ಆ್ಯಪ್ನಗರ

ಸಿದ್ದರಾಮಯ್ಯ ಚುನಾವಣಾ ಪ್ರಚಾರಕ್ಕೆ ಅಡ್ಡಿ, ಪಾಲಿಕೆ ಮಾಜಿ ಸದಸ್ಯ ಬಂಧನ!

ಆರ್‌ಆರ್‌ ನಗರದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಚುನಾವಣಾ ಪ್ರಚಾರಕ್ಕೆ ಅಡ್ಡಿ ಉಂಟು ಮಾಡಿದ್ದ ಆರೋಪದಡಿಯಲ್ಲಿ ಮಾಜಿ ಪಾಲಿಕೆ ಸದಸ್ಯ ಜಿ.ಕೆ. ವೆಂಕಟೇಶ ಬಂಧನವಾಗಿದೆ. ಈ ಕುರಿತಾದ ಹೆಚ್ಚಿನ ಮಾಹಿತಿ ಇಲ್ಲಿದೆ.

Vijaya Karnataka 28 Oct 2020, 1:14 pm
ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪ್ರಚಾರ ಭಾಷಣಕ್ಕೆ ಅಡ್ಡಿ ಉಂಟು ಮಾಡಿದ್ದ ಆರೋಪದಡಿಯಲ್ಲಿ ಮಾಜಿ ಪಾಲಿಕೆ ಸದಸ್ಯ ಜಿ.ಕೆ. ವೆಂಕಟೇಶ ಅಲಿಯಾಸ್ ಎನ್ ಟಿ ಆರ್ ಬಂಧನಕ್ಕೊಳಗಾಗಿದ್ದಾರೆ.
Vijaya Karnataka Web siddaramaiah campaign


ಮಂಗಳವಾರ ರಾತ್ರಿ ಆರ್‌ಆರ್‌ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್‌ ಪರವಾಗಿ ಸಿದ್ದರಾಮಯ್ಯ ಹಾಗೂ ಇತರ ಮುಖಂಡರು ಪ್ರಚಾರ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಜಿ.ಕೆ. ವೆಂಕಟೇಶ ಹಾಗೂ ತಂಡ ರಸ್ತೆಗೆ ಅಡ್ಡಲಾಗಿ ನಿಂತು ಪ್ರತಿಭಟನೆ ನಡೆಸಿತ್ತು.

ಆರ್‌ಆರ್ ನಗರದಲ್ಲಿ ಸಿದ್ದರಾಮಯ್ಯ ಚುನಾವಣಾ ಪ್ರಚಾರಕ್ಕೆ ಅಡ್ಡಿ, ಕಾನೂನು ಸುವ್ಯವಸ್ಥೆ ಎಲ್ಲಿದೆ? ಡಿಕೆಶಿ ಪ್ರಶ್ನೆ

ಅದಕ್ಕೂ ಮೊದಲು ಸಿದ್ದರಾಮಯ್ಯ ಕ್ಷೇತ್ರದಲ್ಲಿ ಸಂಚರಿಸುತ್ತಿದ್ದಾಗ ಮೋದಿ ಮೋದಿ ಎಂದು ಕೂಗಿ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದರು. ಬಿಜೆಪಿ ಕಾರ್ಯಕರ್ತರ ನಡೆಗೆ ಕಾಂಗ್ರೆಸ್ ಮುಖಂಡರು ಭಾರೀ ವಿರೋಧ ವ್ಯಕ್ತಪಡಿದ್ದರು.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲದಂತಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶಿರಾದಲ್ಲಿ ಬುಧವಾರ ಹೇಳಿಕೆ ನೀಡಿದ್ದರು.

ಅಲ್ಲದೆ ಸಿದ್ದರಾಮಯ್ಯ ಅವರು ಕೂಡಾ ಆರ್.ಆರ್ ನಗರದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿದ್ದ ಮುನಿರತ್ನ ಅವರೆ ಅಲ್ಲಿನ ಕಾನೂನು ಬಾಹಿರ ಚಟುವಟಿಕೆಗಳಿಗೆ, ಗೂಂಡಾಗಿರಿಗೆ ಮೂಲ ಕಾರಣ. ಸೋಲಿನ ಭಯದಿಂದ ಜಿ.ಕೆ ವೆಂಕಟೇಶ್ ಅಂಥವರನ್ನು ಮುಂದೆ ಬಿಟ್ಟು ಮುನಿರತ್ನ ಅವರೆ ಗಲಭೆ ಎಬ್ಬಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಅನುಮಾನವಿದೆ ಎಂದು ಆರೋಪ ಮಾಡಿದ್ದರು.

ಟಿ.ಬಿ ಜಯಚಂದ್ರ ಮುದಿ ಎತ್ತಾದರೆ ಪ್ರಧಾನಿ ಮೋದಿ, ಬಿಎಸ್‌ವೈ ಎಳಸು ಎತ್ತುಗಳಾ! ಸಿದ್ದರಾಮಯ್ಯ ಪ್ರಶ್ನೆ

ಘಟನೆಯ ಕುರುತಾಗಿ ಕಾಂಗ್ರೆಸ್ ದೂರು ದಾಖಲು ಮಾಡಿತ್ತು. ದೂರಿನ ಆಧಾರದಲ್ಲಿ ಎಫ್‌ಐಆರ್‌ ದಾಖಲು ಮಾಡಿಕೊಂಡಿದ್ದ ಜಾಲಹಳ್ಳಿ ಪೊಲೀಸರು ಜಿ.ಕೆ. ವೆಂಕಟೇಶ ಅಲಿಯಾಸ್ ಎನ್ ಟಿ ಆರ್ ಬಂಧಿಸಿ ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ