ಆ್ಯಪ್ನಗರ

ಆರ್‌ಆರ್‌ ನಗರದಲ್ಲಿ ಮತದಾರರಿಗೆ ಸೆಟ್‌ಟಾಪ್‌ ಬಾಕ್ಸ್, ಫೀ ಮಾಫಿ ಆಮಿಷ! ಚುನಾವಣಾ ಆಯೋಗದ ಕ್ರಮವೇನು?

ಆರ್‌ ಆರ್‌ ನಗರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಆಮಿಷಗಳೇ ಸದ್ದು ಮಾಡುತ್ತಿದೆ. ಬಿಜೆಪಿ , ಕಾಂಗ್ರೆಸ್ ಮತದಾರರನ್ನು ಸೆಳೆಯಲು ನಾನಾ ತಂತ್ರಗಳನ್ನು ಪ್ರಯೋಗ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ಚುನಾವಣಾ ಆಯೋಗ ಏನು ಮಾಡುತ್ತಿದೆ?

Vijaya Karnataka Web 28 Oct 2020, 10:52 am
ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣಾ ಕಣ ರಂಗೇರುತ್ತಿದೆ. ಇನ್ನೇನು ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಮತದಾರರನ್ನು ಸೆಳೆದುಕೊಳ್ಳಲು ಅಭ್ಯರ್ಥಿಗಳು ನಾನಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಅದರಲ್ಲೂ ಆರ್‌ಆರ್‌ ನಗರದಲ್ಲಿ ಸೆಟ್‌ಟಾಪ್‌ ಬಾಕ್ಸ್, ವಿದ್ಯಾರ್ಥಿಗಳಿಗೆ ಶಾಲಾ ಫೀಸ್ ಮಾಫಿ ಆಮಿಷಗಳು ಸಾಕಷ್ಟು ಸದ್ದು ಮಾಡುತ್ತಿದೆ. ಹೀಗಿದ್ದರೂ ಚುನಾವಣಾ ಆಯೋಗ ಕ್ರಮ ಕೈಗೊಳ್ಳದೇ ಇರುವುದು ಚರ್ಚೆಗೆ ಗ್ರಾಸವಾಗಿದೆ.
Vijaya Karnataka Web party flag


ರಾಜರಾಜೇಶ್ವರಿ ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಮತದಾರರಿಗೆ ಉಚಿತ ಸೆಟ್‌ಟಾಪ್‌ ಬಾಕ್ಸ್ ವಿತರಣೆ ಮಾಡುತ್ತಿದ್ದಾರೆ ಎಂಬ ಆರೋಪವನ್ನು ಕಾಂಗ್ರೆಸ್ ಮಾಡುತ್ತಿದೆ. ಈ ಕುರಿತಾಗಿ ಕ್ರಮವನ್ನು ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮಂಗಳವಾರ ರಾಜ್ಯ ಚುನಾವಣಾ ಆಯೋಗಕ್ಕೆ ದೂರನ್ನು ಸಲ್ಲಿಸಿದೆ.

ಕುಟುಂಬಸ್ಥರಿಗೆ ಉದ್ಯೋಗ ಆರೋಪ: ಸುಳ್ಳು ಹೇಳುತ್ತಿರುವವರು ಯಾರು? ಪುಟ್ಟಣ್ಣನೋ ಎಚ್‌ಡಿಕೆಯೋ

ಆದರೆ ಕ್ಷೇತ್ರದ ಜನರಿಗೆ ಸೆಟ್‌ಟಾಪ್‌ ಬಾಕ್ಸ್ ನೀಡುವುದನ್ನು ಬಿಜೆಪಿ ಅಭ್ಯರ್ಥಿ ಮುನಿರತ್ನ ಸಮರ್ಥನೆ ಮಾಡುತ್ತಿದ್ದಾರೆ. ನಾನೊಬ್ಬ ಉದ್ಯಮಿ, ಈ ಕಾರಣಕ್ಕಾಗಿ ಸೆಟ್‌ಟಾಪ್‌ ಬಾಕ್ಸ್ ಕೊಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುತ್ತಿದ್ದಾರೆ. ದೂರು ಕೊಟ್ರೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳುತ್ತದೆ ಎಂಬುವುದು ಅವರ ವಾದ.

ಡಿಕೆಶಿಯಿಂದ ವಿದ್ಯಾರ್ಥಿಗಳ ಫೀ ಮಾಫಿ!


ಮುನಿರತ್ನ ವಿರುದ್ಧ ಸೆಟ್‌ಟಾಪ್‌ ಬಾಕ್ಸ್ ಉಚಿತ ವಿತರಣೆಯ ಆರೋಪ ಇದ್ದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಶಾಲಾ -ಕಾಲೇಜು ಮಕ್ಕಳಿಗೆ ಶೈಕ್ಷಣಿಕ ಶುಲ್ಕ ಮಾಫಿ ಮಾಡುತ್ತಿರುವ ಆರೋಪವಿದೆ. ಬಿಜೆಪಿ ಈ ಆರೋಪವನ್ನು ಮಾಡುತ್ತಿದೆ. ಡಿ.ಕೆ ಶಿವಕುಮಾರ್ ಒಡೆತನದ ಶಾಲಾ- ಕಾಲೇಜುಗಳಲ್ಲಿ ಮಕ್ಕಳಿಗೆ ಫೀಸ್ ಮಾಫಿ ಮಾಡಲಾಗುತ್ತದೆ ಎಂದು ಬಿಜೆಪಿ ಆರೋಪಿಸುತ್ತಿದೆ. ಇದು ಕೂಡಾ ಚುನಾವಣಾ ಸಂದರ್ಭದಲ್ಲಿ ನೀಡುವ ಆಮಿಷ ಆಗುವುದಿಲ್ಲವೇ ಎಂಬುವುದು ಅವರ ಪ್ರಶ್ನೆ.

ಶಿರಾ, ಆರ್‌ ಆರ್‌ ನಗರದಲ್ಲಿ ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ ಎಂದ ದಿನೇಶ್ ಗುಂಡೂರಾವ್

ಚುನಾವಣಾ ಆಯೋಗದ ಕ್ರಮ ಏನು

ಚುನಾವಣೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ನೋಡಿಕೊಳ್ಳುವುದು ಚುನಾವಣಾ ಆಯೋಗದ ಕರ್ತವ್ಯವಾಗಿದೆ. ಮತದಾರರಿಗೆ ಅಮಿಷ ಒಡ್ಡುವ ಕೆಲಸ ಯಾರೇ ಮಾಡಿದರೂ ಅದನ್ನು ತಡೆಯುವ ಹಾಗೂ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕೆಲಸವನ್ನು ಆಯೋಗ ಮಾಡಬೇಕಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾರಣಕ್ಕಾಗಿ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ನಿಟ್ಟಿನಲ್ಲಿ ಈ ಬಾರಿ ನ್ಯಾಯಸಮ್ಮತ ಚುನಾವಣೆ ನಡೆಯುವಂತೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂಬುವುದು ಕ್ಷೇತ್ರದ ಮತದಾರರ ಆಗ್ರಹ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ