ಆ್ಯಪ್ನಗರ

ಬ್ಯಾಂಕಿನಿಂದ ಬಿಡಿಸಿ ತರುತ್ತಿದ್ದ 7 ಲಕ್ಷ ಮೌಲ್ಯದ ಆಭರಣ ಕದ್ದು ಪರಾರಿ

ಬೆಂಗಳೂರು ಉತ್ತರ ತಾಲೂಕಿನ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಗ್ರಾಮದ ಮಹೇಶ್‌ ಎಂಬುವವರು ಹಣದ ಸಮಸ್ಯೆಯಿಂದ ಮನೆಯಲ್ಲಿದ್ದ ಚಿನ್ನಾಭರಣವನ್ನೆಲ್ಲ ಬ್ಯಾಂಕ್‌ನಲ್ಲಿ ಒತ್ತೆ ಇಟ್ಟಿದ್ದರು. ಶನಿವಾರ ಆ ಒಡವೆಗಳನ್ನು ಬ್ಯಾಂಕ್‌ನಿಂದ ಬಿಡಿಸಿಕೊಂಡು ಬರುತ್ತಿದ್ದರು.

Vijaya Karnataka 24 Jul 2021, 1:53 pm
ಬೆಂಗಳೂರು: ಬ್ಯಾಂಕ್‌ನಲ್ಲಿಟ್ಟಿದ್ದ ಚಿನ್ನಾಭರಣಗಳನ್ನು ಬಿಡಿಸಿಕೊಂಡು ಬರುತ್ತಿದ್ದ ವ್ಯಕ್ತಿಯೊಬ್ಬರು ಮದ್ಯ ಖರೀದಿಗೆಂದು ವೈನ್‌ಶಾಪ್‌ ಬಳಿ ಸ್ಕೂಟರ್‌ ನಿಲ್ಲಿಸಿ ಒಳಗೆ ಹೋಗಿದ್ದ ಸಮಯದಲ್ಲಿ ದುಷ್ಕರ್ಮಿಗಳು ಸ್ಕೂಟರ್‌ನಲ್ಲಿದ್ದ ಹಣ, ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಶನಿವಾರ ನಡೆದಿದೆ.
Vijaya Karnataka Web ಪೊಲೀಸ್‌
ಪೊಲೀಸ್‌


ಬೆಂಗಳೂರು ಉತ್ತರ ತಾಲೂಕಿನ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಗ್ರಾಮದ ಮಹೇಶ್‌ ಎಂಬುವವರು ಹಣದ ಸಮಸ್ಯೆಯಿಂದ ಮನೆಯಲ್ಲಿದ್ದ ಚಿನ್ನಾಭರಣವನ್ನೆಲ್ಲ ಬ್ಯಾಂಕ್‌ನಲ್ಲಿ ಒತ್ತೆ ಇಟ್ಟಿದ್ದರು. ಶನಿವಾರ ಆ ಒಡವೆಗಳನ್ನು ಬ್ಯಾಂಕ್‌ನಿಂದ ಬಿಡಿಸಿಕೊಂಡು ಬರುತ್ತಿದ್ದರು.

ಇವರನ್ನೇ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ವೈನ್‌ಶಾಪ್‌ ಬಳಿ ನಿಲ್ಲಿಸಿದ್ದ ವಾಹನದ ಡಿಕ್ಕಿಯಲ್ಲಿದ್ದ 1 ಲಕ್ಷಕ್ಕೂ ಅಧಿಕ ನಗದು, 3 ಚಿನ್ನದ ಚೈನ್‌ಗಳು, ಒಂದು ಜತೆ ಬಳೆ, ಕೈ ಚೈನ್‌, ಲಾಂಗ್‌ ಚೈನ್‌ ಸೇರಿದಂತೆ 7 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕ್ಷಣಾರ್ಧದಲ್ಲಿ ದೋಚಿ ಪರಾರಿಯಾಗಿದ್ದಾರೆ.

ಸಧ್ಯ ಕಳ್ಳರ ಚಲನವಲನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಮಾದನಾಯಕನ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ