ಆ್ಯಪ್ನಗರ

ಬೆಂಗಳೂರಿನಲ್ಲಿ ಮಳೆ ಹಾನಿ: ರಾಜ್ಯ ಸರ್ಕಾರಕ್ಕೆ ಇಚ್ಚಾಶಕ್ತಿ ಕೊರತೆಯಿದೆ: ಸಿದ್ದರಾಮಯ್ಯ ಆಕ್ರೋಶ

'ರಾಜ್ಯ ಬಿಜೆಪಿ ಸರ್ಕಾರಕ್ಕೆ ಇಚ್ಚಾಶಕ್ತಿ ಕೊರತೆಯಿದೆ. ನಗರದ ಬಿಬಿಎಂಪಿ, BWSSB, ಬಿಡಿಎ ನಡುವೆ ಸಮನ್ವಯ ಕೊರತೆಯಿದೆ. ಸರ್ಕಾರ ಹಣ ಬಿಡುಗಡೆ ಮಾಡದೇ ಕಾಮಗಾರಿ ವಿಳಂಬಕ್ಕೆ ಕಾರಣವಾಗಿದೆ. ಬೇಸಿಗೆ ಕಾಲದಲ್ಲಿ ಮಾಡಬೇಕಾದ ಕೆಲಸ ಮಳೆಗಾಲದಲ್ಲಿ ಮಾಡ್ತಿದ್ದಾರೆ. ರಾಜಕಾಲುವೆ ಒತ್ತುವರಿ ಮಾಡಿರುವುದು ಒಂದು ಭಾಗ. ರಾಜಕಾಲುವೆ ಸ್ವಚ್ಛ ಮಾಡದೇ ಇರುವುದು ನೀರು ನುಗ್ಗಲು ಕಾರಣವಾಗಿದೆ. ಸರ್ವ ವ್ಯಾಪಿ, ಸರ್ವ ಸ್ಪರ್ಶಿ, ಅಭಿವೃದ್ಧಿ ನಿರಂತರ ಅನ್ನೋ ಒಳ್ಳೆಯ ಪದ ಬಳಕೆ ಬಿಟ್ಟು ಕೆಲಸ ಮಾಡ್ಲಿ' - ಸಿದ್ದರಾಮಯ್ಯ

Authored byಇರ್ಷಾದ್ ಉಪ್ಪಿನಂಗಡಿ | Edited byದಿಲೀಪ್ ಡಿ. ಆರ್. | Vijaya Karnataka Web 19 May 2022, 6:30 pm

ಹೈಲೈಟ್ಸ್‌:

  • ರಾಜಕಾಲುವೆ ಒತ್ತುವರಿ ತೆರವು ಮಾಡಬೇಕು
  • ಕೆಲವರು ಅಕ್ರಮವಾಗಿ ಮನೆ ಕಟ್ಟಿಕೊಂಡು ಬಿಟ್ಟಿದಾರೆ
  • ನಮ್ಮ ಕಾಲದಲ್ಲಿ ನಾವು ತೆರವು ಮಾಡಿದ್ದೆವು: ಸಿದ್ದರಾಮಯ್ಯ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web siddu
ಬೆಂಗಳೂರಿನಲ್ಲಿ ಮಳೆ ಹಾನಿ: ರಾಜ್ಯ ಸರ್ಕಾರಕ್ಕೆ ಇಚ್ಚಾಶಕ್ತಿ ಕೊರತೆಯಿದೆ: ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಇಚ್ಚಾಶಕ್ತಿ ಕೊರತೆಯಿದೆ ಹಾಗೂ ಬಿಬಿಎಂಪಿ, BWSSB ಮತ್ತು ಬಿಡಿಎ ನಡುವೆ ಸಮನ್ವಯ ಕೊರತೆಯಿದೆ. ಇದೆಲ್ಲದರ ಪರಿಣಾಮ ಮಳೆಯ ಸಂದರ್ಭದಲ್ಲಿ ಈ ರೀತಿಯ ಸಮಸ್ಯೆಗಳು ಸೃಷ್ಟಿಯಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಸಮಸ್ಯೆ ಬಗೆಹರಿಯಬೇಕಾದಲ್ಲಿ ರಾಜಕಾಲುವೆ ಒತ್ತುವರಿ ತೆರವು ಮಾಡಬೇಕು. ಕೆಲವರು ಅಕ್ರಮವಾಗಿ ಮನೆ ಕಟ್ಟಿಕೊಂಡು ಬಿಟ್ಟಿದಾರೆ. ನಮ್ಮ ಕಾಲದಲ್ಲಿ ನಾವು ತೆರವು ಮಾಡಿದ್ದೆವು. ಈಗ ಅದು ಆಗುತ್ತಿಲ್ಲ. ಈ ನಿಟ್ಟಿನಲ್ಲಿ ರಾಜಕೀಯ ಇಚ್ಚಾಶಕ್ತಿ ಬೇಕು ಎಂದರು.

ಬೆಂಗಳೂರು ಮಳೆ ಹಾನಿ: ಸಿಎಂ ಬೊಮ್ಮಾಯಿ ಸಿಟಿ ರೌಂಡ್ಸ್ ಬೆನ್ನಲ್ಲೇ ಸಿದ್ದರಾಮಯ್ಯ ಅಖಾಡಕ್ಕೆ..!
ರಾಜ್ಯ ಬಿಜೆಪಿ ಸರ್ಕಾರಕ್ಕೆ ಇಚ್ಚಾಶಕ್ತಿ ಕೊರತೆಯಿದೆ. ನಗರದ ಬಿಬಿಎಂಪಿ, BWSSB, ಬಿಡಿಎ ನಡುವೆ ಸಮನ್ವಯ ಕೊರತೆಯಿದೆ. ಸರ್ಕಾರ ಹಣ ಬಿಡುಗಡೆ ಮಾಡದೇ ಕಾಮಗಾರಿ ವಿಳಂಬಕ್ಕೆ ಕಾರಣವಾಗಿದೆ. ಬೇಸಿಗೆ ಕಾಲದಲ್ಲಿ ಮಾಡಬೇಕಾದ ಕೆಲಸ ಮಳೆಗಾಲದಲ್ಲಿ ಮಾಡ್ತಿದ್ದಾರೆ. ರಾಜಕಾಲುವೆ ಒತ್ತುವರಿ ಮಾಡಿರುವುದು ಒಂದು ಭಾಗ. ರಾಜಕಾಲುವೆ ಸ್ವಚ್ಛ ಮಾಡದೇ ಇರುವುದು ನೀರು ನುಗ್ಗಲು ಕಾರಣವಾಗಿದೆ ಎಂದು ಹೇಳಿದರು.

ಸರ್ವ ವ್ಯಾಪಿ, ಸರ್ವ ಸ್ಪರ್ಶಿ, ಅಭಿವೃದ್ಧಿ ನಿರಂತರ ಅನ್ನೋ ಒಳ್ಳೆಯ ಪದ ಬಳಕೆ ಬಿಟ್ಟು ಕೆಲಸ ಮಾಡ್ಲಿ. ಬೆಂಗಳೂರು ಅಭಿವೃದ್ಧಿ ಖಾತೆ ಸಿಎಂ ಬಳಿಯಿದೆ. ಅವರೇ ಈ ಕೆಲಸ ಮಾಡಬೇಕು. ನಾನು ಇದ್ದಾಗ ಪ್ರತ್ಯೇಕವಾಗಿ ಬೇರೆಯವರಿಗೆ ನೀಡಿದ್ದೆ. ಈಗ ಬಿಜೆಪಿ ಸರ್ಕಾರದಲ್ಲಿ ಸಿಎಂ ಬಳಿ ಉಳಿಸಿಕೊಂಡು ನಗರದ ಸಮಸ್ಯೆಗಳು ದುಪ್ಪಟ್ಟು ಆಗಿವೆ ಎಂದು ಆರೋಪಿಸಿದರು.

ಬೆಂಗಳೂರು ಮಳೆ ಅವಾಂತರ: ಅಧಿಕಾರಿಗಳೇ ಕೂಡಲೇ ಎಚ್ಚೆತ್ತು ಕೆಲಸ ಮಾಡಿ ಅಂದ್ರು ಸಿಎಂ..!
ಬಿಬಿಎಂಪಿ ಚುನಾವಣೆ ಮುಂದೂಡಿಕೆ ಮಾಡಿರುವುದು ಇದೇ ಕಾರಣಕ್ಕೆ ಎಂದು ಆರೋಪಿಸಿದ ಸಿದ್ದರಾಮಯ್ಯ, ಸೋಲಿನ ಭೀತಿಯಿಂದ ಒಂದು ವರ್ಷ ಎಂಟು ತಿಂಗಳಿಂದ ಚುನಾವಣೆ ನಡೆಸಿಲ್ಲ. ವಾರ್ಡ್ ನಲ್ಲಿ ಜನಪ್ರತಿನಿಧಿಗಳು ಇಲ್ಲ. ಅಧಿಕಾರಿಗಳ ಕೈಗೆ ಬಿಬಿಎಂಪಿ ನೀಡಿದ್ದಾರೆ. ನಗರದ ಅಭಿವೃದ್ಧಿಯನ್ನು ಸರ್ಕಾರ ನಿರ್ಲಕ್ಷ್ಯ ಮಾಡಿದೆ. ನಾನು ಇದ್ದಾಗ ಬೆಂಗಳೂರಿಗೆ ಹಣ ಬಿಡುಗಡೆ ಮಾಡಿದ್ದೆ. ಇವರು ಬಂದ ಮೇಲೆ ಏನು ಮಾಡಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಸಿದ್ದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಅವಧಿಯಲ್ಲಿ ಯಾವುದೇ ಕೆಲಸ ಆಗಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಎಚ್ಡಿಕೆ ಅವರ ಕಾಲದಲ್ಲಿ ಅವರು ಏನ್ ಮಾಡಿದರು ಎಂಬುದನ್ನ ಮಾತನಾಡಲಿ. ರಾಜಕಾಲುವೆ ಕೆಲಸ ಮಾಡಿದವರು ಯಾರು? ನಮ್ಮ ಸರ್ಕಾರ ಇದ್ದಾಗ ಇದೆಲ್ಲವನ್ನು ಮಾಡಿದ್ದೀವಿ. ಯಾರು ಯಾರು ಎಷ್ಟೆಷ್ಟು ಹಣ ಬಿಡುಗಡೆ ಮಾಡಿದ್ರು ಎಂಬುದನ್ನು ಹೇಳಲಿ ಎಂದು ತಿರುಗೇಟು ನೀಡಿದರು.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ