ಆ್ಯಪ್ನಗರ

BBMP elections | ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸಿದ್ಧತೆ: 160 ಸ್ಥಾನ ಗೆಲ್ಲಲು ಕಾರ್ಯತಂತ್ರ ಕುರಿತು ಚರ್ಚೆ

Bengaluru: ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ. ರಾಜೇಶ್‌ ಅವರ ಪರಿಚಯಾತ್ಮಕ ಸಭೆಯಲ್ಲೇ ಚುನಾವಣೆ ಸಿದ್ಧತೆ, ಕಾರ್ಯತಂತ್ರ ಕುರಿತು ಚರ್ಚೆ ನಡೆಯಿತು. ಬೆಂಗಳೂರಿನ ಸಚಿವರು, ಶಾಸಕರ ಪ್ರತ್ಯೇಕ ಸಭೆಯೂ ನಡೆಯಿತು. ಬೆಂಗಳೂರು ದಕ್ಷಿಣ, ಕೇಂದ್ರ ಹಾಗೂ ಉತ್ತರ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾಮೋರ್ಚಾ ಅಧ್ಯಕ್ಷರು, ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು, ಪ್ರಮುಖರು, ಬೆಂಗಳೂರು ಮಹಾನಗರ ವ್ಯಾಪ್ತಿಯ ರಾಜ್ಯ ಪದಾಧಿಕಾರಿಗಳೊಂದಿಗೆ ಜಿ.ವಿ.ರಾಜೇಶ್‌ ಅವರ ಪರಿಚಯಾತ್ಮಕ ಸಭೆ ನಡೆಸಿದರು.

Edited byಹೇಮಂತ್ ಕುಮಾರ್ ಎಸ್ | Vijaya Karnataka 23 Aug 2022, 10:27 pm

ಹೈಲೈಟ್ಸ್‌:

  • ಬೆಂಗಳೂರಿನ ಸಚಿವರು, ಶಾಸಕರ ಪ್ರತ್ಯೇಕ ಸಭೆ
  • ದೊಡ್ಡಬಳ್ಳಾಪುರದಲ್ಲಿ ಬುಧವಾರ ನಡೆಯಲಿರುವ ಸಭೆ ಬಗ್ಗೆ ಚರ್ಚೆ
  • ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೆ. 11ರಂದು ಪಕ್ಷದ ರಾಜ್ಯ ಕಾರ್ಯಕಾರಿಣಿ
  • ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಿಲ್ಲ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web BBMP
ಬಿಬಿಎಂಪಿ
ಬೆಂಗಳೂರು: ಬಿಬಿಎಂಪಿ ಚುಣಾವಣೆ ಸಂಬಂಧ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಬೆಂಗಳೂರಿನ ಪಕ್ಷದ ಪ್ರಮುಖರ ಸಭೆ ನಡೆದಿದ್ದು, 160 ಸ್ಥಾನ ಗೆಲ್ಲಲು ಅನುಸರಿಸಬೇಕಾದ ಕಾರ್ಯತಂತ್ರ ಕುರಿತು ಸಮಾಲೋಚನೆ ನಡೆಯಿತು.
ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ. ರಾಜೇಶ್‌ ಅವರ ಪರಿಚಯಾತ್ಮಕ ಸಭೆಯಲ್ಲೇ ಚುನಾವಣೆ ಸಿದ್ಧತೆ, ಕಾರ್ಯತಂತ್ರ ಕುರಿತು ಚರ್ಚೆ ನಡೆಯಿತು. ಬೆಂಗಳೂರಿನ ಸಚಿವರು, ಶಾಸಕರ ಪ್ರತ್ಯೇಕ ಸಭೆಯೂ ನಡೆಯಿತು. ಬೆಂಗಳೂರು ದಕ್ಷಿಣ, ಕೇಂದ್ರ ಹಾಗೂ ಉತ್ತರ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾಮೋರ್ಚಾ ಅಧ್ಯಕ್ಷರು, ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು, ಪ್ರಮುಖರು, ಬೆಂಗಳೂರು ಮಹಾನಗರ ವ್ಯಾಪ್ತಿಯ ರಾಜ್ಯ ಪದಾಧಿಕಾರಿಗಳೊಂದಿಗೆ ಜಿ.ವಿ.ರಾಜೇಶ್‌ ಅವರ ಪರಿಚಯಾತ್ಮಕ ಸಭೆ ನಡೆಸಿದರು.
ನಿಮ್ಹಾನ್ಸ್‌ ಆವರಣದಲ್ಲಿ ಬೀದಿ ನಾಯಿ ಹಾವಳಿ ತಡೆಗೆ ಕ್ರಮ: ಹೈಕೋರ್ಟ್‌ಗೆ ಭರವಸೆ ನೀಡಿದ ಬಿಬಿಎಂಪಿ
ಬೆಂಗಳೂರು ಉಸ್ತುವಾರಿ, ಬಿಬಿಎಂಪಿ ವಾರ್ಡ್‌ ಪುನರ್‌ವಿಂಗಡಣೆ, ಮೀಸಲಾತಿ ನಿಗದಿಯಲ್ಲಿನ ಗೊಂದಲ, ಕೆಲ ಸಚಿವರು, ಶಾಸಕರು ಪಕ್ಷದ ಸಂಘಟನಾತ್ಮಕ ಸಭೆಗಳಿಂದ ದೂರ ಉಳಿದಿರುವುದು ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಹಲವರು ಪಕ್ಷದ ಪ್ರಮುಖರ ಗಮನಕ್ಕೆ ತಂದರು.

ಸಭೆ ಬಳಿಕ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ, ''ಸರಕಾರದ ಸಾಧನೆ, ಅಭಿವೃದ್ಧಿ ಕಾರ್ಯಗಳ ಜತೆಗೆ ಸಂಘಟನಾತ್ಮಕವಾಗಿ ಬಿಬಿಎಂಪಿ ಚುನಾವಣೆಯನ್ನು ಎದುರಿಸಲು ನಿರ್ಧರಿಸಲಾಗಿದೆ,'' ಎಂದರು.
BBMP elections | ಬಿಜೆಪಿಯವರು ಏಕೆ ಬಿಬಿಎಂಪಿ ಚುನಾವಣೆ ನಡೆಸುತ್ತಿಲ್ಲ?-ಡಿ.ಕೆ.ಶಿವಕುಮಾರ್ ಪ್ರಶ್ನೆ
''ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಒಂದು ವರ್ಷದ ಸಾಧನೆ ಮತ್ತು ಬಿಜೆಪಿಯ 3 ವರ್ಷದ ಸಾಧನೆ ಸಂಬಂಧ ಸೆ.8ರಂದು ನಡೆಯಲಿರುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ದೊಡ್ಡಬಳ್ಳಾಪುರದಲ್ಲಿ ಬುಧವಾರ ನಡೆಯಲಿರುವ ಸಭೆ ಬಗ್ಗೆ ಚರ್ಚೆಯಾಯಿತು. ಸೆ. 11ರಂದು ಪಕ್ಷದ ರಾಜ್ಯ ಕಾರ್ಯಕಾರಿಣಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ,'' ಎಂದು ತಿಳಿಸಿದರು.

''ಚುನಾವಣಾ ಸಂಬಂಧಿತ ಕೆಲ ಸಲಹೆಗಳನ್ನು ಸಂಘಟನಾ ಪ್ರಧಾನ ಕಾರ್ಯದರ್ಶಿಗಳ ಗಮನಕ್ಕೆ ತರುವ ಜತೆಗೆ ಚುನಾವಣಾ ರಣತಂತ್ರಗಳ ಕುರಿತು ಸಭೆಯಲ್ಲಿಚರ್ಚಿಸಲಾಯಿತು. ಸಚಿವರು, ಸಂಸದರು, ಶಾಸಕರು ಸಹ ಸಲಹೆ ನೀಡಿದರು,'' ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದರು.
BBMP: ಬಿಬಿಎಂಪಿ ಮೀಸಲಾತಿಗೆ ವಿರೋಧ: ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ಯತ್ನ
ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ಸಚಿವರಾದ ಆರ್‌.ಅಶೋಕ್‌, ವಿ.ಸೋಮಣ್ಣ ಸೇರಿದಂತೆ ಹಲವು ಶಾಸಕರು ಪಾಲ್ಗೊಂಡಿದ್ದರು.

ಯಾರಿಗೂ ಅನುಮತಿ ನೀಡಿಲ್ಲ

''ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ನನಗೆ ಯಾವುದೇ ಮನವಿ ಪತ್ರ ಬಂದಿಲ್ಲ. ನಗರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆಯಾಗಿರಬಹುದು. ಆದರೆ ಈವರೆಗೆ ಯಾರಿಗೂ ಯಾವುದೇ ಅನುಮತಿ ಕೊಟ್ಟಿಲ್ಲ. ಸರಕಾರ ಯಾವುದೇ ತೀರ್ಮಾನ ಕೂಡ ಮಾಡಿಲ್ಲ,'' ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಸ್ಪಷ್ಟಪಡಿಸಿದರು.
ಲೇಖಕರ ಬಗ್ಗೆ
ಹೇಮಂತ್ ಕುಮಾರ್ ಎಸ್
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತನಾಗಿ 2022ರಿಂದ ಕಾರ್ಯನಿರ್ವಹಿಸುತ್ತಿರುವ ಹೇಮಂತ್ ಮಾಧ್ಯಮ ರಂಗಕ್ಕೆ ಅಧಿಕೃತ ಪ್ರವೇಶ ಆಗಿದ್ದು 2011ರಲ್ಲಿ ನ್ಯೂಸ್ ಚಾನೆಲ್ ಮೂಲಕ. ಅದಕ್ಕೂ ಹಿಂದಿನಿಂದ ವಾರಪತ್ರಿಕೆಗಳಿಗೆ ಪ್ರಚಲಿತ ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಿಸಿದ ಲೇಖನಗಳ ಬರವಣಿಗೆಯಿಂದ ಬರಹದ ನಂಟು ಬೆಳೆಸಿಕೊಂಡಿದ್ದರು. ಸಿನಿಮಾ, ಕ್ರೈಂ, ರಾಜಕೀಯ, ಮೆಟ್ರೊ, ಕನ್ನಡ ಮತ್ತು ಸಂಸ್ಕೃತಿ, ಶಿಕ್ಷಣ, ರಾಷ್ಟ್ರ-ಅಂತಾರಾಷ್ಟ್ರೀಯ ವಿದ್ಯಮಾನಗಳು ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಬಗ್ಗೆ ಆಸಕ್ತಿ ವಿಸ್ತರಿಸಿಕೊಂಡಿದ್ದಾರೆ. ಟಿವಿ, ಪತ್ರಿಕೆ, ಡಿಜಿಟಲ್‌/ ವೆಬ್‌, ಕೆಲ ಸಮಯ ರೇಡಿಯೊ ಚಾನೆಲ್‌ನಲ್ಲೂ ತೊಡಗಿಸಿಕೊಂಡ ಅನುಭವಿರುವ ಇವರ ಮಂತ್ರ 'ಬದುಕು ನಿರಂತರ'. ಚಾರಣ, ರಂಗಭೂಮಿ, ಪ್ರವಾಸ, ಓದು,...ಹೀಗೆ ಒಂದಷ್ಟು ಅಭ್ಯಾಸ-ಹವ್ಯಾಸಗಳು ಜೊತೆಗಿವೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ