ಆ್ಯಪ್ನಗರ

ಪಾಲಿಕೆ ಅಧಿಕಾರಿಗಳಿಗೆ ಹಾಜರಾತಿಗೆ ಆಧಾರ್‌ ಲಿಂಕ್?

ಅಂದುಕೊಂಡಂತೆ ಆದರೆ, ಪಾಲಿಕೆಯಲ್ಲಿ ಅಧಿಕಾರಿಗಳಿಗೆ ಬಯೋಮೆಟ್ರಿಕ್‌ ಹಾಜರಾತಿಗೂ ಆಧಾರ್‌ ಲಿಂಕ್‌ ಮಾಡುವ ವ್ಯವಸ್ಥೆ ಜಾರಿಗೊಳ್ಳಲಿದೆ.

Bangalore Mirror Bureau 9 Jul 2018, 5:11 pm
ಬೆಂಗಳೂರು: ಅಂದುಕೊಂಡಂತೆ ಎಲ್ಲವೂ ನಡೆದರೆ, ಪಾಲಿಕೆಯಲ್ಲಿನ ಅಧಿಕಾರಿಗಳಿಗೆ ಬಯೋಮೆಟ್ರಿಕ್‌ ಹಾಜರಾತಿಗೆ ಆಧಾರ್‌ ಲಿಂಕ್‌ ಮಾಡುವ ವ್ಯವಸ್ಥೆ ಜಾರಿಗೊಳ್ಳಲಿದೆ.
Vijaya Karnataka Web bbmp


ಆಡಳಿತಾತ್ಮಕ ಸ್ಥಾಯಿ ಸಮಿತಿ ಅಧ್ಯಕ್ಷ ಲಕ್ಷ್ಮೀ ನಾರಾಯಣ ಇಂತಹ ಹೊಸ ವ್ಯವಸ್ಥೆ ಜಾರಿಗೊಳಿಸಲು ಪ್ರಸ್ತಾಪಿಸಿದ್ದಾರೆ. ಅನೇಕ ಅಧಿಕಾರಿಗಳು ಸರಿಯಾಗಿ ಪಾಲಿಕೆಯ ಕಚೇರಿಯಲ್ಲಿ ಇರುತ್ತಿಲ್ಲ. ದಿನಕ್ಕೆ ಕೇವಲ 3 -4 ಗಂಟೆಗಳಷ್ಟೇ ಕಚೇರಿಯಲ್ಲಿರುತ್ತಾರೆ. ಸಾರ್ವಜನಿಕರಿಂದ ಈ ನಿಟ್ಟಿನಲ್ಲಿ ಅನೇಕ ದೂರುಗಳು ದಾಖಲಾಗಿರುವುದರಿಂದ ಹೊಸ ಕ್ರಮ ಅನುಸರಿಸಲು ಮುಂದಾಗಿರುವುದಾಗಿ ಲಕ್ಷ್ಮೀನಾರಾಯಣ ಹೇಳಿದ್ದಾರೆ.

ಇತ್ತೀಚೆಗೆ ಪೌರ ಕಾರ್ಮಿಕರಿಗೆ ಬಯೋಮೆಟ್ರಿಕ್‌ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಿರುವ ಪಾಲಿಕೆ, ಕಾರ್ಮಿಕರ ಹಾಜರಾತಿಯನ್ನು ಶಿಸ್ತು ಬದ್ಧವಾಗಿ ನಿರ್ವಹಿಸುತ್ತಿದೆ. ಒಂದು ವೇಳೆ ಕಾರ್ಮಿಕರು ಪಂಚ್‌ ಮಾಡಲು ಮರೆತರೂ, ರಜೆ ಎಂದು ಹಾಕಲಾಗುತ್ತಿದೆ. ಹೀಗಾಗಿ ಅಧಿಕಾರಿಗಳೂ ಹಾಜರಾತಿಯಲ್ಲಿ ಶಿಸ್ತು ಪಾಲಿಸುವಂತೆ ಮಾಡಲು ಕ್ರಮ ಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವ್ಯವಸ್ಥೆ ಜಾರಿಗೊಳಿಸುವ ಸಂಬಂಧ ಅನೇಕ ಬಾರಿ ಪತ್ರ ಬರೆಯಾಗಿದ್ದರೂ, ಯಾವುದೇ ಪ್ರಯೋಜನ ಆಗಿಲ್ಲ. ಈ ಬಾರಿ ಸಚಿವರಲ್ಲೇ ಮಾತನಾಡುವುದಾಗಿ ಅವರು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ