ಆ್ಯಪ್ನಗರ

ಬಿಜೆಪಿ, ಜೆಡಿಎಸ್‌ ನಾಯಕರು ಕಾಂಗ್ರೆಸ್‌ ಸೇರ್ಪಡೆಗೆ ಸಜ್ಜು : ಜ.28 ರಂದು ಸೇರ್ಪಡೆ ಕಾರ್ಯಕ್ರಮ

ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಾಗಲೇ ಪಕ್ಷ ಬಿಡಲು ಮುಖಂಡರು ಆರಂಭಿಸಿದ್ದಾರೆ. ಇದೀಗ ಜೆಡಿಎಸ್ ಹಾಗೂ ಕಾಂಗ್ರೆಸ್ ನ ಕೆಲ ಪ್ರಭಾವಿ ಮುಖಂಡರು ತಮ್ಮ ಪಕ್ಷಕ್ಕೆ ಕೈಕೊಟ್ಟು, ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

Vijaya Karnataka Web 26 Jan 2022, 6:46 am

ಹೈಲೈಟ್ಸ್‌:

  • ಚುನಾವಣೆಗೆ ತಿಂಗಳು ಬಾಕಿ ಬೆನ್ನಲ್ಲೇ ಪಕ್ಷ ಬಿಡುತ್ತಿರುವ ಮುಖಂಡರು
  • ಬಿಜೆಪಿ, ಜೆಡಿಎಸ್‌ ನಾಯಕರು ಕಾಂಗ್ರೆಸ್‌ ಸೇರ್ಪಡೆಗೆ ಸಜ್ಜು
  • ಜ.28 ರಂದು ಕಾರ್ಯಕ್ರಮದಲ್ಲಿ ಸೇರ್ಪಡೆ

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web download (98)
ಬೆಂಗಳೂರು : ಬೆಂಗಳೂರು ದಕ್ಷಿಣ ವಿಧಾಸಭಾ ಕ್ಷೇತ್ರ ವ್ಯಾಪ್ತಿಯ ಪ್ರಭಾವಿ ಬಿಜೆಪಿ, ಜೆಡಿಎಸ್‌ ನಾಯಕರು ಜ.28ರಂದು ಕಾಂಗ್ರೆಸ್‌ ಗೆ ಸೇರ್ಪಡೆಯಾಗಲಿದ್ದಾರೆ. ಕೆಪಿಸಿಸಿ ಅದ್ಯಕ್ಷ ಡಿ.ಕೆ. ಶಿವಕುಮಾರ್‌, ಡಿ.ಕೆ. ಸುರೇಶ್‌ ಹಾಗೂ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಮುಖಂಡ ಆರ್‌.ಕೆ. ರಮೇಶ್‌ ನೇತೃತ್ವದಲ್ಲಿ ಸೇರ್ಪಡೆಯಾಗಲಿದ್ದಾರೆ.
ಬೆಂಗಳೂರು ದಕ್ಷಿಣ ವಿಧಾಸಭಾ ಕ್ಷೇತ್ರದ ಜೆಡಿಎಸ್‌ ಘಟಕದ ಮಾಜಿ ಅಧ್ಯಕ್ಷರಾಗಿರುವ ಬೆಂಗಳೂರು ದಕ್ಷಿಣ ತಾಲೂಕು ಒಕ್ಕಲಿಗರ ಸಂಘದ ಖಜಾಂಚಿ ದೊಡ್ಡಕಲ್ಲಸಂದ್ರದ ಬಿ. ದೇವರಾಜು, ಬಿಜೆಪಿ ನಾಯಕ ಸುಬ್ರಹ್ಮಣ್ಯಪುರ ಗ್ರಾಪಂ ಮಾಜಿ ಅಧ್ಯಕ್ಷ ಬಾಲಕೃಷ್ಣ, ಉತ್ತರಹಳ್ಳಿ ಹೋಬಳಿ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ. ಬೈರಪ್ಪ, ಉತ್ತರಹಳ್ಳಿ ಹೋಬಳಿ ಒಕ್ಕಲಿಗರ ಕ್ಷೇಮಾಭಿವೃದ್ದಿ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ಈಶ್ವರ್‌, ಬೆಂಗಳೂರು ದಕ್ಷಿಣ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಜೆಡಿಎಸ್‌‍ನ ಭಾಗ್ಯಮ್ಮ ದೇವರಾಜು,

ಅಖಿಲ ಕರ್ನಾಟಕ ಎಚ್‌. ಡಿ. ಕುಮಾರಸ್ವಾಮಿ ಅವರ ಅಭಿಮಾನಿಗಳ ಸಂಘದ ಅಧ್ಯಕ್ಷ ನಾಗಾಭರಣ, ಉತ್ತರಹಳ್ಳಿ ಹೋಬಳಿ ಶ್ರೀ ಮಹರ್ಷಿ ವಾಲ್ಮಿಕಿ ನಾಯಕ ಸೇವಾ ಟ್ರಸ್ಟ್‌ನ ಅಧ್ಯಕ್ಷ ಮುಖಂಡ ಮಂಜುನಾಥ್‌. ಉತ್ತರಹಳ್ಳಿ ಹೋಬಳಿ ಆರ್ಯ ಈಡಿಗ ಸಮಾಜ ಸೇವಾ ಟ್ರಸ್ಟನ ಕಾರ್ಯದರ್ಶಿ ಕೆ.ವಿ. ಗೋಪಾಲ್‌, ಬಿಜೆಪಿ ಹಿರಿಯ ನಾಯಕ ಶ್ರೀನಿವಾಸ, ಜೆಡಿಎಸ್‌ ಹಿರಿಯ ವಕೀಲ ಶ್ರೀನಾಥ್‌, ಜೆಡಿಎಸ್‌ನ ಅಪ್ಪಯ್ಯ, ಮಧು, ಗಿರೀಶ್‌ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರ ನಿವಾಸದಲ್ಲಿ ಪಕ್ಷ ಸೇರ್ಪಡೆ ಸಂಬಂಧ ಮಂಗಳವಾರ ಮಾತುಕತೆ ನಡೆಯಿತು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವಿಲ್ಲ, ನಿರ್ನಾಮವಾಗಲಿದೆ: ಸಚಿವ ಅಶ್ವತ್ಥ ನಾರಾಯಣ ಕಿಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ