ಆ್ಯಪ್ನಗರ

ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಅಲೋಕ್ ಕುಮಾರ್ ನೇಮಕ, 19 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಅಲೋಕ್ ಕುಮಾರ್ ಅವರು ಮೊದಲು ದಕ್ಷಿಣ ವಿಭಾಗ ಡಿಸಿಪಿಯಾಗಿ 2010ರಲ್ಲಿ ನೇಮಕಗೊಂಡಿದ್ದರು. ಬಳಿಕ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಆಯುಕ್ತರಾಗಿ, ನಂತರ ಅಪರಾಧ ವಿಭಾಗದ ಜಂಟಿ ಆಯುಕ್ತರಾಗಿ ಮತ್ತು ಉಡುಪಿಯಲ್ಲಿರುವ ನಕ್ಸಲ್ ನಿಗ್ರಹ ದಳದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದರು.

Vijaya Karnataka Web 17 Jun 2019, 12:20 pm
ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಅಪರಾಧ ವಿಭಾಗದ ಹೆಚ್ಚುವರಿ ಆಯಕ್ತ ಅಲೋಕ್ ಕುಮಾರ್ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
Vijaya Karnataka Web Alok Kumar- Bengaluru police commissioner


19 ಮಂದಿ ಪ್ರಮುಖ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮತ್ತು ಮರು ನಿಯೋಜನೆ ಮಾಡಲಾಗಿದ್ದು, ಅದರ ಭಾಗವಾಗಿ ಈ ನೇಮಕ ನಡೆದಿದೆ.

ಈ ವರೆಗೆ ನಗರ ಪೊಲೀಸ್ ಆಯುಕ್ತರಾಗಿದ್ದ ಟಿ ಸುನೀಲ್ ಕುಮಾರ್ ಅವರನ್ನು ನೇಮಕಾತಿ ವಿಭಾಗದ ಹೆಚ್ಚುವರಿ ಡಿಜಿಪಿ (ಎಜಿಡಿಪಿ) ಹುದ್ದೆಗೆ ನೇಮಿಸಲಾಗಿದೆ.

ಅಲೋಕ್ ಕುಮಾರ್ ಅವರು ಮೊದಲು ದಕ್ಷಿಣ ವಿಭಾಗ ಡಿಸಿಪಿಯಾಗಿ 2010ರಲ್ಲಿ ನೇಮಕಗೊಂಡಿದ್ದರು. ಬಳಿಕ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಆಯುಕ್ತರಾಗಿ, ನಂತರ ಅಪರಾಧ ವಿಭಾಗದ ಜಂಟಿ ಆಯುಕ್ತರಾಗಿ ಮತ್ತು ಉಡುಪಿಯಲ್ಲಿರುವ ನಕ್ಸಲ್ ನಿಗ್ರಹ ದಳದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದರು.

ರೈಲ್ವೇ ವಿಭಾಗದ ಎಸ್‌ಪಿ ಭೀಮಾಶಂಕರ್ ಗುಳೇದ್ ಅವರನ್ನು ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಹುದ್ದೆಗೆ ವರ್ಗಾಯಿಸಲಾಗಿದೆ. ಈ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಲಾ ಕೃಷ್ಣಸ್ವಾಮಿ ಅವರನ್ನು ವಿಧಿ ವಿಜ್ಞಾನ ಪ್ರಯೋಗಾಲಯದ ನಿರ್ದೇಶಕ ಹುದ್ದೆಗೆ ವರ್ಗಾಯಿಸಲಾಗಿದೆ.

ಮೈಸೂಕು ಕೇಂದ್ರ ದಕ್ಷಿಣ ವಲಯ ಐಜಿಪಿ ಉಮೇಶ್ ಕುಮಾರ್ ಅವರನ್ನು ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಆಯುಕ್ತರ ಹುದ್ದೆಗೆ ವರ್ಗಾಯಿಸಲಾಗಿದೆ. ಪೂರ್ವ ವಲಯದ ಐಜಿಪಿಯಾಗಿ ಅಮೃತ್ ಪಾಲ್ ಅವರನ್ನು ನೇಮಿಸಲಾಗಿದೆ. ಬಿಕೆ ಸಿಂಗ್ ಅವರನ್ನು ರಾಜ್ಯ ಸರಕಾರದ ನೂತನ ಐಜಿಪಿಯಾಗಿ ನೇಮಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ