ಬೆಂಗಳೂರು: ಸಾರ್ವಜನಿಕ ವಲಯದ ಉದ್ದಿಮೆಗಳನ್ನು ಖಾಸಗೀಕರಣ ಮಾಡುವುದನ್ನು ಖಂಡಿಸಿ ಕಾರ್ಮಿಕ ಸಂಘಟನೆಗಳು ಹೋರಾಟಕ್ಕೆ ಇಳಿದಿವೆ. ಬೆಂಗಳೂರಿನಲ್ಲಿರುವ ಕೇಂದ್ರ ಉದ್ದಿಮೆಗಳ ಜಂಟಿ ಕ್ರಿಯಾ ಸಮಿತಿ ನವಂಬರ್ 26 ಗುರುವಾರದಂದು ಪ್ರತಿಭಟನೆಗೆ ಕರೆ ನೀಡಿದೆ. ಎಚ್.ಎ.ಎಲ್. ಕಾರ್ಮಿಕ ಸಂಘ, ಬಿ.ಇ.ಎಲ್ ವರ್ಕರ್ ಫೋರಂ, ಬಿ.ಇ.ಎಲ್ ವರ್ಕರ್ಸ್ ಯೂನಿಯನ್, ಬಿ.ಇ.ಎಮ್.ಎಲ್ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿಯು ದೇಶಾದ್ಯಂತ ಎಲ್ಲಾ ಕಾರ್ಮಿಕ ಸಂಘಟನೆಗಳ ಜೊತೆಗೂಡಿ ಒಂದು ದಿನದ ಅಖಿಲ ಭಾರತ ಮಟ್ಟದ ಮುಷ್ಕರವನ್ನು ನಡೆಸಲು ತೀರ್ಮಾನಿಸಿದೆ.
ಈ ಸಂಬಂಧ ಜಂಟಿ ಕ್ರಿಯಾ ಸಮಿತಿಯ ಸಂಚಾಲಕ ಹಾಗೂ ಬಿ.ಇ.ಎಂ.ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ದೊಮ್ಮಲೂರು ಶ್ರೀನಿವಾಸ ರೆಡ್ಡಿ ಮಾಹಿತಿ ನೀಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯನ್ನೂ ಹೊರಡಿಸಿದ್ದಾರೆ.
ಬಿಇಎಂಎಲ್ ಕರ್ನಾಟಕದಲ್ಲಿರುವ ಕೇಂದ್ರೋದ್ಯಮವಾಗಿದ್ದು, ಕೇಂದ್ರ ರಕ್ಷಣಾ ಸಚಿವಾಲಯದ ಅಧೀನದಲ್ಲಿದೆ. ಬೆಂಗಳೂರು, ಕೆಜಿಎಫ್, ಮೈಸೂರು ಹಾಗೂ ಪಾಲಕ್ಕಾಡ್ನಲ್ಲಿ ಉತ್ಪಾದನಾ ಘಟಕಗಳನ್ನು ಹೊಂದಿದೆ. ಏಷ್ಯಾದಲ್ಲಿಯೇ ಅತಿ ದೊಡ್ಡ ಸಂಶೋಧನೆ ಹಾಗೂ ಅಭಿವೃದ್ದಿ ಕೇಂದ್ರವನ್ನು ಬಿಇಎಂಎಲ್ ಸಂಸ್ಥೆ ಹೊಂದಿದೆ. 2019-20 ರ ವಾರ್ಷಿಕ ವಹಿವಾಟು 3,028 ಕೋಟಿ ರೂ. ಆಗಿದ್ದು, 63.38 ಕೋಟಿ ರೂ. ನಿವ್ವಳ ಲಾಭ ಹೊಂದಿರುವ ಸಂಸ್ಥೆಯಾಗಿದೆ.
ಮುಗಿಯದ ಮುಸುಕಿನ ಗುದ್ದಾಟ: ಮತ್ತೆ ಲಾಕೌಟ್ ಘೋಷಿಸಿದ ಟೊಯೋಟ
ಸತತ 5 ವರ್ಷಗಳಿಂದ ಲಾಭ ಗಳಿಸುತ್ತಿರುವ ಸಂಸ್ಥೆಯನ್ನು ಖಾಸಗೀಕರಣಗೊಳಿಸಲು ಸರ್ಕಾರ ಹೊರಟಿದೆ. ದೇಶದ ಸಂಪತ್ತನ್ನು ಬಹಳ ಕಡಿಮೆ ಮೊತ್ತಕ್ಕೆ ಖಾಸಗಿಯವರ ಪಾಲುಮಾಡಲಾಗುತ್ತಿದೆ ಎಂದು ಶ್ರೀನಿವಾಸರೆಡ್ಡಿ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಸಂಸ್ಥೆಯ ಉದ್ಯೋಗಿಗಳು ಮತ್ತು ಕಾರ್ಮಿಕ ಸಂಘಟನೆಗಳು ಹೋರಾಟ ಹಮ್ಮಿಕೊಂಡಿವೆ. ಎಲ್ಲಾ ಕೇಂದ್ರ ಸ್ವಾಮ್ಯದ ಉದ್ದಿಮೆಗಳ ಸಂಘಟನೆಗಳು ಜಂಟಿಯಾಗಿ ದೇಶಾದ್ಯಂತ ನವಂಬರ್ 26 ರಂದು ಪ್ರತಿಭಟನೆಯನ್ನು ನಡೆಸುವ ತೀರ್ಮಾನಕ್ಕೆ ಬಂದಿವೆ ಎಂದು ದೊಮ್ಮಲೂರು ಶ್ರೀನಿವಾಸ ರೆಡ್ಡಿ ಮಾಹಿತಿ ನೀಡಿದ್ದಾರೆ.
ರೈತ, ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಮುಷ್ಕರ
ಎಚ್ಎಎಲ್ ಕಾರ್ಮಿಕರ ಸಂಘ, ಬಿಇಎಲ್ ವರ್ಕರ್ಸ್ ಯೂನಿಟಿ ಫೋರಂ ಮತ್ತು ವರ್ಕರ್ಸ್ ಯೂನಿಯನ್, ಬೆಂಗಳೂರು, ಕೆಜಿಎಫ್, ಮೈಸೂರು ಹಾಗೂ ಪಾಲಕ್ಕಾಡಿನಲ್ಲಿರುವ ಬಿಇಎಂಎಲ್ ಕಾರ್ಮಿಕರ ಸಂಘಗಳು, ಐಟಿಐ ಕಾರ್ಮಿಕರ ಸಂಘ ಹಾಗೂ ಬಿಹೆಚ್ಈಎಲ್ ಕಾರ್ಮಿಕರ ಸಂಘಟನೆಗಳು ಒಗ್ಗಟ್ಟಿನಿಂದ ನವಂಬರ್ 26 ರಂದು ದೇಶಾದ್ಯಂತ ಮುಷ್ಕರ ನಡೆಸಲು ತೀರ್ಮಾನಿಸಿವೆ ಎಂದು ಪ್ರಧಾನ ಕಾರ್ಯದರ್ಶಿ ಆರ್ ನಾರಾಯಣ ತಿಳಿಸಿದ್ದಾರೆ.
ಜಿಲ್ಲಾ ಕಾರ್ಮಿಕ ಸಂಘಟನೆಗಳಿಂದ ಮುಷ್ಕರದ ಬಿತ್ತಿ ಪತ್ರ ಬಿಡುಗಡೆ
ಈ ಸಂಬಂಧ ಜಂಟಿ ಕ್ರಿಯಾ ಸಮಿತಿಯ ಸಂಚಾಲಕ ಹಾಗೂ ಬಿ.ಇ.ಎಂ.ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ದೊಮ್ಮಲೂರು ಶ್ರೀನಿವಾಸ ರೆಡ್ಡಿ ಮಾಹಿತಿ ನೀಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯನ್ನೂ ಹೊರಡಿಸಿದ್ದಾರೆ.
ಬಿಇಎಂಎಲ್ ಕರ್ನಾಟಕದಲ್ಲಿರುವ ಕೇಂದ್ರೋದ್ಯಮವಾಗಿದ್ದು, ಕೇಂದ್ರ ರಕ್ಷಣಾ ಸಚಿವಾಲಯದ ಅಧೀನದಲ್ಲಿದೆ. ಬೆಂಗಳೂರು, ಕೆಜಿಎಫ್, ಮೈಸೂರು ಹಾಗೂ ಪಾಲಕ್ಕಾಡ್ನಲ್ಲಿ ಉತ್ಪಾದನಾ ಘಟಕಗಳನ್ನು ಹೊಂದಿದೆ. ಏಷ್ಯಾದಲ್ಲಿಯೇ ಅತಿ ದೊಡ್ಡ ಸಂಶೋಧನೆ ಹಾಗೂ ಅಭಿವೃದ್ದಿ ಕೇಂದ್ರವನ್ನು ಬಿಇಎಂಎಲ್ ಸಂಸ್ಥೆ ಹೊಂದಿದೆ. 2019-20 ರ ವಾರ್ಷಿಕ ವಹಿವಾಟು 3,028 ಕೋಟಿ ರೂ. ಆಗಿದ್ದು, 63.38 ಕೋಟಿ ರೂ. ನಿವ್ವಳ ಲಾಭ ಹೊಂದಿರುವ ಸಂಸ್ಥೆಯಾಗಿದೆ.
ಮುಗಿಯದ ಮುಸುಕಿನ ಗುದ್ದಾಟ: ಮತ್ತೆ ಲಾಕೌಟ್ ಘೋಷಿಸಿದ ಟೊಯೋಟ
ಸತತ 5 ವರ್ಷಗಳಿಂದ ಲಾಭ ಗಳಿಸುತ್ತಿರುವ ಸಂಸ್ಥೆಯನ್ನು ಖಾಸಗೀಕರಣಗೊಳಿಸಲು ಸರ್ಕಾರ ಹೊರಟಿದೆ. ದೇಶದ ಸಂಪತ್ತನ್ನು ಬಹಳ ಕಡಿಮೆ ಮೊತ್ತಕ್ಕೆ ಖಾಸಗಿಯವರ ಪಾಲುಮಾಡಲಾಗುತ್ತಿದೆ ಎಂದು ಶ್ರೀನಿವಾಸರೆಡ್ಡಿ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಸಂಸ್ಥೆಯ ಉದ್ಯೋಗಿಗಳು ಮತ್ತು ಕಾರ್ಮಿಕ ಸಂಘಟನೆಗಳು ಹೋರಾಟ ಹಮ್ಮಿಕೊಂಡಿವೆ. ಎಲ್ಲಾ ಕೇಂದ್ರ ಸ್ವಾಮ್ಯದ ಉದ್ದಿಮೆಗಳ ಸಂಘಟನೆಗಳು ಜಂಟಿಯಾಗಿ ದೇಶಾದ್ಯಂತ ನವಂಬರ್ 26 ರಂದು ಪ್ರತಿಭಟನೆಯನ್ನು ನಡೆಸುವ ತೀರ್ಮಾನಕ್ಕೆ ಬಂದಿವೆ ಎಂದು ದೊಮ್ಮಲೂರು ಶ್ರೀನಿವಾಸ ರೆಡ್ಡಿ ಮಾಹಿತಿ ನೀಡಿದ್ದಾರೆ.
ರೈತ, ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಮುಷ್ಕರ
ಎಚ್ಎಎಲ್ ಕಾರ್ಮಿಕರ ಸಂಘ, ಬಿಇಎಲ್ ವರ್ಕರ್ಸ್ ಯೂನಿಟಿ ಫೋರಂ ಮತ್ತು ವರ್ಕರ್ಸ್ ಯೂನಿಯನ್, ಬೆಂಗಳೂರು, ಕೆಜಿಎಫ್, ಮೈಸೂರು ಹಾಗೂ ಪಾಲಕ್ಕಾಡಿನಲ್ಲಿರುವ ಬಿಇಎಂಎಲ್ ಕಾರ್ಮಿಕರ ಸಂಘಗಳು, ಐಟಿಐ ಕಾರ್ಮಿಕರ ಸಂಘ ಹಾಗೂ ಬಿಹೆಚ್ಈಎಲ್ ಕಾರ್ಮಿಕರ ಸಂಘಟನೆಗಳು ಒಗ್ಗಟ್ಟಿನಿಂದ ನವಂಬರ್ 26 ರಂದು ದೇಶಾದ್ಯಂತ ಮುಷ್ಕರ ನಡೆಸಲು ತೀರ್ಮಾನಿಸಿವೆ ಎಂದು ಪ್ರಧಾನ ಕಾರ್ಯದರ್ಶಿ ಆರ್ ನಾರಾಯಣ ತಿಳಿಸಿದ್ದಾರೆ.
ಜಿಲ್ಲಾ ಕಾರ್ಮಿಕ ಸಂಘಟನೆಗಳಿಂದ ಮುಷ್ಕರದ ಬಿತ್ತಿ ಪತ್ರ ಬಿಡುಗಡೆ