ಆ್ಯಪ್ನಗರ

Air Show Bengaluru: ಬೆಂಗಳೂರಿನಲ್ಲಿ ಫೆ.13 ರಿಂದ ಏರ್‌ ಶೋ

ಹಲವು ದೇಶ, ವಿದೇಶಗಳ ಯುದ್ಧ ವಿಮಾನಗಳ ಮೈನವಿರೇಳಿಸುವ ಹಲವು ವೈಶಿಷ್ಟ್ಯಗಳೊಂದಿಗೆ ವೈಮಾನಿಕ ಪ್ರದರ್ಶನ ನಡೆಯಲಿದ್ದು, ಬಾನಂಗಳದಲ್ಲಿ ಲೋಹದ ಹಕ್ಕಿಗಳು ಬಣ್ಣದ ಚಿತ್ತಾರ ಬಿಡಿಸಲಿವೆ. ಅದ್ಭುತ ದೃಶ್ಯದ ವೈಮಾನಿಕ ಪ್ರದರ್ಶನ ನೋಡುವುದೇ ಕಣ್ಣಿಗೆ ಹಬ್ಬ.

Edited byಸೌಮ್ಯಶ್ರೀ ಮಾರ್ನಾಡ್ | Vijaya Karnataka Web 28 Nov 2022, 7:46 am

ಹೈಲೈಟ್ಸ್‌:

  • ಫೆಬ್ರವರಿ 13 ರಿಂದ 17 ರವರೆಗೆ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಪ್ರತಿಷ್ಠಿತ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ
  • ಕೇಂದ್ರ ರಕ್ಷಣಾ ಸಚಿವಾಲಯದ ಭಾಗವಾದ ‘ಡಿಫೆನ್ಸ್‌ ಎಕ್ಸಿಬಿಷನ್‌ ಆರ್ಗನೈಸೇಷನ್‌’ ವತಿಯಿಂದ ಈ ವೈಮಾನಿಕ ಪ್ರದರ್ಶನ ನಡೆಯಲಿದೆ.
  • ಭಾರತೀಯ ಏರೋಸ್ಪೇಸ್‌ ಉದ್ಯಮದ ಹಲವಾರು ತಯಾರಕರು ಮತ್ತು ಸೇವಾ ಪೂರೈಕೆದಾರರು ಭವಿಷ್ಯದ ಗ್ರಾಹಕರನ್ನು ಭೇಟಿ ಮಾಡಲಿದ್ದಾರೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Airshow
ಬೆಂಗಳೂರು: ಏಷ್ಯಾದ ಅತಿದೊಡ್ಡ ಏರ್‌ ಶೋ ‘ಏರೋ ಇಂಡಿಯಾ- 2023’ ಫೆಬ್ರವರಿ 13 ರಿಂದ 17 ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. 14 ನೇ ಆವೃತ್ತಿಯ ಏರ್‌ ಶೋ ಯಲಹಂಕ ವಾಯುನೆಲೆಯಲ್ಲಿ ನಡೆಯಲಿದೆ ಎಂದು ಕೇಂದ್ರ ರಕ್ಷಣಾ ಇಲಾಖೆ ಮಾಹಿತಿ ನೀಡಿದೆ.
1996 ರಿಂದ ದ್ವೈ ವಾರ್ಷಿಕವಾಗಿ ನಡೆಯುವ ಏರ್‌ ಶೋಗೆ ಆತಿಥ್ಯ ವಹಿಸಿರುವ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ 14ನೇ ಆವೃತ್ತಿಯೂ ನಡೆಯಲಿದೆ ಎಂದು ರಕ್ಷಣಾ ಉತ್ಪಾದನಾ ಸಂಸ್ಥೆ ಹೇಳಿದೆ. ಏರ್‌ ಶೋನ ಇತರ ಮಾಹಿತಿ, ಪಾಲ್ಗೊಳ್ಳಲಿರುವ ರಾಷ್ಟ್ರಗಳ ಬಗ್ಗೆ ಯಾವುದೇ ವಿವರಗಳನ್ನು ಸಚಿವಾಲಯ ಪ್ರಕಟಿಸಿಲ್ಲ.

ಏರ್‌ಶೋ ಅಗ್ನಿ ದುರಂತದಲ್ಲಿ ಕಾರು ಭಸ್ಮ: ಹೊಸ ಕಾರು ಖರೀದಿಗೆ ಪರಿಹಾರ ಕೋರಿದ್ದ ಅರ್ಜಿ ವಜಾ!

ಕೇಂದ್ರ ರಕ್ಷಣಾ ಇಲಾಖೆಯು ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಸುವ ಅತಿ ದೊಡ್ಡ ವೈಮಾನಿಕ ಪ್ರದರ್ಶನ ಇದಾಗಿದ್ದು, ಏರ್‌ ಶೋ ಪ್ರದರ್ಶನ ಸಿಲಿಕಾನ್‌ ಸಿಟಿ ಬೆಂಗಳೂರಿನ ಹೆಗ್ಗಳಿಕೆಗಳಲ್ಲೊಂದಾಗಿದೆ.

ಕೇಂದ್ರ ರಕ್ಷಣಾ ಸಚಿವಾಲಯದ ಭಾಗವಾದ ‘ಡಿಫೆನ್ಸ್‌ ಎಕ್ಸಿಬಿಷನ್‌ ಆರ್ಗನೈಸೇಷನ್‌’ ವತಿಯಿಂದ ಈ ವೈಮಾನಿಕ ಪ್ರದರ್ಶನ ನಡೆಯಲಿದೆ. ಹಲವು ದೇಶ, ವಿದೇಶಗಳ ಯುದ್ಧ ವಿಮಾನಗಳ ಮೈನವಿರೇಳಿಸುವ ಹಲವು ವೈಶಿಷ್ಟ್ಯಗಳೊಂದಿಗೆ ವೈಮಾನಿಕ ಪ್ರದರ್ಶನ ನಡೆಯಲಿದ್ದು, ಬಾನಂಗಳದಲ್ಲಿ ಲೋಹದ ಹಕ್ಕಿಗಳು ಬಣ್ಣದ ಚಿತ್ತಾರ ಬಿಡಿಸಲಿವೆ. ಅದ್ಭುತ ದೃಶ್ಯದ ವೈಮಾನಿಕ ಪ್ರದರ್ಶನ ನೋಡುವುದೇ ಕಣ್ಣಿಗೆ ಹಬ್ಬ.

ಏರೋ ಇಂಡಿಯಾ 2021 ಸೂಪರ್ ಸಕ್ಸಸ್: ಭಾರತ ಆತ್ಮನಿರ್ಭರತೆಯತ್ತ ಹೆಜ್ಜೆ ಇಟ್ಟಿದೆ ಎಂದರು ರಾಷ್ಟ್ರಪತಿ
ಇದರಲ್ಲಿ ಭಾರತೀಯ ಏರೋಸ್ಪೇಸ್‌ ಉದ್ಯಮದ ಹಲವಾರು ತಯಾರಕರು ಮತ್ತು ಸೇವಾ ಪೂರೈಕೆದಾರರು ಭವಿಷ್ಯದ ಗ್ರಾಹಕರನ್ನು ಭೇಟಿ ಮಾಡಲಿದ್ದಾರೆ. ಏರೋಸ್ಪೇಸ್‌ ಉದ್ಯಮದ ಬೆಳೆವಣಿಗೆಗೆ ಈ ಏರೋ ಇಂಡಿಯಾ ಪ್ರದರ್ಶನ ಉತ್ತಮ ವೇದಿಕೆಯೂ ಆಗಿದೆ.

ಕಳೆದ ಬಾರಿಯ ದುರಂತ
ಕಳೆದ ಬಾರಿಯ ಅಂದರೆ 2019 ರಲ್ಲಿ ಬೆಂಗಳೂರಿನಲ್ಲಿ ನಡೆದ ಏರೋ ಇಂಡಿಯಾ ವೇಳೆ ಸಂಭವಿಸಿದ ಅಗ್ನಿ ಅವಗಢದಲ್ಲಿ ಕಾರುಗಳು ಬೆಂಕಿ ಗಾಹುತಿಯಾಗಿದ್ದವು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕರಿಗೆ ವಿಮಾ ಕಂಪನಿಗಳು ಪರಿಹಾರ ವಿತರಣೆ ಮಾಡಿದ್ದವು.
ದುರಂತ ಸಂಭವಿಸಿದ ತಕ್ಷಣವೇ ವಿಮಾ ಕಂಪನಿಗಳು ಹಾಗೂ ಆರ್.ಟಿ.ಓ ಅಧಿಕಾರಿಗಳು ಕೌಂಟರ್‌ಗಳನ್ನು ತೆರೆದು ಅರ್ಜಿಗಳನ್ನು ಸ್ವೀಕರಿಸಿದ್ದವು. ದುರಂತದಲ್ಲಿ 277 ವಾಹನಗಳು ಬೆಂಕಿಗೆ ಆಹುತಿಯಾಗಿದ್ದು ಇದರಲ್ಲಿ 251 ಕಾರುಗಳು ಸಂಪೂರ್ಣ ಹಾಗೂ 26 ಕಾರುಗಳು ಭಾಗಶಃ ಸುಟ್ಟು ಹೋಗಿದ್ದವು.
ಲೇಖಕರ ಬಗ್ಗೆ
ಸೌಮ್ಯಶ್ರೀ ಮಾರ್ನಾಡ್
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಡಿಜಿಟಲ್ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರರಾಗಿ 7 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ರಾಜಕೀಯ, ನಾಗರಿಕರ ಸಮಸ್ಯೆಗಳು, ಬೆಂಗಳೂರು ಸ್ಥಳೀಯ ಆಡಳಿತದ ಕುಂದುಕೊರತೆಗಳ ವರದಿ, ವಿಶೇಷ ವ್ಯಕ್ತಿಗಳ ಸಂದರ್ಶನಗಳನ್ನು ಮಾಡುತ್ತಿದ್ದಾರೆ. ರಂಗಭೂಮಿ ಹಾಗೂ ಯಕ್ಷಗಾನ ಇವರ ಇತರ ಆಸಕ್ತಿಕರ ಕ್ಷೇತ್ರಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ