ಆ್ಯಪ್ನಗರ

ಬೆಂಗಳೂರು: ವಲಯ ಮಟ್ಟದಲ್ಲಿ 50 ಹಾಸಿಗೆಗಳ ಕೋವಿಡ್‌ ಕೇಂದ್ರ ಶೀಘ್ರ

ಪಾಲಿಕೆ ವ್ಯಾಪ್ತಿಯಲ್ಲಿ ಸದ್ಯ 500 ಕೇಂದ್ರಗಳಲ್ಲಿಲಸಿಕೆ ನೀಡಲಾಗುತ್ತಿದೆ. ಪ್ರತಿ ಕೇಂದ್ರದಲ್ಲಿನಿತ್ಯ 100-150 ಮಂದಿಗೆ ಲಸಿಕೆ ವಿತರಿಸುವ ಗುರಿ ಹಾಕಿಕೊಳ್ಳಲಾಗಿದೆ. ಅಗತ್ಯವಿರುವೆಡೆ ಹೆಚ್ಚುವರಿ ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು. ಲಸಿಕೆ ಪಡೆಯುವವರಿಗೆ ಅವಶ್ಯವಿರುವ ಕಡೆ ವಾಹನಗಳ ವ್ಯವಸ್ಥೆ ಕೂಡ ಮಾಡಲಾಗುವುದು

Vijaya Karnataka Web 10 Apr 2021, 9:22 pm
ಬೆಂಗಳೂರು: ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಾಲಿಕೆಯ ಎಲ್ಲ ವಲಯಗಳಲ್ಲಿ 50 ಹಾಸಿಗೆ ಸಾಮರ್ಥ್ಯದ 2 ಅಥವಾ 3 ಕೋವಿಡ್‌ ಆರೈಕೆ ಕೇಂದ್ರಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ತಿಳಿಸಿದರು.
Vijaya Karnataka Web ಕೋವಿಡ್‌ ಸೆಂಟರ್‌
ಕೋವಿಡ್‌ ಸೆಂಟರ್‌


ಆಡುಗೋಡಿಯಲ್ಲಿರುವ ಔಷಧಾಲಯ ಹಾಗೂ ಬಾಷ್‌ ಕಂಪೆನಿಯ ಪ್ರಸ್ತಾವಿತ ಕೋವಿಡ್‌ ಕೇರ್‌ ಸೆಂಟರ್‌ಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ''ಪಾಲಿಕೆ ವ್ಯಾಪ್ತಿಯಲ್ಲಿ ಸದ್ಯ 500 ಕೇಂದ್ರಗಳಲ್ಲಿಲಸಿಕೆ ನೀಡಲಾಗುತ್ತಿದೆ. ಪ್ರತಿ ಕೇಂದ್ರದಲ್ಲಿ ನಿತ್ಯ 100-150 ಮಂದಿಗೆ ಲಸಿಕೆ ವಿತರಿಸುವ ಗುರಿ ಹಾಕಿಕೊಳ್ಳಲಾಗಿದೆ. ಅಗತ್ಯವಿರುವೆಡೆ ಹೆಚ್ಚುವರಿ ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು. ಲಸಿಕೆ ಪಡೆಯುವವರಿಗೆ ಅವಶ್ಯವಿರುವ ಕಡೆ ವಾಹನಗಳ ವ್ಯವಸ್ಥೆ ಕೂಡ ಮಾಡಲಾಗುವುದು'' ಎಂದರು.

''ಬಾಷ್‌ ಕಂಪೆನಿಯು ಸ್ಥಾಪಿಸಿರುವ ಕೋವಿಡ್‌ ಆರೈಕೆ ಕೇಂದ್ರವನ್ನು ಪಾಲಿಕೆ ವಶಕ್ಕೆ ಪಡೆಯುತ್ತೇವೆ. ಈ ಸಂಬಂಧ ಕಂಪೆನಿಯೊಂದಿಗೆ ಚರ್ಚೆ ನಡೆಸುತ್ತಿದ್ದು, ಇನ್ನೆರಡು ದಿನಗಳಲ್ಲಿ ಕೋವಿಡ್‌ ಆರೈಕೆ ಕೇಂದ್ರವನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು'' ಎಂದು ತಿಳಿಸಿದರು.

ಕೋರಮಂಗಲದ ಫೋರಂ ಮಾಲ್‌ ಬಳಿಯ ಪ್ರೆಸ್ಟೀಜ್‌ ಅಪಾರ್ಟ್‌ಮೆಂಟ್‌ನಲ್ಲಿ ಕೋವಿಡ್‌ ಪತ್ತೆ ಪರೀಕ್ಷಾ ಕಾರ್ಯವನ್ನು ವೀಕ್ಷಿಸಿದ ಅವರು, ''ವಸತಿ ಸಮುಚ್ಚಯದಲ್ಲಿರುವ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಬೇಕು'' ಎಂದು ಮನವಿ ಮಾಡಿಕೊಂಡರು. ಈ ವೇಳೆ ಗೃಹಿಣಿಯೊಬ್ಬರು ಚಿಕ್ಕ ಮಗುವಿಗೂ ಟೆಸ್ಟ್‌ ಮಾಡಿಸಿದರು.

ಪರೀಕ್ಷೆ 'ನಾಟಕ' ಆಡಿದ್ದ ಸ್ವಾಬ್‌ ಕಲೆಕ್ಟರ್‌ ಅಮಾನತು

ಮೂಗು, ಗಂಟಲು ದ್ರವದ ಮಾದರಿ ಸಂಗ್ರಹಿಸದೆಯೇ ಹತ್ತಿ ಒಳಗೊಂಡ ಕಡ್ಡಿಯನ್ನು ಟೆಸ್ಟಿಂಗ್‌ಟ್ಯೂಬ್‌ನಲ್ಲಿ ಇರಿಸಿ ನೂರಾರು ಸ್ಯಾಂಪಲ್‌ ಪರೀಕ್ಷೆ ಕಳುಹಿಸಿದ್ದ ಕೊಡಿಗೇಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಇಬ್ಬರು ಸ್ವಾಬ್‌ ಕಲೆಕ್ಟರ್‌ಗಳನ್ನು ಅಮಾನತು ಮಾಡಿ ಪಾಲಿಕೆಯು ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಟೆಸ್ಟಿಂಗ್‌ ಸಾಮಗ್ರಿಯನ್ನು ಟ್ಯೂಬ್‌ಗಳಲ್ಲಿ ಭರ್ತಿ ಮಾಡುತ್ತಿದ್ದುದು, ನಿರ್ಲಕ್ಷ್ಯದಿಂದ ಮಾತನಾಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧವೂ ವಿಚಾರಣೆ ನಡೆಸಿ, ಬಳಿಕ ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ