ಆ್ಯಪ್ನಗರ

4 ವರ್ಷದ ಬಳಿಕ 288 ಅಭ್ಯರ್ಥಿಗಳಿಗೆ ಆದೇಶ ಪ್ರತಿ ನೀಡಿದ ಸಚಿವ ಮುನಿರತ್ನ; ಸಹಾಯಕ ತೋಟಗಾರಿಕೆ ಅಧಿಕಾರಿಗಳಾಗಿ ನೇಮಕ

ಕೌಟುಂಬಿಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ವರ್ಗಾವಣೆ ಕೋರಿ ಅರ್ಜಿಗಳನ್ನು ಬರೆಯಬೇಡಿ. ಎಲ್ಲಿ ಸೇವೆ ಮಾಡುವ ಅವಕಾಶ ಸಿಗುವುದೋ ಅಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ. ರೈತರನ್ನು ಕಾಯಿಸದೇ, ಸಕಾಲದಲ್ಲಿಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು

Vijaya Karnataka 28 Jan 2022, 11:40 pm
ಬೆಂಗಳೂರು: ಸಹಾಯಕ ತೋಟಗಾರಿಕೆ ಅಧಿಕಾರಿಗಳಾಗಿ ನೇರ ನೇಮಕಾತಿ ಮೂಲಕ ಆಯ್ಕೆಯಾದರೂ ಆದೇಶ ಪತ್ರ ಸಿಗದೆ ಕಳೆದ ನಾಲ್ಕು ವರ್ಷಗಳಿಗೂ ಹೆಚ್ಚು ಕಾಲದಿಂದ ಚಾತಕಪಕ್ಷಿಗಳಂತೆ ಕಾದು ಕಂಗೆಟ್ಟಿದ್ದ 288 ಅಭ್ಯರ್ಥಿಗಳಿಗೆ ಕೊನೆಗೂ ಆದೇಶ ಪತ್ರ ಸಿಕ್ಕಿತು.
Vijaya Karnataka Web ಸಚಿವ ಮುನಿರತ್ನ
ಸಚಿವ ಮುನಿರತ್ನ


ತೋಟಗಾರಿಕೆ ಇಲಾಖೆ ಸಚಿವ ಮುನಿರತ್ನ ಅವರು ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜನ್ಮದಿನದ ನೆನಪಿನಾರ್ಥವಾಗಿ ತೋಟಗಾರಿಕೆ ಪದವಿ ಪಡೆದ 288 ಅಭ್ಯರ್ಥಿಗಳಿಗೆ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ನಡೆದ ಸಮಾರಂಭದಲ್ಲಿ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿದರು.

ನಮ್ಮದು ಅಭಿವೃದ್ಧಿ ಜತೆಗೆ ಅಂತಃಕರಣ ಇರುವ ಆಡಳಿತ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

ಈ ವೇಳೆ ಮಾತನಾಡಿದ ಸಚಿವ ಮುನಿರತ್ನ, ಕೌಟುಂಬಿಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ವರ್ಗಾವಣೆ ಕೋರಿ ಅರ್ಜಿಗಳನ್ನು ಬರೆಯಬೇಡಿ. ಎಲ್ಲಿ ಸೇವೆ ಮಾಡುವ ಅವಕಾಶ ಸಿಗುವುದೋ ಅಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ. ರೈತರನ್ನು ಕಾಯಿಸದೇ, ಸಕಾಲದಲ್ಲಿಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು,'' ಎಂದು ಸಲಹೆ ನೀಡಿದರು.

ಲೋಕಸೇವಾ ಆಯೋಗ ಬೆಂಗಳೂರು, ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳ ಹುದ್ದೆಗೆ 288 ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಆದೇಶ ಪತ್ರ ಪಡೆದವರು ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ ನಗರದಲ್ಲಿ ರಕ್ತದ ಅಭಾವ ಹೆಚ್ಚಾಗಿದೆ. ನಿಮ್ಮ ನೇಮಕಾತಿಯ ಸಂತೋಷದ ದಿನದಂದು ರಕ್ತದಾನ ಮಾಡಿ, ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಕ್ಕಳ ಭವಿಷ್ಯಕ್ಕೆ ನೆರವಾಗಿ ಎಂದು ನೂತನವಾಗಿ ಆಯ್ಕೆಗೊಂಡ ಅಧಿಕಾರಿಗಳೊಂದಿಗೆ ಸಚಿವರು ಮನವಿ ಮಾಡಿದರು.

ಸರಕಾರಿ ಆಸ್ಪತ್ರೆಗಳಲ್ಲಿ ಆಧುನಿಕ ತಂತ್ರಜ್ಞಾನದ ಅಂಗಾಂಗ ಕಸಿ ತರಬೇತಿ: ಸಚಿವ ಸುಧಾಕರ್

ಇದೇ ವೇಳೆ ಲಾಲ್‌ಬಾಗ್‌ನಲ್ಲಿ ಸಸಿ ನೆಟ್ಟ ಸಚಿವರು, 2022ನೇ ಸಾಲಿನ ಕ್ಯಾಲೆಂಡರ್‌ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಠಾರಿಯಾ, ನಿರ್ದೇಶಕ ನಾಗೇಂದ್ರ ಪ್ರಸಾದ್‌, ಜಂಟಿ ನಿರ್ದೇಶಕರಾದ ಶಿವಕುಮಾರ್‌, ಡಾ.ಎಂ.ಜಗದೀಶ್‌, ಉಪ ನಿರ್ದೇಶಕಿ ಕುಸುಮಾ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ