ಆ್ಯಪ್ನಗರ

ಆ್ಯಂಬುಲೆನ್ಸ್‌ಗೆ ತಡೆ: ಗಮನಕ್ಕೆ ಬಂದಿಲ್ಲ ಎಂದ ಸಿಎಂ

ರಡು ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹೋಗುತ್ತಿದ್ದಾಗ ಆ್ಯಂಬುಲೆನ್ಸ್‌ ಟ್ರಾಫಿಕ್ ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ವಿಚಾರ ನನ್ನ ಗಮನಕ್ಕೆ ಬಂದಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಕ ಸುದ್ದಿಲೋಕ 4 May 2017, 1:17 pm
ಬೆಂಗಳೂರು: ಎರಡು ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹೋಗುತ್ತಿದ್ದಾಗ ಆ್ಯಂಬುಲೆನ್ಸ್‌ ಟ್ರಾಫಿಕ್ ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ವಿಚಾರ ನನ್ನ ಗಮನಕ್ಕೆ ಬಂದಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
Vijaya Karnataka Web ambulance in traffic i not aware cm said
ಆ್ಯಂಬುಲೆನ್ಸ್‌ಗೆ ತಡೆ: ಗಮನಕ್ಕೆ ಬಂದಿಲ್ಲ ಎಂದ ಸಿಎಂ


ಮಾಧ್ಯಮಗಳಲ್ಲಿ ಈ ವಿಷಯ ಪ್ರಕಟವಾದ ಬಳಿಕ 'ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಆಂಬುಲೆನ್ಸ್ ಗಳ ಸಂಚಾರಕ್ಕೆ ತಡೆಯೊಡ್ಡಬಾರದು ಎಂದು ಈ ಹಿಂದೆಯೇ ಆದೇಶಿಸಿದ್ದೇನೆ. ಆದರೂ ಅನಿರೀಕ್ಷಿತವಾಗಿ ಈ ಘಟನೆ ಸಂಭವಿಸಿದೆ. ಇನ್ನು ಮುಂದೆ ಇಂತಹ ಘಟನೆಗಳಿಗೆ ಅವಕಾಶ ನೀಡದಂತೆ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಿದ್ದೇನೆ,' ಎಂದು ಅವರು ಹೇಳಿದ್ದಾರೆ.

ಅರಮನೆ ಮೈದಾನದಲ್ಲಿ ಐಎನ್‌ಟಿಯುಸಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಎಂ ಬಳ್ಳಾರಿ ರಸ್ತೆಯಲ್ಲಿ ಸಾಗುತ್ತಿದ್ದರು. ಈ ವೇಳೆ ಮೇಖ್ರಿ ವೃತ್ತದ ಬಳಿ ಆಂಬ್ಯುಲೆನ್ಸ್‌ ಹಾದು ಹೋಗುತ್ತಿದ್ದರೂ ಅದಕ್ಕೆ ಮುಂದೆ ಸಾಗಲು ಟ್ರಾಫಿಕ್‌ ಪೊಲೀಸರು ಅವಕಾಶ ನೀಡಲಿಲ್ಲ. ಸಿಎಂ ಕಾರು ತೆರಳಿದ ನಂತರ ಆಂಬ್ಯುಲೆನ್ಸ್‌ಗೆ ಗ್ರೀನ್‌ ಸಿಗ್ನಲ್‌ ನೀಡಲಾಯಿತು. ಸಿಎಂ ಸಂಚಾರಕ್ಕಾಗಿ ಆಂಬ್ಯುಲೆನ್ಸ್‌ ತಡೆದು ನಿಲ್ಲಿಸಿದ್ದ 24 ಗಂಟೆಗಳ ಅವಧಿಯಲ್ಲಿ ನಡೆದ ಎರಡನೇ ಘಟನೆಯಾಗಿದೆ ಎಂದು ಮಾಧ್ಯಮದಲ್ಲಿ ವರದಿಯಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ