ಆ್ಯಪ್ನಗರ

ಕರ್ನಾಟಕ ಬಂದ್‌: ಕರವೇ ಮುಖಂಡ ಪ್ರವೀಣ್‌ ಶೆಟ್ಟಿ ಗೃಹ ಬಂಧನ

ಬೆಂಗಳೂರು ನಗರ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದ ವರೆಗೆ ಕನ್ನಡಪರ ಸಂಘಟನೆ ಕಾರ್ಯಕರ್ತರು ಮೆರವಣಿಗೆ ನಡೆಸುವ ಹಿನ್ನಲೆ ಭಾರಿ ಬಿಗಿ ಬಂದೋಬಸ್ತ್‌ ಮಾಡಲಾಗಿದ್ದು, ಕರವೇ ಮುಖಂಡ ಪ್ರವೀಣ್‌ ಶೆಟ್ಟಿ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ.

Vijaya Karnataka Web 13 Feb 2020, 10:41 am
ಬೆಂಗಳೂರು: ರಾಜ್ಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಸೇರಿದಂತೆ ಹಲವು ಬೇಡಿಕೆಗಳುಳ್ಳ ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ ಮೆರವಣಿಗೆ ಸಾಧ್ಯತೆ ಹಿನ್ನೆಲೆ ಕರ್ನಾಟಕ ರಕ್ಷಣ ವೇದಿಕೆ ಮುಖಂಡ ಪ್ರವೀಣ್ ಶೆಟ್ಟಿ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ಆರ್.ಟಿ ನಗರದಲ್ಲಿ ಇರುವ ನಿವಾಸದಲ್ಲೇ ಗೃಹ ಬಂಧನಕ್ಕೆ ಒಳಪಡಿಸಲಾಗಿದೆ.
Vijaya Karnataka Web Praveen Shetty


ನಗರ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಕನ್ನಡಪರ ಸಂಘಟನೆ ಕಾರ್ಯಕರ್ತರು ಮೆರವಣಿಗೆ ನಡೆಸುವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಉದ್ಯಾನ & ನಗರ ರೈಲು ನಿಲ್ದಾಣ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋರ್‌ ಹಾಗೂ ಪಶ್ಚಿಮ ವಿಭಾಗ ಡಿಸಿಪಿ ನೇತೃತ್ವದಲ್ಲಿ ಬಂದೋಬಸ್ತ್ ಹಾಕಲಾಗಿದೆ.

ನಗರದ ಟೌನ್‌ ಹಾಲ್‌ ಮುಂದೆ ಪೊಲೀಸರು ಭಾರಿ ಬಿಗಿ ಭದ್ರತೆ ಒದಗಿಸಿದ್ದಾರೆ. ಎರಡು ಕೆಎಸ್‌ಆರ್‌ಪಿ ತುಕಡಿಗಳು ಕಾರ್ಯ ಪ್ರವೃತ್ತರಾಗಿದ್ದು, ಸುಮಾರು 100 ಜನ ಪೊಲೀಸರು ಟೌನ್‌ ಹಾಲ್‌ಗೆ ಸರ್ಪಗಾವಲು ಹಾಕಿದ್ದಾರೆ. ಸ್ಥಳಕ್ಕೆ ಆಗಮಿಸಿದ ಡಿಸಿಪಿ ಚೇತನ್‌ ಸಿಂಗ್‌ ರಾಥೋರ್‌ ಭದ್ರತೆ ಪರಿಶೀಲನೆ ನಡೆಸಿದರು. ಕರ್ನಾಟಕ ಬಂದ್‌ ನಡುವೆ ಜನ ಜೀವನ ಎಂದಿನಂತೆ ಇದೆ. ಯಾವುದೇ ಅಡಚಣೆ ಉಂಟಾಗಿಲ್ಲ.

ಕರ್ನಾಟಕ ಬಂದ್‌ live: ಆಟೊ, ಟ್ಯಾಕ್ಸಿ ಸೇವೆಯಿಲ್ಲ, ಬಸ್‌ಗಳು ಲಭ್ಯ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ