ಹೊಸದಿಲ್ಲಿ/ ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಾ.17ಕ್ಕೆ ಮುಂದೂಡಿದೆ. ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ನೇತೃತ್ವದ ಪೀಠ, ಕರ್ನಾಟಕ ಸರಕಾರಕ್ಕೆ ಅಫಿಡವಿಟ್ ಸಲ್ಲಿಸಲು ಅವಕಾಶ ನೀಡಿ ವಿಚಾರಣೆಯನ್ನು ಮಾ.17ಕ್ಕೆ ಮುಂದೂಡಿತು.
ನಿಗದಿತ ಅವಧಿಯೊಳಗೆ ಹಾಲಿ ಇರುವ 198 ವಾರ್ಡ್ಗಳಿಗೆ ಚುನಾವಣೆ ನಡೆಸಬೇಕೆಂದು ಹೈಕೋರ್ಟ್ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಸುಪ್ರೀಂ ಕೋರ್ಟ್, ವಿಚಾರಣೆಯನ್ನು ಫೆ.9ಕ್ಕೆ ಮುಂದೂಡಿತ್ತು. ಅದರಂತೆ ಮಂಗಳವಾರ ವಿಚಾರಣೆ ನಡೆಸಿ ಮುಂದಿನ ವಿಚಾರಣೆಯನ್ನು ಮಾ.17ಕ್ಕೆ ಮುಂದೂಡಿತು.
ಹಾಲಿ ಇರುವ 198 ವಾರ್ಡ್ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಳ, ಕೆಎಂಸಿ ಕಾಯಿದೆಗೆ ತಿದ್ದುಪಡಿ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಬಿಬಿಎಂಪಿಗೆ ಚುನಾವಣೆ ನಡೆಸಲು ಕಾಲಾವಕಾಶ ನೀಡಬೇಕೆಂದು ಕೋರಿದ್ದ ಸರಕಾರ ಸುಪ್ರೀಂ ಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಬೇಕಿತ್ತು. ಅಲ್ಲದೆ, ಚುನಾವಣಾ ಆಯೋಗ ಹಾಗೂ ಪ್ರತಿವಾದಿಗಳು ಕೂಡ ಆಕ್ಷೇಪಣೆ ಸಲ್ಲಿಸಬೇಕಾಗಿತ್ತು. ಆದರೆ, ಸರಕಾರ ಇನ್ನೂ ಅಫಿಡವಿಟ್ ಸಲ್ಲಿಸಿಲ್ಲ.
ಐಷಾರಾಮಿ ಕಾರು, ವಿದೇಶಿ ಮದ್ಯ, ಹಣ, ಎಫ್ಡಿ.. ಎಸಿಬಿ ಬಲೆಗೆ ಬಿದ್ದ 'ದೇವೇಂದ್ರ'ನ ಲೀಲಾವಿಲಾಸ..!
ಹೀಗಾಗಿ, ಪ್ರತಿವಾದಿಗಳು ಹಾಗೂ ಆಯೋಗ ಕೂಡ ಪ್ರಮಾಣಪತ್ರಗಳನ್ನು ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಅಫಿಡವಿಟ್ ಸಲ್ಲಿಸುವಂತೆ ಸರಕಾರಕ್ಕೆ ಸೂಚಿಸಿದ ನ್ಯಾಯಾಲಯ, ವಿಚಾರಣೆಯನ್ನು ಮಾ.17ಕ್ಕೆ ಮುಂದೂಡಿದೆ.
ನಿಗದಿತ ಅವಧಿಯೊಳಗೆ ಹಾಲಿ ಇರುವ 198 ವಾರ್ಡ್ಗಳಿಗೆ ಚುನಾವಣೆ ನಡೆಸಬೇಕೆಂದು ಹೈಕೋರ್ಟ್ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಸುಪ್ರೀಂ ಕೋರ್ಟ್, ವಿಚಾರಣೆಯನ್ನು ಫೆ.9ಕ್ಕೆ ಮುಂದೂಡಿತ್ತು. ಅದರಂತೆ ಮಂಗಳವಾರ ವಿಚಾರಣೆ ನಡೆಸಿ ಮುಂದಿನ ವಿಚಾರಣೆಯನ್ನು ಮಾ.17ಕ್ಕೆ ಮುಂದೂಡಿತು.
ಹಾಲಿ ಇರುವ 198 ವಾರ್ಡ್ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಳ, ಕೆಎಂಸಿ ಕಾಯಿದೆಗೆ ತಿದ್ದುಪಡಿ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಬಿಬಿಎಂಪಿಗೆ ಚುನಾವಣೆ ನಡೆಸಲು ಕಾಲಾವಕಾಶ ನೀಡಬೇಕೆಂದು ಕೋರಿದ್ದ ಸರಕಾರ ಸುಪ್ರೀಂ ಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಬೇಕಿತ್ತು. ಅಲ್ಲದೆ, ಚುನಾವಣಾ ಆಯೋಗ ಹಾಗೂ ಪ್ರತಿವಾದಿಗಳು ಕೂಡ ಆಕ್ಷೇಪಣೆ ಸಲ್ಲಿಸಬೇಕಾಗಿತ್ತು. ಆದರೆ, ಸರಕಾರ ಇನ್ನೂ ಅಫಿಡವಿಟ್ ಸಲ್ಲಿಸಿಲ್ಲ.
ಐಷಾರಾಮಿ ಕಾರು, ವಿದೇಶಿ ಮದ್ಯ, ಹಣ, ಎಫ್ಡಿ.. ಎಸಿಬಿ ಬಲೆಗೆ ಬಿದ್ದ 'ದೇವೇಂದ್ರ'ನ ಲೀಲಾವಿಲಾಸ..!
ಹೀಗಾಗಿ, ಪ್ರತಿವಾದಿಗಳು ಹಾಗೂ ಆಯೋಗ ಕೂಡ ಪ್ರಮಾಣಪತ್ರಗಳನ್ನು ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಅಫಿಡವಿಟ್ ಸಲ್ಲಿಸುವಂತೆ ಸರಕಾರಕ್ಕೆ ಸೂಚಿಸಿದ ನ್ಯಾಯಾಲಯ, ವಿಚಾರಣೆಯನ್ನು ಮಾ.17ಕ್ಕೆ ಮುಂದೂಡಿದೆ.