ಬೆಂಗಳೂರು: ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಪೋಸ್ಟ್ ಮಾಡಿದ ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸೋದರಳಿಯ ನವೀನ್ ನನ್ನು ಬಂಧಿಸಲಾಗಿದೆ.
ಈ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಮಾಹಿತಿ ನೀಡಿದ್ದಾರೆ. ಪೊಲೀಸ್ ಪೈರಿಂಗ್ ನಡೆಸಿದ ವೇಳೆ ಮೂವರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ದುಷ್ಕರ್ಮಿಗಳಿಗೆ ಗುಂಡಿನೇಟು ತಗಲಿದೆ. ಗಲಭೆ ವೇಳೆ 60ಕ್ಕೂ ಹೆಚ್ಚು ಮಂದಿ ಪೊಲೀಸರಿಗೆ ಗಂಭೀರ ಗಾಯಗಳಾಗಿದೆ ಎಂದು ಪಂತ್ ತಿಳಿಸಿದ್ದಾರೆ.
ಗಲಭೆಗೆ ಸಂಬಂಧಿಸಿದಂತೆ ಈವರೆಗೆ 110 ಮಂದಿಯನ್ನು ಬಂಧಿಲಾಗಿದೆ ಎಂದು ಕ್ರೈಂ ವಿಭಾಗದ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಗಲಭೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದಾದ್ಯಂತ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಹೇರಲಾಗಿದೆ. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ. ಪುಲಕೇಶಿ ನಗರ, ಕಾವಲ್ ಬೈರಸಂದ್ರ, ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಬೂದಿ ಮುಚ್ಚಿದ ಕೆಂಡದಂತೆ ಇದೆ.
ಬೆಂಗಳೂರಿನಾದ್ಯಂತ ಸೆಕ್ಷನ್ 144 ಜಾರಿ, ಗಲಭೆ ಪ್ರದೇಶದಲ್ಲಿ ಕರ್ಫ್ಯೂ ಹೇರಿಕೆ
ನಡೆದದ್ದೇನು?:
ಶಾಸಕ ಅಖಂಡ ಶ್ರೀನಿವಾಸ್ ಅವರ ಸಂಬಂಧಿಕ ನವೀನ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಅವಹೇಳನಕಾರಿ ಸಂದೇಶ, ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯನ್ನು ಅಕ್ಷರಶಃ ರಣಾಂಗಣವನ್ನಾಗಿಸಿತು. ಪೋಸ್ಟ್ ಒಂದು ಕೋಮಿನ ಜನರನ್ನು ರೊಚ್ಚಿಗೆಬ್ಬಿಸಿತು. ಇದರಿಂದ ಮೇ11 ರ ರಾತ್ರಿ ಅಖಂಡ ಶ್ರೀನಿವಾಸ್ ಮನೆಗೆ ಗಲಭೆಕೋರರು ಬೆಂಕಿ ಹಚ್ಚಿದರು. ಗಲಭೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು ಸದ್ಯ ಗಲಭೆ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಈ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಮಾಹಿತಿ ನೀಡಿದ್ದಾರೆ. ಪೊಲೀಸ್ ಪೈರಿಂಗ್ ನಡೆಸಿದ ವೇಳೆ ಮೂವರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ದುಷ್ಕರ್ಮಿಗಳಿಗೆ ಗುಂಡಿನೇಟು ತಗಲಿದೆ. ಗಲಭೆ ವೇಳೆ 60ಕ್ಕೂ ಹೆಚ್ಚು ಮಂದಿ ಪೊಲೀಸರಿಗೆ ಗಂಭೀರ ಗಾಯಗಳಾಗಿದೆ ಎಂದು ಪಂತ್ ತಿಳಿಸಿದ್ದಾರೆ.
ಗಲಭೆಗೆ ಸಂಬಂಧಿಸಿದಂತೆ ಈವರೆಗೆ 110 ಮಂದಿಯನ್ನು ಬಂಧಿಲಾಗಿದೆ ಎಂದು ಕ್ರೈಂ ವಿಭಾಗದ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಗಲಭೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದಾದ್ಯಂತ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಹೇರಲಾಗಿದೆ. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ. ಪುಲಕೇಶಿ ನಗರ, ಕಾವಲ್ ಬೈರಸಂದ್ರ, ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಬೂದಿ ಮುಚ್ಚಿದ ಕೆಂಡದಂತೆ ಇದೆ.
ಬೆಂಗಳೂರಿನಾದ್ಯಂತ ಸೆಕ್ಷನ್ 144 ಜಾರಿ, ಗಲಭೆ ಪ್ರದೇಶದಲ್ಲಿ ಕರ್ಫ್ಯೂ ಹೇರಿಕೆ
ನಡೆದದ್ದೇನು?:
ಶಾಸಕ ಅಖಂಡ ಶ್ರೀನಿವಾಸ್ ಅವರ ಸಂಬಂಧಿಕ ನವೀನ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಅವಹೇಳನಕಾರಿ ಸಂದೇಶ, ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯನ್ನು ಅಕ್ಷರಶಃ ರಣಾಂಗಣವನ್ನಾಗಿಸಿತು. ಪೋಸ್ಟ್ ಒಂದು ಕೋಮಿನ ಜನರನ್ನು ರೊಚ್ಚಿಗೆಬ್ಬಿಸಿತು. ಇದರಿಂದ ಮೇ11 ರ ರಾತ್ರಿ ಅಖಂಡ ಶ್ರೀನಿವಾಸ್ ಮನೆಗೆ ಗಲಭೆಕೋರರು ಬೆಂಕಿ ಹಚ್ಚಿದರು. ಗಲಭೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು ಸದ್ಯ ಗಲಭೆ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.