ಆ್ಯಪ್ನಗರ

ಭೀಮಣ್ಣ ಖಂಡ್ರೆಗೆ ಬಸವ ಭೂಷಣ ಪ್ರಶಸ್ತಿ

ಮೇ 3 ರಂದು ದುಬೈನ ಜೆಎಸ್ ಎಸ್ ಇಂಟರ್ ನ್ಯಾಷನಲ್ ಪ್ರೈವೇಟ್ ಸ್ಕೂಲ್ ನಲ್ಲಿ ನಡೆಯುವ ವಿಶ್ವ ಗುರು ಬಸವಣ್ಣನವರ 886 ನೇ ಜಯಂತಿ ಕಾರ್ಯಕ್ರಮದ ಸಮಾರಂಭದಲ್ಲಿ ಭೀಮಣ್ಣ ಖಂಡ್ರೆಗೆ ಬಸವ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

Vijaya Karnataka Web 1 May 2019, 6:02 pm
ಬೆಂಗಳೂರು: ದುಬೈ ಬಸವ ಸಮಿತಿ ವತಿಯಿಂದ ಪ್ರತಿ ವರ್ಷ ನೀಡುವ ಪ್ರತಿಷ್ಠಿತ ಬಸವಭೂಷಣ ಪ್ರಶಸ್ತಿಯನ್ನು ಮಾಜಿ ಸಚಿವ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆಯ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆಗೆ ನೀಡಲಾಗಿದೆ.
Vijaya Karnataka Web ಭೀಮಣ್ಣ ಖಂಡ್ರೆ
ಭೀಮಣ್ಣ ಖಂಡ್ರೆ


ಈ ಕುರಿತು ದುಬೈ ಬಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಲಿಂಗದಳ್ಳಿ ಪತ್ರಿಕಾ ಪ್ರಕಟಣೆಯಲ್ಲಿ ನೀಡಿದ್ದು, ಸಮಾಜದಲ್ಲಿ ಶೈಕ್ಷಣಿಕ ಹಾಗೂ ಸಾಮಾಜಿಕ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ಇಳಿವಯಸ್ಸಿನಲ್ಲಿಯೂ ಸಮಾಜದ ಏಳಿಗೆಗಾಗಿ ನಿರಂತರ ಸೇವೆ ಸಲ್ಲಿಸುತ್ತಿರುವ ಬಸವಾನುಯಾಯಿಯಾಗಿ ಶರಣರ ತತ್ವಗಳನ್ನು ಪಾಲಿಸಿಕೊಂಡು ಬರುತ್ತಿರುವ ಹಿರಿಯ ಜೀವಿಗಳಾದ ಭೀಮಣ್ಣ ಖಂಡ್ರೆ ಅವರ ಸಮಾಜ ಸೇವೆಯನ್ನು ಪರಿಗಣಿಸಿ ಈ ವರ್ಷದ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಮೇ 3 ರಂದು ದುಬೈನ ಜೆಎಸ್ ಎಸ್ ಇಂಟರ್ ನ್ಯಾಷನಲ್ ಪ್ರೈವೇಟ್ ಸ್ಕೂಲ್ ನಲ್ಲಿ ನಡೆಯುವ ವಿಶ್ವ ಗುರು ಬಸವಣ್ಣನವರ 886 ನೇ ಜಯಂತಿ ಕಾರ್ಯಕ್ರಮದ ಸಮಾರಂಭದಲ್ಲಿ ಭೀಮಣ್ಣ ಖಂಡ್ರೆಗೆ ಬಸವ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಆನಂದಪುರ ಮುರುಘಾ ಮಠದ ಡಾ. ಮಲ್ಲಿಕಾರ್ಜುನ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಜಡೆ ಸಂಸ್ಥಾನ ಮಠದ ಡಾ. ಮಹಾಂತಸ್ವಾಮೀಜಿ, ಶಿವಮೊಗ್ಗ ಬಸವ ಕೇಂದ್ರದ ಬಸವ ಮರುಳಸಿದ್ದ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ.

ಜಿ ಕನ್ನಡ ಸರಿಗಮಪ ಕಾರ್ಯಕ್ರಮ ವಿನ್ನರ್ ಚೆನ್ನಪ್ಪ ಹುದ್ದಾರ್ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದು ಮಾತನಾಡಿಸುವ ಗೊಂಬೆ ಖ್ಯಾತಿಯ ಸುಮಾ ರಾಜಕುಮಾರ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ