ಆ್ಯಪ್ನಗರ

ಪ್ರತ್ಯೇಕ ಅಪಘಾತ: ಇಬ್ಬರ ಸಾವು

ನಗರದಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮಹಿಳೆ ಮತ್ತು ಸಾಫ್ಟ್‌ವೇರ್‌ ಎಂಜಿನಿಯರ್‌ ಮೃತಪಟ್ಟಿದ್ದಾರೆ.

Vijaya Karnataka 3 May 2019, 5:00 am
ಬೆಂಗಳೂರು: ನಗರದಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮಹಿಳೆ ಮತ್ತು ಸಾಫ್ಟ್‌ವೇರ್‌ ಎಂಜಿನಿಯರ್‌ ಮೃತಪಟ್ಟಿದ್ದಾರೆ.
Vijaya Karnataka Web accident two died
ಪ್ರತ್ಯೇಕ ಅಪಘಾತ: ಇಬ್ಬರ ಸಾವು


ಕೆಂಗೇರಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಗಂಗರಾಜಮ್ಮ (45) ಹಾಗೂ ಮಡಿವಾಳ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಮಧ್ಯಪ್ರದೇಶ ಮೂಲದ ಶಿವ ಬಾಂಗಲ್‌ (26) ಎಂಬುವವರು ಮೃತಪಟ್ಟಿದ್ದಾರೆ.

ಟ್ರಿಪಲ್‌ ರೈಡ್‌ನಲ್ಲಿ ತೆರಳುತ್ತಿದ್ದಳು.

ಹಾರೋಕೇತನಹಳ್ಳಿ ನಿವಾಸಿ ಗಂಗರಾಜು ಹಾಗೂ ಇವರ ಪತ್ನಿ ಗಂಗಲಕ್ಷ್ಮಮ್ಮ ಮತ್ತು ಇವರ ಸಂಬಂಧಿ ರಾಜಣ್ಣ ಅವರು ಒಂದೇ ಬೈಕಿನಲ್ಲಿ ಕನಕಪುರ ಸಮೀಪದ ಸೋಮನಹಳ್ಳಿಗೆ ಹೋಗಿ ವಾಪಸ್ಸಾಗುತ್ತಿದ್ದರು. ಬುಧವಾರ ಸಂಜೆ 5 ಗಂಟೆ ಸುಮಾರಿಗೆ ದೊಡ್ಡಬೆಲೆ ಸೇತುವೆ ಬಳಿ ಬರುತ್ತಿದ್ದಂತೆ ಎದುರು ದಿಕ್ಕಿನಿಂದ ನುಗ್ಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಅಪಘಾತಕ್ಕೆ ತುತ್ತಾಗಿ ಬೈಕಿನಲ್ಲಿದ್ದ ಮೂವರೂ ನೆಲಕ್ಕೆ ಅಪ್ಪಳಿಸಿ ಬಿದ್ದಿದ್ದರು. ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲಿ ಗಂಗರಾಜಮ್ಮ ಮೃತಪಟ್ಟಿದ್ದಾರೆ. ಉಳಿದಿಬ್ಬರೂ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದು ಇಬ್ಬರ ಚಿಕಿತ್ಸೆಯೂ ಮುಂದುವರೆದಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಅಪರಿಚತ ವಾಹನ ಡಿಕ್ಕಿ:

ಶಿವ ಬಾಂಗಲ್‌ ಅವರು ಬುಧವಾರ ರಾತ್ರಿ 10.30ರ ಸುಮಾರಿಗೆ ಹೊಸೂರು ರಸ್ತೆಯ ರೂಪೇನ ಅಗ್ರಹಾರದ ಮಹೇಂದ್ರ ಶೋರೂಂ ಎದುರು ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿ ಆಗಿದೆ. ಡಿಕ್ಕಿಯ ರಭಸಕ್ಕೆ ಮೃತದೇಹ 10 ಮೀಟರ್‌ನಷ್ಟು ದೂರಕ್ಕೆ ಬಿದ್ದಿತ್ತು. ಸ್ಥಳೀಯರು ಸಮೀಪಕ್ಕೆ ಬರುವುದರೊಳಗೆ ವಾಹನ ಸ್ಥಳದಿಂದ ಪರಾರಿ ಆಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ