ಆ್ಯಪ್ನಗರ

ಬೆಂಗಳೂರು ಆದಾಯ ತೆರಿಗೆ ಇಲಾಖೆಗೆ ಬಾಂಬ್ ಬೆದರಿಕೆ : ನೌಕರರು ದಿಕ್ಕಾಪಾಲು

ಬೆಂಗಳೂರಿನ ಆದಾಯ ತೆರಿಗೆ ಇಲಾಖೆ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಇದರಿಂದ ಆತಂಕಗೊಂಡ ನೌಕರರು ಕಚೇರಿಯಿಂದ ಹೊರಗೆ ಬಂದ ಪ್ರಸಂಗ ನಡೆದಿದೆ. ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ.

Vijaya Karnataka Web 24 Oct 2019, 11:45 am
ಬೆಂಗಳೂರು: ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಆದಾಯ ತೆರಿಗೆ ಇಲಾಖೆ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಈ ಸಂದೇಶಸದಿಂದ ಆತಂಕಗೊಂಡ ನೌಕರರು ಕಚೇರಿಯಿಂದ ಹೊರಗೆ ಬಂದ ಪ್ರಸಂಗ ಗುರುವಾರ ನಡೆದಿದೆ.
Vijaya Karnataka Web bomb


ಗುರುವಾರ ಸಂಜೆಯೊಳಗೆ ಐಟಿ ಇಲಾಖೆ ಕಚೇರಿಯೊಳಗೆ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಐಟಿ ಇಲಾಖೆಯ ಜಿಎಸ್ಟಿ ವಿಭಾಗದ ಇ-ಮೇಲ್ ಐಡಿಗೆ ಅಪರಿಚಿತರು ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಇದನ್ನು ಗಮನಿಸಿದ ಸಿಬ್ಬಂದಿ ಹಿರಿಯ ಅಧಿಕಾರಿಗಳಿಗೆ ಕೂಡಲೇ ಮಾಹಿತಿ ನೀಡಿದ್ದಾರೆ.

ಖಾಸಗಿ ಕಾಲೇಜಿಗೆ ಹುಸಿ ಬಾಂಬ್‌ ಕರೆ

ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಆಗಮಿಸಿರುವ ಶ್ವಾನದಳ, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ. ಕಚೇರಿಯಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಹೊರಗೆ ಕಳುಹಿಸಿ ತಪಾಸಣೆ ನಡೆಸಲಾಗುತ್ತಿದೆ.

ಹುಸಿ ಬಾಂಬ್‌ ಕರೆ: ವ್ಯಕ್ತಿ ವಶಕ್ಕೆ

ಇಮೇಲ್ ಕಳುಹಿಸಿದ ಅಪರಿಚಿತರ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇತ್ತೀಚೆಗೆ ಹಲವು ರಾಜಕಾರಣಿಗಳ ಮನೆ, ಕಚೇರಿಗಳ ಮೇಲೆ ಐಟಿ ಇಲಾಖೆ ದಾಳಿ‌ ನಡೆಸಿದೆ. ದಾಳಿ ನಡೆಸಿದ ಪ್ರತಿ ಬಾರಿಯು ಐಟಿ ಇಲಾಖೆಗೆ ಭದ್ರತೆ ಕಲ್ಪಿಸಲಾಗುತ್ತದೆ.

ವಿಮಾನ ಹಾರಾಟ ವಿಳಂಬ ಮಾಡಲು ಹುಸಿ ಬಾಂಬ್‌ ಕರೆ !

ವಿಪಕ್ಷ ನಾಯಕರನ್ನು ಗುರಿಯಾಗಿಸಿಕೊಂಡು ಐಟಿ ಇಲಾಖೆ ದಾಳಿ ನಡೆಸುತ್ತಿದೆ‌ ಎಂದು ವಿಪಕ್ಷಗಳ ಹಲವು ನಾಯಕರು ಆರೋಪಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ