ಆ್ಯಪ್ನಗರ

ಬೆಂಗಳೂರು ಸರಣಿ ಬಾಂಬ್‌ ಬ್ಲಾಸ್ಟ್‌: 11 ವರ್ಷದ ಬಳಿಕ ಪ್ರಮುಖ ಆರೋಪಿ ಅರೆಸ್ಟ್‌, ಕೇರಳದಲ್ಲಿ ಅಡಗಿದ್ದ ಖದೀಮ!

ಪ್ರಮುಖ ಆರೋಪಿಯ ಬಂಧನದ ಮೂಲಕ ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯನ್ನು ಖೆಡ್ಡಾಗೆ ಕೆಡವಿದಂತೆ ಆಗಿದೆ. 2018ರಲ್ಲಿ ಸಲೀಂ ಎಂಬ ಮತ್ತೊಬ್ಬ ಆರೋಪಿಯನ್ನು ಎಟಿಎಸ್ ಅಧಿಕಾರಿಗಳು ಕೇರಳದಲ್ಲಿ ಬಂಧಿಸಿದ್ದರು. ನಂತರ ಈತನ ಮೂಲಕ ಬಳಿಕ ಪ್ರಮುಖ ಆರೋಪಿಗಾಗಿ ಅಧಿಕಾರಿಗಳು ಬಲೆ ಬೀಸಿದ್ದರು.

Vijaya Karnataka Web 22 Sep 2020, 11:51 am
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರನ್ನು ಬೆಚ್ಚಿಬೀಳಿಸಿದ ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿಯನ್ನು ಬೆಂಗಳೂರಿನ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್)ದ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. 2008ರ ಸರಣಿ ಬಾಂಬ್‌ ಬ್ಲಾಸ್ಟ್‌ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶೋಯೆಬ್ ಎಂಬಾತನನ್ನು ಎಟಿಎಸ್‌ ಅಧಿಕಾರಿಗಳು ಕೇರಳದಲ್ಲಿ ಬಂಧಿಸಿದ್ದಾರೆ.
Vijaya Karnataka Web arrest_ED
ಸಾಂದರ್ಭಿಕ ಚಿತ್ರ


ಬ್ಲಾಸ್ಟ್‌ ನಂತರ ಪ್ರತ್ಯೇಕ ದೂರು ದಾಖಲಿಸಿಕೊಂಡಿದ್ದ ಎಟಿಎಸ್ ನಿರಂತರವಾಗಿ ತೀವ್ರ ತನಿಖೆ ನಡೆಸುತ್ತಿದ್ದರು. ಇದೀಗ ಸತತ 11 ವರ್ಷದ ಬಳಿಕ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿಂದೆ ಎಟಿಎಸ್‌ ಶೋಯಬ್‌ ವಿರುದ್ಧ ರೆಡ್‌ ಕಾರ್ನರ್‌ ನೋಟಿಸ್‌ ಕೂಡ ಜಾರಿಗೊಳಿಸಿದ್ದರು.

ಇದೀಗ ಪ್ರಮುಖ ಆರೋಪಿಯ ಬಂಧನದ ಮೂಲಕ ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯನ್ನು ಖೆಡ್ಡಾಗೆ ಕೆಡವಿದಂತೆ ಆಗಿದೆ. 2018ರಲ್ಲಿ ಸಲೀಂ ಎಂಬ ಮತ್ತೊಬ್ಬ ಆರೋಪಿಯನ್ನು ಎಟಿಎಸ್ ಅಧಿಕಾರಿಗಳು ಕೇರಳದಲ್ಲಿ ಬಂಧಿಸಿದ್ದರು. ನಂತರ ಈತನ ಮೂಲಕ ಬಳಿಕ ಪ್ರಮುಖ ಆರೋಪಿಗಾಗಿ ಅಧಿಕಾರಿಗಳು ಬಲೆ ಬೀಸಿದ್ದರು.

ಬೆಂಗಳೂರು ವಾಸಿಗಳಿಗೆ ಕಟ್ಟಡ ನಕ್ಷೆ ಮಂಜೂರಾತಿ ಶುಲ್ಕ ಏರಿಕೆಯ ಬರೆ!

2008ರ ಜುಲೈ 25ರಂದು ಮಡಿವಾಳ ಸೇರಿದಂತೆ ಬೆಂಗಳೂರಿನ ಒಟ್ಟು 9 ಕಡೆ ಬಾಂಬ್ ಸ್ಫೋಟಗಳು ನಡೆದಿದ್ದವು. ಒಟ್ಟಾರೆ ಈ ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದರು. 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಇನ್ನು ಈತ ಬೇರೆ ಯಾರಾದರು ಹೇಳಿದಕ್ಕೆ ಈ ದುಷ್ಕೃತ್ಯ ಎಸಗಿದನಾ? ಎನ್ನುವ ಬಗ್ಗೆ ತನಿಖೆ ಬಳಿಕ ಹೊರಬರಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ