ಆ್ಯಪ್ನಗರ

ಇನ್ಮುಂದೆ ಬೆಂಗಳೂರಿನ ಟ್ರಾಫಿಕ್‌ ಸಿಗ್ನಲ್‌ಗಳಲ್ಲಿ ಭಿಕ್ಷೆ ಬೇಡುವಂತಿಲ್ಲ: ಕಮೀಷನರ್‌ ಆದೇಶ

​​ಹಣ ನೀಡಲು ನಿರಾಕರಿಸುವ ವೇಳೆ ವಾಹನ ಸವಾರರ ಜೊತೆ ಅನುಚಿತ ವರ್ತನೆ ತೋರಿ ತೊಂದರೆಯಾಗುತ್ತದೆ. ಈ ಕಾರಣದಿಂದಾಗಿ ಸಿಗ್ನಲ್‍ಗಳಲ್ಲಿ ಭಿಕ್ಷಾಟನೆ ಮಾಡುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ಕಮಿಷನರ್ ಸೂಚನೆ ನೀಡಿದ್ದಾರೆ. ಬಿಕ್ಷಾಟನೆ ತಡೆಯಲು ಕಮಿಷನರ್ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.

Vijaya Karnataka Web 16 Feb 2021, 12:16 pm
ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಭಿಕ್ಷುಕರಿಗೇನು ಕಮ್ಮಿ ಇಲ್ಲ. ಅದರಲ್ಲೂ ಟ್ರಾಫಿಕ್‌ ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುತ್ತ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿರುವ ಘಟನೆಗಳು ನಡೆಯುತ್ತಲೇ ಇರುತ್ತದೆ. ಇದೀಗ ಅಂತಹ ಕಾರ್ಯಗಳಿಗೆ ಬ್ರೇಕ್‌ ಹಾಕಲು ಪೊಲೀಸ್ ಕಮಿಷನರ್ ಕಮಲ್ ಪಂತ್ ಮುಂದಾಗಿದ್ದಾರೆ.
Vijaya Karnataka Web begging in signal


ಹೌದು, ಟ್ರಾಫಿಕ್ ಸಿಗ್ನಲ್‍ಗಳಲ್ಲಿ ಇನ್ನು ಮುಂದೆ ಭಿಕ್ಷಾಟನೆ ಮಾಡುವಂತೆ ಇಲ್ಲ. ಸಿಗ್ನಲ್‍ಗಳಲ್ಲಿ ಭಿಕ್ಷೆ ಬೇಡುವುದು ಹಾಗೂ ಹಣ ವಸೂಲಿ ಮಾಡುವುದು ತಡೆಯುವಂತೆ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಟ್ರಾಫಿಕ್‌ ಪೊಲೀಸರಿಗೆ ಪ್ರಕಟಣೆ ಹೊರಡಿಸಿರುವ ಆಯುಕ್ತರು, ಭಿಕ್ಷಾಟನೆಯಿಂದ ಟ್ರಾಫಿಕ್ ಸಮಸ್ಯೆ ಹಾಗೂ ಸಾರ್ವಜನಿಕರ ಜೊತೆ ಅನುಚಿತ ವರ್ತನೆ ನಡೆಯುತ್ತಿದೆ.

ಹಣ ನೀಡಲು ನಿರಾಕರಿಸುವ ವೇಳೆ ವಾಹನ ಸವಾರರ ಜೊತೆ ಅನುಚಿತ ವರ್ತನೆ ತೋರಿ ತೊಂದರೆಯಾಗುತ್ತದೆ. ಈ ಕಾರಣದಿಂದಾಗಿ ಸಿಗ್ನಲ್‍ಗಳಲ್ಲಿ ಭಿಕ್ಷಾಟನೆ ಮಾಡುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ಕಮಿಷನರ್ ಸೂಚನೆ ನೀಡಿದ್ದಾರೆ. ಬಿಕ್ಷಾಟನೆ ತಡೆಯಲು ಕಮಿಷನರ್ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ಅಕ್ಕನ ಜೊತೆ ಜಗಳ ಮಾಡುತ್ತಿದ್ದ ಬಾವನನ್ನು ಆಕೆಯ ಎದುರೇ ಕೊಂದ ಸಹೋದರ!

ಲಾ ಆಂಡ್ ಆರ್ಡರ್ ಹಾಗೂ ಟ್ರಾಫಿಕ್ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನೆಡಸಿ ಕ್ರಮ ಕೈಗೊಳ್ಳುಬೇಕು. ಎಲ್ಲಾ ಡಿಸಿಪಿಗಳು ತಮ್ಮ ವಿಭಾಗಗಳಲ್ಲಿ ಭಿಕ್ಷೆ ಬೇಡುವುದನ್ನು ತಪ್ಪಿಸ ಬೇಕು ಎಂದು ಪತ್ರದ ಮೂಲಕ ಆಯುಕ್ತರು ಸೂಚನೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ