗ ನಿವಾಸಿ ಜಯ ಕೃಷ್ಣ ಅವರು ಮೆಡಿಕಲ್‌ ಸೀಟು ವಂಚನೆ ಕುರಿತು ಆರೋಪಿಗಳ ವಿರುದ್ಧ ಬೆಂಗಳೂರಿನ ವೈಟ್‌ ಫೀಲ್ಡ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ವರ್ತೂರಿನ ಸಿಗ್ಮಾ ಟೆಕ್‌ ಪಾರ್ಕ್‌ನಲ್ಲಿದ್ದ ವೈಸ್‌ ಮ್ಯಾಗ್ನೆಟ್‌ ಎಜುಕೇಶನ್‌ ಪ್ರೈವೇಟ್‌ ಲಿಮಿಟೆಡ್‌, ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಧೀರೇಂದ್ರ ಕುಮಾರ್‌ ಜೈಸ್ವಾಲ್‌, ಸಿಇಒ ಸಚಿನ್‌ ಸಾಬ್ಲೆ, ಬಿಡಿಇ ಅನಿಕೇಶ್‌ ಎಂಬುವವರ ವಿರುದ್ಧ ಎಫ್‌ ಐ ಆರ್‌ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Edited byದಿಲೀಪ್ ಡಿ. ಆರ್. | Vijaya Karnataka 27 Jun 2022, 5:29 pm

ಹೈಲೈಟ್ಸ್‌:

  • ಆಂಧ್ರ ಪ್ರದೇಶದ ವಿದ್ಯಾರ್ಥಿನಿಯೊಬ್ಬರ ಪೋಷಕರ ಬಳಿ 11 ಲಕ್ಷ ರೂ. ಹಣ ಪಡೆದು ವಂಚನೆ
  • ಅನಂತಪುರ ಜಿಲ್ಲೆ ಕಲ್ಯಾಣ ದುರ್ಗ ನಿವಾಸಿ ಜಯ ಕೃಷ್ಣ ಅವರಿಂದ ದೂರು
  • ಬೆಂಗಳೂರಿನ ವೈಟ್‌ ಫೀಲ್ಡ್‌ ಪೊಲೀಸರಿಗೆ ದೂರು ಸಲ್ಲಿಕೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web fraud
ಬೆಂಗಳೂರು: ಮೆಡಿಕಲ್‌ ಸೀಟು (ಎಂ ಬಿ ಬಿ ಎಸ್‌) ಕೊಡಿಸುವ ನೆಪದಲ್ಲಿ ಆಂಧ್ರ ಪ್ರದೇಶದ ವಿದ್ಯಾರ್ಥಿನಿಯೊಬ್ಬರ ಪೋಷಕರ ಬಳಿ 11 ಲಕ್ಷ ರೂ. ಹಣ ಪಡೆದು ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಅನಂತಪುರ ಜಿಲ್ಲೆ ಕಲ್ಯಾಣ ದುರ್ಗ ನಿವಾಸಿ ಜಯ ಕೃಷ್ಣ ಅವರು ಮೆಡಿಕಲ್‌ ಸೀಟು ವಂಚನೆ ಕುರಿತು ಆರೋಪಿಗಳ ವಿರುದ್ಧ ಬೆಂಗಳೂರಿನ ವೈಟ್‌ ಫೀಲ್ಡ್‌ ಪೊಲೀಸರಿಗೆ ದೂರು ನೀಡಿದ್ದಾರೆ.

ಖಾಸಗಿ ಕಾಲೇಜ್‌ನಲ್ಲಿ ಸೀಟ್‌ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚಿಸಿದ ಖದೀಮನ ಬಂಧನ
ಈ ದೂರಿನ ಅನ್ವಯ ವರ್ತೂರಿನ ಸಿಗ್ಮಾ ಟೆಕ್‌ ಪಾರ್ಕ್‌ನಲ್ಲಿದ್ದ ವೈಸ್‌ ಮ್ಯಾಗ್ನೆಟ್‌ ಎಜುಕೇಶನ್‌ ಪ್ರೈವೇಟ್‌ ಲಿಮಿಟೆಡ್‌, ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಧೀರೇಂದ್ರ ಕುಮಾರ್‌ ಜೈಸ್ವಾಲ್‌, ಸಿಇಒ ಸಚಿನ್‌ ಸಾಬ್ಲೆ, ಬಿಡಿಇ ಅನಿಕೇಶ್‌ ಎಂಬುವವರ ವಿರುದ್ಧ ಎಫ್‌ ಐ ಆರ್‌ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜಯ ಕೃಷ್ಣ ತಮ್ಮ ಪುತ್ರಿಗೆ ಬೆಂಗಳೂರು ನಗರದ ಮೆಡಿಕಲ್‌ ಕಾಲೇಜಿನಲ್ಲಿ ಎಂ ಬಿ ಬಿ ಎಸ್‌ ಸೀಟಿಗಾಗಿ ಪ್ರಯತ್ನಿಸುತ್ತಿದ್ದರು. ಮಾರ್ಚ್ 30 ರಂದು ಜಯ ಕೃಷ್ಣ ಅವರ ಮೊಬೈಲ್‌ ನಂಬರ್‌ಗೆ ಕರೆ ಮಾಡಿದ ಐಶ್ವರ್ಯ ಎಂಬಾಕೆ, ದೇವನ ಹಳ್ಳಿಯ ಆಕಾಶ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌ ರಿಸರ್ಚ್ ಸೆಂಟರ್‌ ಕಾಲೇಜಿನಲ್ಲಿ ಮೆಡಿಕಲ್‌ ಸೀಟು ಕೊಡಿಸುವುದಾಗಿ ತಿಳಿಸಿದ್ದರು. ಜತೆಗೆ, ವೈಸ್‌ ಮ್ಯಾಗ್ನೆಟ್‌ ಎಜುಕೇಶನ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿ ಕಚೇರಿಗೆ ಆಗಮಿಸಿ ಅಲ್ಲಿನ ಅಧಿಕಾರಿಗಳನ್ನು ಭೇಟಿ ಮಾಡುವಂತೆ ತಿಳಿಸಿದ್ದರು.

ವೈದ್ಯರು ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದಾಗ ಹನಿಟ್ರ್ಯಾಪ್‌: 50 ಲಕ್ಷ ವಂಚಿಸಿದ ಮೂವರ ಬಂಧನ
ಆಕೆಯ ಮಾತು ನಂಬಿದ ಜಯ ಕೃಷ್ಣ , ವೈಸ್‌ ಮ್ಯಾಗ್ನೆಟ್‌ ಕಂಪನಿಗೆ ಆಗಮಿಸಿದಾಗ ಅಲ್ಲಿದ್ದ ಸಚಿನ್‌ ಸಾಬ್ಲೆ, ಅನಿಕೇಶ್‌ ಮೆಡಿಕಲ್‌ ಸೀಟು ಕೊಡಿಸುವ ಶುಲ್ಕವಾಗಿ ಚೆಕ್‌ ರೂಪದಲ್ಲಿ 11 ಲಕ್ಷ ರೂ. ಪಡೆದುಕೊಂಡಿದ್ದರು. ಬಳಿಕ ಏಪ್ರಿಲ್‌ 16 ರಂದು ಆಕಾಶ್‌ ಕಾಲೇಜಿನ ಬಳಿ 9 ಲಕ್ಷ ಡಿಡಿಯೊಂದಿಗೆ ಕಾಯುತ್ತಿರಿ. ನಾವು ಅಲ್ಲಿಗೆ ಬಂದು ನಿಮ್ಮ ಮಗಳಿಗೆ ಅಡ್ಮಿಶನ್‌ ಮಾಡಿಸುತ್ತೇವೆ ಎಂದು ಭರವಸೆ ನೀಡಿದ್ದರು.

ಅದರಂತೆ ಏಪ್ರಿಲ್ 16 ರಂದು ಆಕಾಶ್‌ ಕಾಲೇಜಿನ ಬಳಿ ಜಯ ಕೃಷ್ಣ ತಮ್ಮ ಮಗಳ ಜತೆ ತೆರಳಿ ಸಚಿನ್‌ ಅವರಿಗೆ ಹಲವು ಬಾರಿ ಕರೆ ಮಾಡಿದರೂ ಸ್ವೀಕರಿಸಿರಲಿಲ್ಲ. ಹೀಗಾಗಿ ಅನುಮಾನ ಬಂದು ಸಿಗ್ಮಾ ಟೆಕ್‌ ಪಾರ್ಕ್‌ನ ವೈಸ್‌ ಮ್ಯಾಗ್ನೆಟ್‌ ಕಂಪನಿ ಬಳಿ ಬಂದು ನೋಡಿದಾಗ ಕಚೇರಿ ಬೀಗ ಹಾಕಿದ್ದು, ಮೋಸ ಹೋಗಿರುವುದು ಗೊತ್ತಾಗಿದೆ. ಹಣ ವಾಪಸ್‌ ನೀಡಬಹುದು ಎಂದು ಕಾದಿದ್ದ ಜಯ ಕೃಷ್ಣ ಅವರಿಗೆ ಅದೇ ಕಂಪನಿ ಇನ್ನೂ ಹಲವರಿಗೆ ಮೆಡಿಕಲ್‌ ಸೀಟು ನೆಪದಲ್ಲಿ ಹಣ ಪಡೆದು ವಂಚಿಸಿರುವುದು ಗೊತ್ತಾಗಿ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಲೇಖಕರ ಬಗ್ಗೆ
ದಿಲೀಪ್ ಡಿ. ಆರ್.
ವಿಜಯ ಕರ್ನಾಟಕದ ಡಿಜಿಟಲ್ ಪತ್ರಕರ್ತನಾಗಿ 2019ರ ಆಗಸ್ಟ್‌ನಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡ ಟಿವಿ ನ್ಯೂಸ್ ವಾಹಿನಿಗಳಲ್ಲಿ 14 ವರ್ಷಕ್ಕೂ ಹೆಚ್ಚು ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು, ಹಸಿರು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ