ಆ್ಯಪ್ನಗರ

ಬೈಯ್ಯಪ್ಪನಹಳ್ಳಿ ರೈಲು ನಿಲ್ದಾಣಕ್ಕೆ ಸರ್‌. ಎಂ. ವಿಶ್ವೇಶ್ವರಯ್ಯ ಹೆಸರು ನಾಮಕರಣ: ರಾಜ್ಯ ಸರಕಾರ

ಬೈಯಪ್ಪನಹಳ್ಳಿಯ ರೈಲು ನಿಲ್ದಾಣಕ್ಕೆ ಸರ್. ಎಂ. ವಿಶ್ವೇಶ್ವರಯ್ಯ ಅವರ ಹೆಸರನ್ನು ನಾಮಕರಣ ಮಾಡಿ ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದೆ. ಇನ್ಮುಂದೆ 'ಸರ್. ಎಂ. ವಿಶ್ವೇಶ್ವರಯ್ಯ ನಿಲ್ದಾಣ, ಬೆಂಗಳೂರು' ಎಂಬ ಹೆಸರಿನಿಂದಲೇ ಗುರುತಿಸಿಕೊಳ್ಳಲಿದೆ.

Vijaya Karnataka Web 5 Dec 2020, 10:42 pm
ಬೆಂಗಳೂರು: ಬೈಯಪ್ಪನಹಳ್ಳಿಯ ರೈಲು ನಿಲ್ದಾಣಕ್ಕೆ ಸರ್. ಎಂ. ವಿಶ್ವೇಶ್ವರಯ್ಯ ಅವರ ಹೆಸರನ್ನು ನಾಮಕರಣ ಮಾಡಿ ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದೆ. ಇನ್ಮುಂದೆ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣ 'ಸರ್. ಎಂ. ವಿಶ್ವೇಶ್ವರಯ್ಯ ನಿಲ್ದಾಣ, ಬೆಂಗಳೂರು' ಎಂಬ ಹೆಸರಿನಿಂದಲೇ ಗುರುತಿಸಿಕೊಳ್ಳಲಿದೆ.
Vijaya Karnataka Web M Visvesvaraya
M Visvesvaraya


ಈ ಕುರಿತು ರಾಜ್ಯ ಸರಕಾರ ಶನಿವಾರ ವಿಶೇಷ ಕರ್ನಾಟಕ ರಾಜ್ಯಪತ್ರ ಹೊರಡಿಸಿದ್ದು, ಸರ್. ಎಂ. ವಿಶ್ವೇಶ್ವರಯ್ಯ ಹೆಸರನ್ನು ರೈಲು ನಿಲ್ದಾಣಕ್ಕೆ ಇಡಲು ಸಮ್ಮತಿ ಸೂಚಿಸಿದೆ. ಕನ್ನಡ, ಇಂಗ್ಲಿಷ್ ಮತ್ತು ದೇವನಾಗರಿ ಲಿಪಿಗಳಲ್ಲಿ ಸರ್ಎಂವಿ ಹೆಸರಿನ ನಾಮಫಲಕವನ್ನು ಅಳವಡಿಸಲಾಗುವುದು ಎಂದು ರಾಜ್ಯಪತ್ರ ತಿಳಿಸಿದೆ. ಇಂಗ್ಲಿಷ್‌ನಲ್ಲಿ ಸರ್‌.ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ ಎಂದು ನಾಮಕರಣ ಮಾಡಲಾಗುವುದು ಎಂದು ಸರಕಾರ ತಿಳಿಸಿದೆ.



ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಎಂದು ನಾಮಕರಣ ಮಾಡಲಾಗಿತ್ತು. ಅಲ್ಲದೆ, ಬೆಂಗಳೂರಿನ 'ನಮ್ಮ ಮೆಟ್ರೋ'ವಿನ ಹಲವು ನಿಲ್ದಾಣಗಳಿಗೆ ಕನ್ನಡದ ಹೆಮ್ಮೆಯ ನಾಯಕರ ಹೆಸರಿಡಲಾಗಿತ್ತು. ಮೆಜೆಸ್ಟಿಕ್ನ ನಾಡಪ್ರಭು ಕೆಂಪೇಗೌಡ ಬಸ್ ನಿಲ್ದಾಣ, ವಿಧಾನಸೌಧದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರೋ ನಿಲ್ದಾಣ, ಸರ್. ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣಗಳು ಪ್ರಯಾಣಿಕರ ಮನಸಲ್ಲಿ ಕರ್ನಾಟಕದ ಕುರಿತು ಹೆಮ್ಮೆ ಮೂಡಿಸುತ್ತಿವೆ.

ನಮ್ಮ ಮೆಟ್ರೋ: ಟಿಕೆಟ್‌ ಕೌಂಟರ್‌ನಲ್ಲೇ ಸ್ಮಾರ್ಟ್‌ ಕಾರ್ಡ್‌ ರೀಚಾರ್ಜ್‌ಗೆ ಅವಕಾಶ!

ಐತಿಹಾಸಿಕ ಮತ್ತು ಭೌಗೋಳಿಕವಾಗಿಯೂ ರೈಲು, ಬಸ್ ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಿಗೆ ವಿಶಿಷ್ಟ ಹೆಸರಿಡುವ ಸಂಪ್ರದಾಯ ರೂಡಿಯಲ್ಲಿದೆ. ಉದಾಹರಣೆಗೆ, ಬೆಂಗಳೂರಿನ ಕಂಟೇನ್ಮೆಂಟ್ ವಲಯದ ರೈಲು ನಿಲ್ದಾಣಕ್ಕೆ ದಂಡು ರೈಲು ನಿಲ್ದಾಣ ಎಂಬ ಹೆಸರಿದೆ. ಹಿಂದಿನ ಕಾಲದಲ್ಲಿ ದಂಡು ಬೆಂಗಳೂರು ನಗರದ ಹೊರವಲಯವಾಗಿತ್ತು. ರೈಲು ನಿಲ್ದಾಣವೂ ಇದೇ ಪ್ರದೇಶದಲ್ಲಿತ್ತು. ಸೈನಿಕರು ನಗರದ ಕಾವಲಿಗೋಸ್ಕರ ದಂಡುವಿನ ಬಳಿ ವಸತಿ ಹೂಡುತ್ತಿದ್ದರು. ಹೀಗಾಗಿ, ದಂಡು ರೈಲು ನಿಲ್ದಾಣ ಎಂಬ ಹೆಸರನ್ನೇ ರೈಲು ನಿಲ್ದಾಣಕ್ಕೆ ಇಡಲಾಗಿದೆ. ಇದೀಗ ಸರ್ ಎಂ ವಿಶ್ವೇಶ್ವರಯ್ಯ ಅವರ ಹೆಸರಿಡಲು ಸರ್ಕಾರ ನಿರ್ಧರಿಸುವುದು ಕನ್ನಡಿಗರಲ್ಲಿ ಸಂತಸ ಮೂಡಿಸಿದೆ.

ನವೆಂಬರ್ ಅಂತ್ಯಕ್ಕೆ ವಿಸ್ತರಿತ ಹಸಿರು ಮಾರ್ಗದಲ್ಲಿ ಮೆಟ್ರೋ ಆರಂಭ, ನೇರಳೆ ಮಾರ್ಗ ವಿಳಂಬ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ