ಆ್ಯಪ್ನಗರ

ಬೆಂಗಳೂರು ಬಂದ್‌: ಮುನ್ನೆಚ್ಚರಿಕೆ ಕ್ರಮವಾಗಿ 180 ರೌಡಿ ಶೀಟರ್‌ಗಳನ್ನು ವಶಕ್ಕೆ ಪಡೆದ ಪೊಲೀಸರು

ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲು ಕಲ್ಪಿಸುವ ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ರಾಜ್ಯದ ಜನತೆಗೆ ಮುಷ್ಕರದ ಬಂದ್‌ ಬಿಸಿ ತಟ್ಟಿದೆ.

Vijaya Karnataka Web 13 Feb 2020, 8:04 am
ಬೆಂಗಳೂರು: ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ನಡೆಸುತ್ತಿರುವ ಕರ್ನಾಟಕ ಬಂದ್‌ ಹಿನ್ನೆಲೆ ಮುನ್ನೆಚ್ಚರಿಕೆಯ ಕ್ರಮವಾಗಿ ಸುಮಾರು 180 ರೌಡಿ ಶೀಟರ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
Vijaya Karnataka Web Rowdy Sheeters


ಗುರುವಾರ ಬೆಳಗ್ಗೆ 4 ಗಂಟೆಯಿಂದ ನಗರದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದ್ದು, ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ರಾತ್ರಿ ವೇಳೆ ವಿಶೇಷ ಗಸ್ತು ನಡೆಸಿದರು. ಈ ವೇಳೆ ಅನುಮಾನಸ್ಪದವಾಗಿ ಕಾಣಿಸಿಕೊಂಡ ಕೆಲವರನ್ನು ಬಂಧಿಸಲಾಗಿದೆ.

ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಗುರುವಾರ ರಾಜ್ಯಾದ್ಯಂತ ಬಂದ್‌ ನಡೆಸಲಾಗುತ್ತಿದೆ. ಕೆಎಸ್‌ಆರ್‌ಟಿಸಿ ಸ್ಟಾಫ್‌ ಆ್ಯಂಡ್‌ ವರ್ಕರ್ಸ್ ಫೆಡರೇಷನ್‌, ಲಾರಿ ಮಾಲೀಕರ ಸಂಘ, ಬೃಹತ್‌ ಬೆಂಗಳೂರು ಹೋಟೆಲ್‌ ಮಾಲೀಕರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಸೇನೆ, ವಾಟಾಳ್‌ ನಾಗರಾಜ್‌ ಅಧ್ಯಕ್ಷತೆಯ ಕನ್ನಡ ಚಳವಳಿ ಪಕ್ಷ ಸೇರಿದಂತೆ ಹಲವು ಸಂಘಟನೆಗಳು ಬಂದ್‌ಗೆ ನೈತಿಕ ಬೆಂಬಲ ನೀಡಿವೆ.

ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲು ಕಲ್ಪಿಸುವ ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ರಾಜ್ಯದ ಜನತೆಗೆ ಮುಷ್ಕರದ ಬಂದ್‌ ಬಿಸಿ ತಟ್ಟಿದೆ. ಮುಂದೆ ಓದಿ...


ಮೆಜೆಸ್ಟಿಕ್‌ನಿಂದ ಬೆಳಗ್ಗೆ 5 ಗಂಟೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ. ಆದರೆ ಕರ್ನಾಟಕ ಬಂದ್‌ ಹಿನ್ನೆಲೆ ಪ್ರಯಾಣಿಕರ ಸಂಖ್ಯೆ ತೀರ ಇಳಿಮುಖವಾಗಿದೆ. ಬಸ್‌ಗಳು ಖಾಲಿ ಖಾಲಿ ಓಡಾಡುತ್ತಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ