Please enable javascript.‘ಜಲಸಂಪನ್ಮೂಲ ಸಚಿವರಾಗಿ ಡಿಕೆಶಿ ಸಂಪೂರ್ಣ ವಿಫಲ’ - ಮಾಜಿ ಸಚಿವ ಅಶ್ವತ್ಥ ನಾರಾಯಣ ಆಕ್ರೋಶ - as water resource minister dk shivakumar is failure say former minister ashwath narayan - Vijay Karnataka

‘ಜಲಸಂಪನ್ಮೂಲ ಸಚಿವರಾಗಿ ಡಿಕೆಶಿ ಸಂಪೂರ್ಣ ವಿಫಲ’ - ಮಾಜಿ ಸಚಿವ ಅಶ್ವತ್ಥ ನಾರಾಯಣ ಆಕ್ರೋಶ

Authored byಚೇತನ್ ಓ.ಆರ್. | Vijaya Karnataka Web 26 Sep 2023, 3:16 pm
Subscribe

Bengaluru Bandh - ಕಾವೇರಿ ನದಿಯು ಇಡೀ ದಕ್ಷಿಣ ಭಾರತದ ಆಸ್ತಿ ಎಂದಿರುವ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆಯನ್ನು ಮಾಜಿ ಸಚಿವ ಅಶ್ವತ್ಥ ನಾರಾಯಣ್ ತೀವ್ರವಾಗಿ ಖಂಡಿಸಿದ್ದಾರೆ. ಕಾವೇರಿ ನದಿಯ ನೀರಿನ ಹಂಚಿಕೆಯ ವಿಚಾರದಲ್ಲಿ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ. ಜಲಸಂಪನ್ಮೂಲ ಸಚಿವರಾಗಿ ಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಹೇಳಿದ ಅವರು, ಮೇಕೆದಾಟು ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವವರು ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಹೈಲೈಟ್ಸ್‌:

  • ಉಪಮುಖ್ಯಮಂತ್ರಿ ಡಿಕೆಶಿ ವಿರುದ್ಧ ಮಾಜಿ ಸಚಿವ ಅಶ್ವತ್ಥ ನಾರಾಯಣ ಕಿಡಿ.
  • ಜಲಸಂಪನ್ಮೂಲ ಸಚಿವರಾಗಿ ಡಿಕೆಶಿ ಸಂಪೂರ್ಣ ವಿಫಲ ಎಂದು ಹೇಳಿದ ಮಾಜಿ ಸಚಿವ.
  • ತಮಿಳುನಾಡು ಸಿಎಂ ಜೊತೆಗೆ ನಮ್ಮ ಸಿಎಂ ಚರ್ಚೆ ನಡೆಸಲಿ ಎಂದು ಆಗ್ರಹ.
Dr CN Ashwath Narayan VS DK Shivakumar
ಡಾ ಸಿಎನ್‌ ಅಶ್ವತ್ಥ ನಾರಾಯಣ , ಡಿಕೆ ಶಿವಕುಮಾರ್‌ (ಸಂಗ್ರಹ ಚಿತ್ರ)
ಬೆಂಗಳೂರು: ‘ಕಾವೇರಿ ನದಿ ಇಡೀ ದಕ್ಷಿಣ ಭಾರತದ ಆಸ್ತಿ’ ಎಂದು ಹೇಳಿರುವ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯನ್ನು ಮಾಜಿ ಸಚಿವ ಅಶ್ವತ್ಥ ನಾರಾಯಣ ಅವರು ತೀವ್ರವಾಗಿ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಜಲಸಂಪನ್ಮೂಲ ಸಚಿವರಾಗಿ ಅವರು ವಿಫಲರಾಗಿದ್ದಾರೆ. ಮೇಕೆದಾಟು ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಡಿಕೆಶಿ ಇಂದು ರಾಜ್ಯವನ್ನು ಲೂಟಿ ಮಾಡುವುದರಲ್ಲಿ ನಿರತರಾಗಿದ್ದಾರೆ’’ ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಜಲಸಂಪನ್ಮೂಲ ಸಚಿವರಾಗಿ ಡಿಕೆಶಿಯವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಮೇಕೆದಾಟು ಯೋಜನೆಯ ಹೆಸರಿನಲ್ಲಿ ಜನಾಂದೋಲನ ಮಾಡಿದ್ದ ಡಿ.ಕೆ. ಶಿವಕುಮಾರ್ ಅವರು ಅಧಿಕಾರಕ್ಕೆ ಬಂದ ನಾಲ್ಕೇ ತಿಂಗಳಲ್ಲಿ ಆ ಎಲ್ಲಾ ಹೋರಾಟವನ್ನು ಮರೆತಿದ್ದಾರೆ. ತಮಿಳುನಾಡು ಕೇಳುವುದಕ್ಕೂ ಮುಂಚೆಯೇ ನೀರು ಬಿಡುವುದು ಸೇರಿದಂತೆ ಅವರು ಕೈಗೊಂಡ ಕೆಲವು ನಿರ್ಧಾರಗಳಿಂದಲೇ ಇಂದು ಕಾವೇರಿ ಕಣಿವೆಯ ಜನರು ಬೀದಿಗಿಳಿದು ಹೋರಾಟ ಮಾಡುವಂತಾಗಿದೆ’’ ಎಂದು ಅವರು ಟೀಕಿಸಿದರು.


ಮೈಮರೆತಿರುವ ಸಿಎಂ

ಸಿಎಂ ಸಿದ್ದರಾಮಯ್ಯನವರ ವಿರುದ್ಧವೂ ಟೀಕಾಸ್ತ್ರ ಪ್ರಯೋಗಿಸಿದ ಅವರು, ಸಿದ್ದರಾಮಯ್ಯ ರೈತರ ಹಿತ ಕಾಯುವಲ್ಲಿ ವಿಫಲರಾಗಿದ್ದಾರೆ. ಕಾವೇರಿ ವಿಚಾರದಲ್ಲಿ ಅವರು ಮೈಮರೆತಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಸೇರಿ ರಾಜ್ಯವನ್ನು ನಿರ್ನಾಮ ಮಾಡಲು ಹೊರಟಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೊಂದೆಡೆ, ಶಾಂತವಾಗಿ ಪ್ರತಿಭಟಿಸುತ್ತಿದ್ದ ರೈತ ಮುಖಂಡರನ್ನು, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳನ್ನು ಬಂಧಿಸಿರುವುದನ್ನು ಅಶ್ವತ್ಥ ನಾರಾಯಣ ಖಂಡಿಸಿದರು. ಪ್ರತಿಭಟನೆ ಮಾಡುವವರನ್ನು ವಶಕ್ಕೆ ಪಡೆಯುವ ಮೂಲಕ ರಾಜ್ಯ ಸರ್ಕಾರ ಹೋರಾಟವನ್ನು ಹತ್ತಿಕ್ಕುವಂಥ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

ಬೆಂಗಳೂರು ಬಂದ್‌: ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿ; 4 ಅಥವಾ ಅದಕ್ಕಿಂತ ಹೆಚ್ಚು ಜನ ಒಂದೇ ಕಡೆ ಸೇರುವಂತಿಲ್ಲ!

‘ಸ್ಟ್ಯಾಲಿನ್ ಜೊತೆಗೆ ಸಿದ್ದರಾಮಯ್ಯ ಮಾತಾಡಲಿ’

“ತಮಿಳುನಾಡಿನ ಮುಖ್ಯಮಂತ್ರಿ ಸ್ಟ್ಯಾಲಿನ್ ಅವರ ಜೊತೆಗೆ ಮಾತನಾಡುವ ಪ್ರಯತ್ನವನ್ನು ನಮ್ಮ ಸಿಎಂ ಸಿದ್ದರಾಮಯ್ಯ ಮಾಡುತ್ತಿಲ್ಲ. ಈವರೆಗೆ ಅಂಥ ಯಾವುದೇ ಸಭೆಗಳು ನಡೆದಿಲ್ಲ ಎಂದು ಅಶ್ವತ್ಥ ನಾರಾಯಣ ಕಿಡಿಕಾರಿದರು. ನೀವು (ಸಿದ್ದರಾಮಯ್ಯ) ಜನರ ಕಷ್ಟವನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ. ಜನರ ಕಷ್ಟಗಳಿಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಕೇವಲ ಅಧಿಕಾರ ಅನುಭವಿಸಲು ಮಾತ್ರ ಸಿಎಂ ಕುರ್ಚಿಯಲ್ಲಿ ಕುಳಿತಿದ್ದೀರಾ?’’ ಎಂದು ಅಶ್ವತ್ಥ ನಾರಾಯಣ ಅವರು ತೀವ್ರವಾಗಿ ಆಕ್ಷೇಪಿಸಿದರು.

--------------------------------------------------------------

‘ವಿಜಯ ಕರ್ನಾಟಕ’ ವಾಟ್ಸಾಪ್ ಚಾನಲ್ ಫಾಲೋ ಮಾಡಿ ಮತ್ತು ಬ್ರೇಕಿಂಗ್ ನ್ಯೂಸ್, ವಿಷಯ ವಿಶ್ಲೇಷಣೆ, ವಿಶೇಷ ಲೇಖನ, ಜೀವನಶೈಲಿ, ಜ್ಯೋತಿಷ್ಯ, ಸಿನೆಮಾದ ಸ್ವಾರಸ್ಯಕರ ಸುದ್ದಿ, ವಿಡಿಯೋಗಳನ್ನು ಪಡೆಯಲು 'ಬೆಲ್' ಐಕಾನ್ ಕ್ಲಿಕ್ ಮಾಡಿ. ಇಲ್ಲಿ ಕ್ಲಿಕ್ಕಿಸಿ.

https://whatsapp.com/channel/0029Va5CUiNBVJl72lPtBZ0P
ಚೇತನ್ ಓ.ಆರ್.
ಲೇಖಕರ ಬಗ್ಗೆ
ಚೇತನ್ ಓ.ಆರ್.
ಪ್ರಸ್ತುತ, ವಿಜಯ ಕರ್ನಾಟಕ ವೆಬ್ ನಲ್ಲಿ ಪತ್ರಕರ್ತನಾಗಿ 2022ರಿಂದ ಪತ್ರಕರ್ತನಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2007ರಲ್ಲಿ ತುಮಕೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ 5ನೇ ರ‍್ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಮೈಸೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ ಪಿಎಚ್ ಡಿ ಪದವಿ ಪಡೆದಿದ್ದಾರೆ. ಜಿಲ್ಲಾ ಸುದ್ದಿಗಳಿಂದ ಹಿಡಿದು ಕ್ರೀಡೆ, ದೇಶ- ವಿದೇಶ, ಸಿನಿಮಾ, ವಿಜ್ಞಾನ- ತಂತ್ರಜ್ಞಾನ ಇತ್ಯಾದಿ ವೈವಿಧ್ಯಯಮ ವಿಷಯಗಳ ಬಗ್ಗೆ ಬರೆಯುವ ಇವರಿಗೆ, ನಾನಾ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಈವರೆಗೆ 16 ವರ್ಷ ಕೆಲಸ ಮಾಡಿದ ಅನುಭವವಿದೆ. ಫೋಟೋಗ್ರಫಿ ಇವರ ಅಚ್ಚುಮೆಚ್ಚಿನ ಹವ್ಯಾಸ. ಸಿನಿಮಾ, ಸಾಕ್ಷ್ಯಚಿತ್ರ, ಸಾಹಿತ್ಯ, ವಿಡಿಯೋ ಸಂಕಲನ, ಪತ್ರಿಕೆ ಪುಟ ವಿನ್ಯಾಸ, ಹಾಡುಗಾರಿಕೆ, ಚಿತ್ರಕಲೆ, ಅನಿಮೇಶನ್, ಸಂಗೀತದಲ್ಲಿಯೂ ಆಸಕ್ತಿಯಿದೆ.... ಇನ್ನಷ್ಟು ಓದಿ
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ