ಆ್ಯಪ್ನಗರ

ದ್ವಿಚಕ್ರವಾಹನಕ್ಕೆ ಬಸ್‌ ಡಿಕ್ಕಿ: ಮಹಿಳೆ ಸಾವು

ಬೆಂಗಳೂರು ಹೊಸೂರು ರಾಷ್ಟ್ರೀಯ ಹೆದ್ದಾರಿ ಚಂದಾಪುರ ಬಳಿ ತಮಿಳುನಾಡು ಸಾರಿಗೆ ಬಸ್‌, ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

Vijaya Karnataka 25 Apr 2019, 5:00 am
ಚಂದಾಪುರ: ಬೆಂಗಳೂರು ಹೊಸೂರು ರಾಷ್ಟ್ರೀಯ ಹೆದ್ದಾರಿ ಚಂದಾಪುರ ಬಳಿ ತಮಿಳುನಾಡು ಸಾರಿಗೆ ಬಸ್‌, ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
Vijaya Karnataka Web accident1


ರೇಣುಕಮ್ಮ(55) ಮೃತಪಟ್ಟವರು. ಅವರು ಆಂಧ್ರಪ್ರದೇಶದ ಮದನಪಲ್ಲಿ ಮೂಲದವರಾಗಿದ್ದು, ನೆರಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ. ಮಹಿಳೆ ಹಾಗೂ ಅವರ ಪತಿ ಬೈಕ್‌ನಲ್ಲಿ ಹೊಸೂರು ಕಡೆಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಚಂದಾಪುರದ ಫ್ಲೈಓವರ್‌ನ ಕೊನೆಯಲ್ಲಿ ಹಿಂಬದಿಯಿಂದ ಬಂದ ಬಸ್‌ ಡಿಕ್ಕಿ ಹೊಡೆದಿದೆ. ಕೆಳಕ್ಕೆ ಬಿದ್ದ ರೇಣುಕಮ್ಮ ಅವರ ಮೇಲೆ ಬಸ್‌ನ ಚಕ್ರ ಚಲಿಸಿದ ಕಾರಣ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೂರ್ಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ