ಆ್ಯಪ್ನಗರ

ಬೆಂಗಳೂರು ಮಳೆ ಅವಾಂತರ: ಅಧಿಕಾರಿಗಳೇ ಕೂಡಲೇ ಎಚ್ಚೆತ್ತು ಕೆಲಸ ಮಾಡಿ ಅಂದ್ರು ಸಿಎಂ..!

'ಮಳೆ ಬರುವಾಗ ಎಚ್ಚೆತ್ತುಕೊಳ್ಳುವುದಲ್ಲ, ಅದಕ್ಕೂ ಮುನ್ನವೇ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ರಾಜಕಾಲುವೆಗಳ ಹೂಳು ತೆಗೆದಿಲ್ಲ. ಇದರಿಂದ ನೀರು ಸರಾಗವಾಗಿ ಹರಿಯಲು ಸಾಧ್ಯವಾದರೆ ಸಮಸ್ಯೆ ಸೃಷ್ಟಿಯಾಗುತ್ತಿದೆ. ಈ ನಿಟ್ಟಿನಲ್ಲಿ ಏಕೆ ಕ್ರಮ ಕೈಗೊಂಡಿಲ್ಲ? ಮಳೆ ಹಿನ್ನೆಲೆಯಲ್ಲಿ ಚರಂಡಿ ಸ್ವಚ್ಛ ಏಕೆ ಮಾಡಿಸಿಲ್ಲ? ರಾಜಕಾಲುವೆ ಹರಿಯುವ ಪ್ರದೇಶಗಳಲ್ಲಿ ಜನರಿಗೆ ತೊಂದರೆ ಆಗುತ್ತದೆ ಎಂದು ಗೊತ್ತಿದ್ರೂ ಸ್ಥಳಾಂತರ ಮಾಡದೆ ಇದ್ದದ್ದು ಏಕೆ? ಕೂಡಲೇ ಸೂಕ್ತ ಕ್ರಮ ಕೈಗೊಳ್ಳಿ - ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

Edited byದಿಲೀಪ್ ಡಿ. ಆರ್. | Vijaya Karnataka 19 May 2022, 5:27 pm

ಹೈಲೈಟ್ಸ್‌:

  • ಬೆಂಗಳೂರು ನಗರದಲ್ಲಿ ಮಂಗಳವಾರ ಸುರಿದ ಭಾರೀ ಮಳೆಯಿಂದ ವ್ಯಾಪಕ ಹಾನಿ ಉಂಟಾಗಿದೆ
  • ಮಹಾಲಕ್ಷ್ಮಿ ಪುರ, ಸರ್ವಜ್ಞ ನಗರ, ಬ್ಯಾಟರಾಯನ ಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಹಾನಿ
  • ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರ ಪರದಾಟ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web basavaraj bommai
ಬೆಂಗಳೂರು ಮಳೆ ಅವಾಂತರ: ಅಧಿಕಾರಿಗಳೇ ಕೂಡಲೇ ಎಚ್ಚೆತ್ತು ಕೆಲಸ ಮಾಡಿ ಅಂದ್ರು ಸಿಎಂ..!
ಬೆಂಗಳೂರು: ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಲವು ತಗ್ಗು ಪ್ರದೇಶಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಸಿಟಿ ರೌಂಡ್ಸ್ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ ನಂತರದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಸಿಟಿ ರೌಂಡ್ಸ್ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಜೊತೆಗೆ ಸಿಎಂ ಬೊಮ್ಮಾಯಿ ಸಭೆ ನಡೆಸಿದರು. ಈ ಸಭೆಯಲ್ಲಿ ಬಿಬಿಎಂಪಿ ಆಯುಕ್ತ ತು‍ಷಾರ್ ಗಿರಿನಾಥ್ ಸೇರಿದಂತೆ ಬೆಂಗಳೂರು ಮಹಾನಗರ ಪಾಲಿಕೆ, ಮೆಟ್ರೋ, ಬಿಡಬ್ಲ್ಯೂ ಎಸ್‌ಎಸ್‌ ಬಿ, ಬೆಸ್ಕಾಂ ಸೇರಿದಂತೆ ಇತರ ವಿಭಾಗಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಜೊತೆಗೆ ಶಾಸಕ ಎಸ್‌. ಆರ್‌. ವಿಶ್ವನಾಥ್ ಹಾಗೂ ಸಚಿವ ಆರ್‌. ಅಶೋಕ್ ಕೂಡಾ ಇದ್ದರು.

ರಾಜಕಾಲುವೆಯ ಅಕ್ಕಪಕ್ಕದಲ್ಲಿರುವ ಮನೆಗಳ ತೆರವಿಗೆ ಕ್ರಮ: ಬಸವರಾಜ ಬೊಮ್ಮಾಯಿ
ಮಹಾ ಮಳೆಗೆ ರಾಜಧಾನಿಯಲ್ಲಿ ಸೃಷ್ಟಿಯಾದ ಸಮಸ್ಯೆಯ ಬಗ್ಗೆ ಹಾಗೂ ಕೈ ಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡ ಸಿಎಂ ಬೊಮ್ಮಾಯಿ, ರಾಜಕಾಲುವೆಗಳ ಹೂಳು ತೆಗೆಯದಿರುವ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮಳೆ ಬರುವಾಗ ಎಚ್ಚೆತ್ತುಕೊಳ್ಳುವುದಲ್ಲ, ಅದಕ್ಕೂ ಮುನ್ನವೇ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ರಾಜಕಾಲುವೆಗಳ ಹೂಳು ತೆಗೆದಿಲ್ಲ. ಇದರಿಂದ ನೀರು ಸರಾಗವಾಗಿ ಹರಿಯಲು ಸಾಧ್ಯವಾದರೆ ಸಮಸ್ಯೆ ಸೃಷ್ಟಿಯಾಗುತ್ತಿದೆ. ಈ ನಿಟ್ಟಿನಲ್ಲಿ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು ಎಂದು ತಿಳಿದು ಬಂದಿದೆ. ಮಳೆ ಹಿನ್ನೆಲೆಯಲ್ಲಿ ಚರಂಡಿ ಸ್ವಚ್ಛ ಏಕೆ ಮಾಡಿಸಿಲ್ಲ? ರಾಜಕಾಲುವೆ ಹರಿಯುವ ಪ್ರದೇಶಗಳಲ್ಲಿ ಜನರಿಗೆ ತೊಂದರೆ ಆಗುತ್ತದೆ ಎಂದು ಗೊತ್ತಿದ್ರೂ ಸ್ಥಳಾಂತರ ಮಾಡದೆ ಇದ್ದದ್ದು ಏಕೆ? ಎಂದು ಪ್ರಶ್ನಿಸಿದ ಸಿಎಂ, ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

bengaluru rains: ನಕ್ಕು ನಗಿಸುವ 'ಮೀಮ್ಸ್‌'ಗಳ ಪ್ರವಾಹ ಹರಿಸಿದೆ ಬೆಂಗಳೂರು ಮಳೆ..!
ಮತ್ತಷ್ಟು ಸಮಸ್ಯೆ ಆಗದ ನಿಟ್ಟಿನಲ್ಲಿ ಕೂಡಲೇ ರಾಜಕಾಲುವೆಗಳ ಹೂಳು ತೆಗೆಸಲು ಕ್ರಮ ಕೈಗೊಳ್ಳವೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ. ಇದಕ್ಕೆ ಯಾರ ಅನುಮತಿ ಪಡೆಯಬೇಡಿ, ನಾನೇ ಹೇಳುತ್ತಿದ್ದೇನೆ ಎಂದು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು ನಗರದಲ್ಲಿ ಮಂಗಳವಾರ ಸುರಿದ ಭಾರೀ ಮಳೆಯಿಂದ ವ್ಯಾಪಕ ಹಾನಿ ಉಂಟಾಗಿದೆ. ಮಹಾಲಕ್ಷ್ಮಿ ಪುರ, ಸರ್ವಜ್ಞ ನಗರ, ಬ್ಯಾಟರಾಯನ ಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಸಿಎಂ ಬಸವರಾಜ ಬೊಮ್ಮಾಯಿ ಸಿಟಿ ರೌಂಡ್ಸ್‌ ನಡೆಸಿದರು. ಮಳೆಯಿಂದಾದ ಹಾನಿ ಪರಿಶೀಲನೆ ಮಾಡಿದರು.
ಲೇಖಕರ ಬಗ್ಗೆ
ದಿಲೀಪ್ ಡಿ. ಆರ್.
ವಿಜಯ ಕರ್ನಾಟಕದ ಡಿಜಿಟಲ್ ಪತ್ರಕರ್ತನಾಗಿ 2019ರ ಆಗಸ್ಟ್‌ನಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡ ಟಿವಿ ನ್ಯೂಸ್ ವಾಹಿನಿಗಳಲ್ಲಿ 14 ವರ್ಷಕ್ಕೂ ಹೆಚ್ಚು ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು, ಹಸಿರು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ