ಆ್ಯಪ್ನಗರ

ಅಧಿಕ ಬಡ್ಡಿ, ದೂರು ನೀಡಿದರೆ ಕ್ರಮ ಕೈಗೊಳ್ಳಿ

ಹೆಚ್ಚು ಪ್ರಮಾಣದಲ್ಲಿ ಬಡ್ಡಿ ವಸೂಲಿ ಮಾಡುವುದು ಮತ್ತು ಸಾಲ ಮರುಪಾವತಿಗಾಗಿ ಸಾರ್ವಜನಿಕರು ಹಾಗೂ ರೈತರನ್ನು ಶೋಷಿಸುತ್ತಿರುವ ಕುರಿತು ಸಹಕಾರ ಇಲಾಖೆಯ ರಿಜಿಸ್ಟ್ರಾರ್‌/ ಸಹಾಯಕ ರಿಜಿಸ್ಟ್ರಾರ್‌ ಮಟ್ಟದ ಅಧಿಕಾರಿಗಳಿಂದ ದೂರು ಬಂದರೆ ಮಾತ್ರ ಪ್ರಕರಣ ದಾಖಲಿಸಬೇಕು ಎಂದು ಪೊಲೀಸ್‌ ಮಹಾ ನಿರ್ದೇಶಕಿ ನೀಲಮಣಿ ಎನ್‌.ರಾಜು ಆದೇಶ ಹೊರಡಿಸಿದ್ದಾರೆ.

Vijaya Karnataka 14 Oct 2018, 5:00 am
ಬೆಂಗಳೂರು: ಹೆಚ್ಚು ಪ್ರಮಾಣದಲ್ಲಿ ಬಡ್ಡಿ ವಸೂಲಿ ಮಾಡುವುದು ಮತ್ತು ಸಾಲ ಮರುಪಾವತಿಗಾಗಿ ಸಾರ್ವಜನಿಕರು ಹಾಗೂ ರೈತರನ್ನು ಶೋಷಿಸುತ್ತಿರುವ ಕುರಿತು ಸಹಕಾರ ಇಲಾಖೆಯ ರಿಜಿಸ್ಟ್ರಾರ್‌/ ಸಹಾಯಕ ರಿಜಿಸ್ಟ್ರಾರ್‌ ಮಟ್ಟದ ಅಧಿಕಾರಿಗಳಿಂದ ದೂರು ಬಂದರೆ ಮಾತ್ರ ಪ್ರಕರಣ ದಾಖಲಿಸಬೇಕು ಎಂದು ಪೊಲೀಸ್‌ ಮಹಾ ನಿರ್ದೇಶಕಿ ನೀಲಮಣಿ ಎನ್‌.ರಾಜು ಆದೇಶ ಹೊರಡಿಸಿದ್ದಾರೆ.
Vijaya Karnataka Web action against illegal money vendor
ಅಧಿಕ ಬಡ್ಡಿ, ದೂರು ನೀಡಿದರೆ ಕ್ರಮ ಕೈಗೊಳ್ಳಿ


'ಕೇವಲ ಅಧಿಕ ಬಡ್ಡಿ ಪಡೆಯುತ್ತಿದ್ದರೆ ಎಂಬ ಕಾರಣಕ್ಕೆ ಸ್ವಯಂಪ್ರೇರಿತವಾಗಿ ಕೇಸ್‌ ದಾಖಲು ಮಾಡಬಾರದು,' ಎಂದು ಅ.3ರಂದು ಆದೇಶ ಹೊರಡಿಸಲಾಗಿದೆ. ಇದು 'ಕರ್ನಾಟಕ ಋುಣಭಾರ ಮಸೂದೆ-2018' ಜಾರಿಯಾಗುವ ಪೂರ್ವದಲ್ಲಿ ಬಡ್ಡಿ ವ್ಯವಹಾರದ ಕುರಿತು ಪೊಲೀಸ್‌ ಇಲಾಖೆಯಿಂದ ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಹೊರಡಿಸಲಾಗಿದ್ದ ಸುತ್ತೋಲೆಯನ್ನು ತಿದ್ದುಪಡಿ ಮಾಡಿ ಆದೇಶ ಹೊರಡಿಸಲಾಗಿದೆ. ಅಧಿಕ ಬಡ್ಡಿ ವಸೂಲಿ ಮಾಡುತ್ತಾರೆಂದು ನೊಂದವರು ದೂರು ನೀಡಿದರೆ, ಬಡ್ಡಿಗಾಗಿ ಬೆದರಿಕೆ, ಗಲಾಟೆ ಸೇರಿದಂತೆ ಇನ್ನಿತರ ಆರೋಪಗಳ ಕುರಿತು ಐಪಿಸಿ ಕಲಂಗಳ ಅಡಿ ಆರೋಪ ಇದ್ದರೆ ಕ್ರಮ ಕೈಗೊಳ್ಳಲು ಯಾವುದೇ ಸಮಸ್ಯೆ ಇಲ್ಲ ಎಂದು ನಗರದ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ