ಆ್ಯಪ್ನಗರ

ರೈತರ ಟ್ರ್ಯಾಕ್ಟರ್‌ ಪರೇಡ್: ಅನುಮತಿ ಕೇಳಿದರೆ ಪರಿಶೀಲನೆ, ಕಮಲ್ ಪಂತ್

ಜನವರಿ 26 ರಂದು ಬೆಂಗಳೂರಿನಲ್ಲಿ ರೈತರು ಹಮ್ಮಿಕೊಂಡಿರುವ ಟ್ರ್ಯಾಕ್ಟರ್‌ ಪರೇಡ್‌ಗೆ ಪೊಲೀಸರು ಇನ್ನೂ ಅನುಮತಿ ನೀಡಿಲ್ಲ. ಈ ಕುರಿತಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಏನು ಹೇಳಿದ್ದಾರೆ ಎಂಬ ವಿವರ ಇಲ್ಲಿದೆ.

Vijaya Karnataka Web 25 Jan 2021, 10:57 am
ಬೆಂಗಳೂರು: ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಜನವರಿ 26 ರಂದು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್‌ ಪರೇಡ್ ನಡೆಸಲಿದ್ದು ಪೊಲೀಸರು ಇದಕ್ಕೆ ಇನ್ನೂ ಅನುಮತಿ ನೀಡಿಲ್ಲ. ಈ ಕುರಿತಾಗಿ ಹೇಳಿಕೆ ನೀಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಟ್ರ್ಯಾಕ್ಟರ್‌ ಪರೇಡ್‌ಗೆ ಅನುಮತಿ ಕೇಳಿದರೆ ಪರಿಶೀಲನೆ ನಡೆಸುತ್ತೇವೆ ಎಂದಿದ್ದಾರೆ.
Vijaya Karnataka Web Kamal Pant


ಬೆಂಗಳೂರಿನಲ್ಲಿ ಮಾತನಾಡಿದ ಅವರು, ರೈತ ಸಂಘಟನೆಗಳು ಟ್ರ್ಯಾಕ್ಟರ್‌ ಪರೇಡ್‌ಗೆ ಅನುಮತಿ ಪಡೆದಿಲ್ಲ. ಅನುಮತಿ ಪಡೆದರೆ ಪರಿಶೀಲನೆ ಮಾಡಲಾಗುವುದು. ಆದರೆ ಪ್ರತಿಭಟನೆಗೆ ಅನುಮತಿ ಕೊಡಿ ಎಂದು ಪತ್ರ ಬಂದಿದೆ ಎಂದು ಹೇಳಿದರು.

ಕೃಷಿ ಕಾಯ್ದೆಗೆ ವಿರೋಧ: ರಾಜ್ಯದಲ್ಲೂ ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಪರೇಡ್

ಟ್ರ್ಯಾಕ್ಟರ್‌ ಪರೇಡ್‌ ವಿಚಾರವಾಗಿ ಮೊದಲು ಅವರು ಏನು ಮಾಡ್ತಾರೆ ನೋಡೋಣ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. ಆದರೆ ರೈತ ಸಂಘಟನೆಗಳ ಪ್ರಕಾರ ಬೆಂಗಳೂರು ನಗರದಲ್ಲಿ 2000 ಟ್ರ್ಯಾಕ್ಟರ್‌ಗಳಿಗೆ ಬದಲಾಗಿ ಸಂಖ್ಯೆ ಕಡಿತಗೊಳಿಸುವಂತೆ ಪೊಲೀಸರು ಕೇಳಿಕೊಂಡಿದ್ದಾರೆ ಎನ್ನಲಾಗಿದೆ.

ಇನ್ನು ರೈತರ ಟ್ರ್ಯಾಕ್ಟರ್‌ ಪರೇಡ್ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಟ್ರ್ಯಾಕ್ಟರ್‌ ಪರೇಡ್ ಹಾಗೂ ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ವಾಹನ ದಟ್ಟಣೆ ಉಂಟಾಗದಂತೆ ಮಾರ್ಗ ಬದಲಾವಣೆಗಳನ್ನು ಮಾಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ