ಆ್ಯಪ್ನಗರ

ಬೆಂಗಳೂರು: ರಸ್ತೆ ಗುಂಡಿಗೆ ಮತ್ತೊಂದು ಬಲಿ

ದೇವನಹಳ್ಳಿ ತಾಲೂಕಿನ ಶೆಟ್ಟೆರಹಳ್ಳಿ ಬಳಿ ಘಟನೆ.

Vijaya Karnataka Web 10 Oct 2017, 7:19 pm
ಬೆಂಗಳೂರು: ರಸ್ತೆ ಗುಂಡಿಗಳಿಗೆ ಬಲಿಯಾಗುತ್ತಿರುವ ಸಂಖ್ಯೆ ಹೆಚ್ಚಾಗಿದೆ. ಮಂಗಳವಾರ ಮತ್ತೊಬ್ಬ ವಾಹನ ಸವಾರರು ರಸ್ತೆ ಗುಂಡಿಗೆ ಬಲಿಯಾಗಿದ್ದಾರೆ.
Vijaya Karnataka Web bangalore one more killed due to pothole
ಬೆಂಗಳೂರು: ರಸ್ತೆ ಗುಂಡಿಗೆ ಮತ್ತೊಂದು ಬಲಿ


ದೇವನಹಳ್ಳಿಯಿಂದ ದೊಡ್ಡಬಳ್ಳಾಪುರಕ್ಕೆ ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯರು ಹೋಂಡಾ ಆಕ್ಟೀವಾ ವಾಹನದಲ್ಲಿ ತೆರಳುತ್ತಿದ್ದಾಗ ರಸ್ತೆ ಗುಂಡಿ ತಪ್ಪಿಸಲು ಹೋಗಿ ರಸ್ತೆಯಲ್ಲಿ ಬಿದ್ದಿದ್ದಾರೆ.

ಹಿಂಬದಿಯಿಂದ ಬಂದ ಲಾರಿ ಒಬ್ಬರ ಮೇಲೆ ಹರಿದು ಸ್ಥಳದಲ್ಲೇ ಒಬ್ಬರು ಮೃತಪಟ್ಟಿದ್ದಾರೆ.

ಹಿಂಬದಿ ಕುಳಿತಿದ್ದ ದೇವನಹಳ್ಳಿ ತಾಲೂಕಿನ ಕುಂದಾಣ ನಿವಾಸಿ ವೀಣಾ (18) ಮೃತರು.

ಇದೇ ಗ್ರಾಮದ ನಿವಾಸಿ ವಿಜಿ (19) ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಗೆ ದಾಖಲಿಸಲಾಗಿದೆ.

ರಸ್ತೆ ಗುಂಡಿಗಳಿಂದ ಹಲವಾರು ಅಪಘಾತಗಳಾಗುತ್ತಿದ್ದು ಕೂಡಲೇ ರಸ್ತೆ ರಿಪೇರಿ ಕಾಮಗಾರಿ ಕೈಗೊಳ್ಳಬೇಕೆಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇದರಿಂದ ದೊಡ್ಡಬಳ್ಳಾಪುರ-ದೇವನಹಳ್ಳಿ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Bangalore: one more killed due to pothole

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ