ಆ್ಯಪ್ನಗರ

ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮೂಲಸೌಕರ್ಯ ನಿರ್ಲಕ್ಷ್ಯ ಆರೋಪ: ವಿವರಣೆ ಕೇಳಿದ ಹೈಕೋರ್ಟ್‌

ಮಾರುಕಟ್ಟೆಯ ಅವ್ಯವಸ್ಥೆ ಸರಿಪಡಿಸುವಂತೆ ಸ್ಥಳೀಯ ಹೂವು ಬೆಳೆಗಾರರು ಮತ್ತು ವ್ಯಾಪಾರಸ್ಥರು ವೆಂಕಟೇಶ್‌ ಮತ್ತು ನಾಗೇಶ್‌ ಅವರಿಗೆ 2021ರ ನ.24ರಂದೇ ಮನವಿ ಕೊಟ್ಟಿದ್ದರೂ ಪ್ರಯೋಜನವಾಗಿಲ್ಲ. ಮಾರುಕಟ್ಟೆಯಲ್ಲಿರುವ ಕಸ, ರಸ್ತೆ, ಬೀದಿ ದೀಪ, ಗೇಟ್‌ಗಳನ್ನು ಅಳವಡಿಸಿ ವಾಹನಗಳ ಸಂಚಾರ ನಿರ್ಬಂಧಿಸಬೇಕು ಎಂದು ಮನವಿ ಮಾಡಲಾಗಿದ್ದರೂ ಅಧಿಕಾರಿಗಳು ಈತನಕ ಪರಿಗಣಿಸಿಲ್ಲ ಎಂದು ವಿವರಿಸಲಾಗಿದೆ.

Vijaya Karnataka 14 Sep 2022, 11:23 pm
ಬೆಂಗಳೂರು: ಚಿಕ್ಕಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸ್ಥಳೀಯ ಹೂ ಬೆಳೆಗಾರರಿಗೆ ಮೂಲಸೌಕರ್ಯ ಒದಗಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆಂಬ ಆರೋಪ ಸಂಬಂಧ ಇಬ್ಬರು ಅಧಿಕಾರಿಗಳನ್ನು ಪ್ರತಿವಾದಿಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿರುವ ಬಗ್ಗೆ ಹೈಕೋರ್ಟ್‌ ಅರ್ಜಿದಾರರಿಂದ ವಿವರಣೆ ಕೇಳಿದೆ.
Vijaya Karnataka Web karnataka-high-court-bccl


ಚಿಕ್ಕಬಳ್ಳಾಪುರ ಕಸಬಾ ಹೋಬಳಿಯ ಚಂಬಳ್ಳಿ ಗ್ರಾಮದ ಎಸ್‌.ಕ್ಯಾತಪ್ಪ ಹಾಗೂ ತಿರುಮಲ ಫ್ಲವರ್‌ ಸ್ಟಾಲ್‌ ಮಾಲೀಕ ಜಿ.ಎಂ.ಶ್ರೀಧರ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ಪೀಠ ಬುಧವಾರ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಾದಿಸಿದ ವಕೀಲ ಎಂ.ಶಿವಪ್ರಕಾಶ್‌, ಪ್ರತಿವಾದಿಗಳಾಗಿ ಹೆಸರು ಸೇರಿಸಲಾಗಿರುವ ಇಬ್ಬರು ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಎಪಿಎಂಸಿ ದುಸ್ಥಿತಿಗೆ ತಲುಪಿದೆ ಎಂದು ದೂರಿದರು. ಹಾಗಾಗಿ ನ್ಯಾಯಪೀಠ, ಪ್ರತಿವಾದಿಗಳಿಗೆ ನೋಟಿಸ್‌ ಜಾರಿಯಾದ ಬಗ್ಗೆ ವಿವರಣೆ ಕೇಳಿ ವಿಚಾರಣೆಯನ್ನು ಸೆ. 19ಕ್ಕೆ ಮುಂದೂಡಿದೆ.
ಬಾಲಕನ ಅಪಹರಿಸಿ ಬಲವಂತವಾಗಿ ಲಿಂಗ ಪರಿವರ್ತನೆ: ವೈದ್ಯೆ ವಿರುದ್ಧ ಕ್ರಿಮಿನಲ್‌ ಕೇಸ್‌ ರದ್ದತಿಗೆ ಹೈಕೋರ್ಟ್ ನಕಾರ
ಚಿಕ್ಕಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ವೈಫಲ್ಯದಿಂದಾಗಿ ಇಡೀ ಪ್ರದೇಶ ಕೊಳಚೆಯಿಂದ ಕೂಡಿದೆ. ಈ ವೈಫಲ್ಯಕ್ಕೆ ಕಾರ್ಯದರ್ಶಿ ವೆಂಕಟೇಶ್‌ ಮತ್ತು ಹೆಚ್ಚುವರಿ ನಿರ್ದೇಶಕ (ಯೋಜನೆ) ಕೆ.ಎಂ.ನಾಗೇಶ್‌ ಕಾರಣವಾಗಿದ್ದು, ಅವರ ವಿರುದ್ಧ ಸೂಕ್ತ ಕ್ರಮಕ್ಕೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಮಾರುಕಟ್ಟೆಯ ಅವ್ಯವಸ್ಥೆ ಸರಿಪಡಿಸುವಂತೆ ಸ್ಥಳೀಯ ಹೂವು ಬೆಳೆಗಾರರು ಮತ್ತು ವ್ಯಾಪಾರಸ್ಥರು ವೆಂಕಟೇಶ್‌ ಮತ್ತು ನಾಗೇಶ್‌ ಅವರಿಗೆ 2021ರ ನ.24ರಂದೇ ಮನವಿ ಕೊಟ್ಟಿದ್ದರೂ ಪ್ರಯೋಜನವಾಗಿಲ್ಲ. ಮಾರುಕಟ್ಟೆಯಲ್ಲಿರುವ ಕಸ, ರಸ್ತೆ, ಬೀದಿ ದೀಪ, ಗೇಟ್‌ಗಳನ್ನು ಅಳವಡಿಸಿ ವಾಹನಗಳ ಸಂಚಾರ ನಿರ್ಬಂಧಿಸಬೇಕು ಎಂದು ಮನವಿ ಮಾಡಲಾಗಿದ್ದರೂ ಅಧಿಕಾರಿಗಳು ಈತನಕ ಪರಿಗಣಿಸಿಲ್ಲ' ಎಂದು ವಿವರಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ