ಆ್ಯಪ್ನಗರ

ದಿ. ಕರ್ನಲ್‌ ಎಂ.ಬಿ. ರವೀಂದ್ರನಾಥ್‌ ಸ್ಮರಣಾರ್ಥ ವಿಶೇಷ ಕಾರ್ಯಕ್ರಮ

ನಗರದ ಸೈನಿಕ ಶಾಲೆಯ ಹಳೇ ವಿದ್ಯಾರ್ಥಿಗಳು ಕಾರ್ಗಿಲ್‌ ಯುದ್ಧದಲ್ಲಿ ಪಾಲ್ಗೊಂಡಿದ್ದ ಯೋಧ ದಿ.ಕರ್ನಲ್‌ ಎಂ.ಬಿ.ರವೀಂದ್ರನಾಥ್‌ ಅವರ ಸ್ಮರಣಾರ್ಥ ವಿಶೇಷ ಕಾರ್ಯಕ್ರಮ ಆಯೋಜಿಸಿದ್ದರು.

Vijaya Karnataka 23 Apr 2018, 10:58 pm
ಬೆಂಗಳೂರು: ನಗರದ ಸೈನಿಕ ಶಾಲೆಯ ಹಳೇ ವಿದ್ಯಾರ್ಥಿಗಳು ಕಾರ್ಗಿಲ್‌ ಯುದ್ಧದಲ್ಲಿ ಪಾಲ್ಗೊಂಡಿದ್ದ ಯೋಧ ದಿ.ಕರ್ನಲ್‌ ಎಂ.ಬಿ.ರವೀಂದ್ರನಾಥ್‌ ಅವರ ಸ್ಮರಣಾರ್ಥ ವಿಶೇಷ ಕಾರ್ಯಕ್ರಮ ಆಯೋಜಿಸಿದ್ದರು.
Vijaya Karnataka Web a b rabindranaths commemorative special programrne
ದಿ. ಕರ್ನಲ್‌ ಎಂ.ಬಿ. ರವೀಂದ್ರನಾಥ್‌ ಸ್ಮರಣಾರ್ಥ ವಿಶೇಷ ಕಾರ್ಯಕ್ರಮ


ಸೈನಿಕ ಶಾಲೆ ಆವರಣದಲ್ಲಿ ಭಾನುವಾರ ನಡೆದ ಈ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸಂಸದ ರಾಜೀವ್‌ ಚಂದ್ರಶೇಖರ್‌ ಅವರು ಭಾಗವಹಿಸಿ, ದಿ. ಕರ್ನಲ್‌ ಎಂ.ಬಿ.ರವೀಂದ್ರನಾಥ್‌ ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಿದರು. ನಂತರ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿ, ಸಾಂತ್ವನ ಹೇಳಿದರು.

ದಿ.ಕರ್ನಲ್‌ ರವೀದ್ರನಾಥ್‌ ಅವರು ನಮ್ಮೆಲ್ಲರ ಹೆಮ್ಮೆಯ ಯೋಧ. ಅಂತಹ ನಾಯಕ ಭಾರತ ಹಾಗೂ ಕರ್ನಾಟಕದ ವೀರಪುತ್ರ. ನಾವಿಂದು ಅವರನ್ನು ಕಳೆದುಕೊಂಡಿದ್ದು, ಅದರಿಂದ ದೊಡ್ಡ ನಷ್ಟವೇ ಅನುಭವಿಸಿದಂತಾಗಿದೆ. ಅಂತಹವರನ್ನು ಎಂದಿಗೂ ಮರೆಯಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಅವರಿಗೆ ಗೌರವ ನಮನ ಸಲ್ಲಿಸಿದ ಕುರಿತು ತಮ್ಮ ಟ್ವಿಟರ್‌ ಖಾತೆಯಲ್ಲಿ ಫೋಟೋ ಹಾಗೂ ಆ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದು, ಅಲ್ಲಿಯೂ ಮತ್ತೊಮ್ಮೆ ಗೌರವ ಸಲ್ಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ