ವಿಕ ಸುದ್ದಿಲೋಕ ಬೆಂಗಳೂರು
ಕೆ.ಆರ್.ಮಾರುಕಟ್ಟೆ ಸುತ್ತಲಿನ ಪಾದಚಾರಿ ಮಾರ್ಗ ಮತ್ತು ರಸ್ತೆಯನ್ನು ಒತ್ತುವರಿ ಮಾಡಿ ವ್ಯಾಪಾರ ಮಾಡುತ್ತಿದ್ದವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಸಂಬಂಧ ಸಿಎಂ, ಡಿಸಿಎಂ ಅವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ತಿಳಿಸಿದರು.
ಮಾರುಕಟ್ಟೆಯಲ್ಲಿ ಸಮರ್ಪಕವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳುತ್ತಿಲ್ಲವೆಂಬ ದೂರಿನ ಹಿನ್ನೆಲೆಯಲ್ಲಿ ಗುರುವಾರ ಭೇಟಿ ನೀಡಿ ತಪಾಸಣೆ ನಡೆಸಿದ ಅವರು, ''ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅನಧಿಕೃತ ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಅದೇ ರೀತಿ ಫುಟ್ಪಾತ್ಗಳನ್ನು ಅತಿಕ್ರಮಿಸಿಕೊಂಡಿದ್ದ ಬೀದಿಬದಿ ವ್ಯಾಪಾರಿಗಳನ್ನು ತೆರವು ಮಾಡಿಸಲಾಗಿದೆ,'' ಎಂದು ಹೇಳಿದರು.
''ಅಗ್ನಿಶಾಮಕ ವಾಹನಗಳು ಯಾವುದೇ ಅಡೆತಡೆ ಇಲ್ಲದಂತೆ ಸುಗಮವಾಗಿ ಮಾರುಕಟ್ಟೆ ಪ್ರವೇಶಿಸಲು ಅನುವು ಮಾಡಿಕೊಡಲಾಗಿದೆ. ನೆಲ ಮಹಡಿಯಲ್ಲಿ ರಾಶಿ ಬಿದ್ದಿರುವ ಕಸವನ್ನು ತೆರವುಗೊಳಿಸಬೇಕು. ಮತ್ತೆ ಅಲ್ಲಿ ಕಸ ಹಾಕದಂತೆ ತಡೆಯಲು ಪ್ರವೇಶ ದ್ವಾರದಲ್ಲಿ ಬಾಗಿಲು ಅಳವಡಿಸಬೇಕು. ಅಗ್ನಿಶಾಮಕ ವಾಹನಗಳು ಬಂದಾಗ ಮಾತ್ರ ತೆರೆಯಲು ಕ್ರಮ ವಹಿಸಬೇಕು,'' ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
''ಮಾರುಕಟ್ಟೆಯ ನಿರ್ವಹಣೆ, ಮೇಲ್ವಿಚಾರಣೆಯ ಹೊಣೆ ಹೊತ್ತಿರುವ ಅಧಿಕಾರಿಗಳು ವಾರಕ್ಕೊಮ್ಮೆ ಸಭೆ ನಡೆಸಿ, ಸಮಸ್ಯೆಗಳನ್ನು ಪರಿಹರಿಸಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು,'' ಎಂದು ಎಚ್ಚರಿಕೆ ನೀಡಿದರು.
ಕೆ.ಆರ್.ಮಾರುಕಟ್ಟೆ ಸುತ್ತಲಿನ ಪಾದಚಾರಿ ಮಾರ್ಗ ಮತ್ತು ರಸ್ತೆಯನ್ನು ಒತ್ತುವರಿ ಮಾಡಿ ವ್ಯಾಪಾರ ಮಾಡುತ್ತಿದ್ದವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಸಂಬಂಧ ಸಿಎಂ, ಡಿಸಿಎಂ ಅವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ತಿಳಿಸಿದರು.
ಮಾರುಕಟ್ಟೆಯಲ್ಲಿ ಸಮರ್ಪಕವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳುತ್ತಿಲ್ಲವೆಂಬ ದೂರಿನ ಹಿನ್ನೆಲೆಯಲ್ಲಿ ಗುರುವಾರ ಭೇಟಿ ನೀಡಿ ತಪಾಸಣೆ ನಡೆಸಿದ ಅವರು, ''ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅನಧಿಕೃತ ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಅದೇ ರೀತಿ ಫುಟ್ಪಾತ್ಗಳನ್ನು ಅತಿಕ್ರಮಿಸಿಕೊಂಡಿದ್ದ ಬೀದಿಬದಿ ವ್ಯಾಪಾರಿಗಳನ್ನು ತೆರವು ಮಾಡಿಸಲಾಗಿದೆ,'' ಎಂದು ಹೇಳಿದರು.
''ಅಗ್ನಿಶಾಮಕ ವಾಹನಗಳು ಯಾವುದೇ ಅಡೆತಡೆ ಇಲ್ಲದಂತೆ ಸುಗಮವಾಗಿ ಮಾರುಕಟ್ಟೆ ಪ್ರವೇಶಿಸಲು ಅನುವು ಮಾಡಿಕೊಡಲಾಗಿದೆ. ನೆಲ ಮಹಡಿಯಲ್ಲಿ ರಾಶಿ ಬಿದ್ದಿರುವ ಕಸವನ್ನು ತೆರವುಗೊಳಿಸಬೇಕು. ಮತ್ತೆ ಅಲ್ಲಿ ಕಸ ಹಾಕದಂತೆ ತಡೆಯಲು ಪ್ರವೇಶ ದ್ವಾರದಲ್ಲಿ ಬಾಗಿಲು ಅಳವಡಿಸಬೇಕು. ಅಗ್ನಿಶಾಮಕ ವಾಹನಗಳು ಬಂದಾಗ ಮಾತ್ರ ತೆರೆಯಲು ಕ್ರಮ ವಹಿಸಬೇಕು,'' ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
''ಮಾರುಕಟ್ಟೆಯ ನಿರ್ವಹಣೆ, ಮೇಲ್ವಿಚಾರಣೆಯ ಹೊಣೆ ಹೊತ್ತಿರುವ ಅಧಿಕಾರಿಗಳು ವಾರಕ್ಕೊಮ್ಮೆ ಸಭೆ ನಡೆಸಿ, ಸಮಸ್ಯೆಗಳನ್ನು ಪರಿಹರಿಸಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು,'' ಎಂದು ಎಚ್ಚರಿಕೆ ನೀಡಿದರು.