ಆ್ಯಪ್ನಗರ

ಶಾಸಕ ಪ್ರೀತಂ ಗೌಡ ಮೇಲೆ ಹಲ್ಲೆ: ಬಿಜೆಪಿ ಯುವಮೋರ್ಚಾ ಪ್ರತಿಭಟನೆ

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದೆ ಸುಮ್ಮನಿದ್ದಾರೆ. ರೇವಣ್ಣ ಪುತ್ರ ಸರಕಾರಿ ಕಾರಿನಲ್ಲಿ ದರ್ಬಾರ್ ನಡೆಸಿದ್ದಾರೆ. ಇಂಥ ಆಟಾಟೋಪಕ್ಕೆ ಸಿಎಂ ಕಡಿವಾಣ ಹಾಕಲಿ. ಪ್ರಕರಣ ಹಿನ್ನೆಲೆಯಲ್ಲಿ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಬಿಜೆಪಿ ಮಹಾನಗರದ ಅಧ್ಯಕ್ಷ ಪಿ.ಎನ್. ಸದಾಶಿವ ಆಗ್ರಹಿಸಿದ್ದಾರೆ.

Vijaya Karnataka Web 14 Feb 2019, 4:18 pm
ಬೆಂಗಳೂರು: ಬಿಜೆಪಿ ಶಾಸಕ ಪ್ರೀತಂ ಗೌಡ ಮೇಲಿನ ಹಲ್ಲೆ ಖಂಡಿಸಿ ಬಿಜೆಪಿ ಯುವ ಮೋರ್ಚಾದಿಂದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.
Vijaya Karnataka Web BJP


ಸಿಎಂ ಕುಮಾರಸ್ವಾಮಿ ಹಾಗೂ ಸಚಿವ ರೇವಣ್ಣ ಅವರು ಹಾಸನ ಹಾಗೂ ಮಂಡ್ಯ ಜಿಲ್ಲೆಯನ್ನು ತಮ್ಮ ಸ್ವಂತ ಆಸ್ತಿಯೆಂಬಂತೆ ಭಾವಿಸಿ ರಾಜಕಾರಣ ಮಾಡುತ್ತಿದ್ದಾರೆ. ಅವರ ಪಕ್ಷದ ಕಾರ್ಯಕರ್ತರು ಗೂಂಡಾಗಿರಿ ನಡೆಸುತ್ತಿದ್ದರೂ ಸಿಎಂ ಮೂಕ ಪ್ರೇಕ್ಷರಂತೆ ವರ್ತಿಸುತ್ತಿದ್ದಾರೆ. ಸಿಎಂ ಹಿಂದೊಮ್ಮೆ ಮಂಡ್ಯದಲ್ಲಿ ಶೂಟ್ ಮಾಡಿ ಎಂದಿದ್ದರು.

ಈಗ ಜನಪ್ರತಿನಿಧಿ ಮನೆ ಮೇಲೆ ಕಲ್ಲು ‌ಎಸೆಯುವಂತೆ ಪ್ರೇರೇಪಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದೆ ಸುಮ್ಮನಿದ್ದಾರೆ. ರೇವಣ್ಣ ಪುತ್ರ ಸರಕಾರಿ ಕಾರಿನಲ್ಲಿ ದರ್ಬಾರ್ ನಡೆಸಿದ್ದಾರೆ. ಇಂಥ ಆಟಾಟೋಪಕ್ಕೆ ಸಿಎಂ ಕಡಿವಾಣ ಹಾಕಲಿ. ಪ್ರಕರಣ ಹಿನ್ನೆಲೆಯಲ್ಲಿ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಬಿಜೆಪಿ ಮಹಾನಗರದ ಅಧ್ಯಕ್ಷ ಪಿ.ಎನ್. ಸದಾಶಿವ ಆಗ್ರಹಿಸಿದ್ದಾರೆ.

ಸಿಎಂ ಅಧಿಕಾರ ವಹಿಸಿಕೊಂಡ ಬಳಿಕ ತಮ್ಮ ಪಕ್ಷದ ಕಾರ್ಯಕರ್ತರಿಗೆ ಬಿಜೆಪಿ ವಿರುದ್ಧ ದಂಗೆ ಏಳುವಂತೆ ಕರೆ ನೀಡಿದ್ದರು. ಅದರಂತೆ ಅವರ ಪಕ್ಷದ ಬೆಂಬಲಿಗರು ನಡೆದುಕೊಳ್ಳುತ್ತಿದ್ದಾರೆ. ಆಡಿಯೊ ಟೇಪ್‌ನಲ್ಲಿ ಸತ್ಯ ಇಲ್ಲದಿದ್ದರೂ ತಿರುಚಿ ತಪ್ಪು ಮಾಹಿತಿಯನ್ನು ಜನರಿಗೆ ರವಾನಿಸಿದ್ದಾರೆ. ಪ್ರೀತಂ ಗೌಡ ಮನೆ ಮೇಲೆ ದಾಳಿ ನಡೆಸಿರುವುದಕ್ಕೆ ಸಿಎಂ ಕುಮಾರಸ್ವಾಮಿ ಹಾಗೂ ಸಚಿವ ರೇವಣ್ಣ ರಾಜ್ಯದ ಜನರ ಕ್ಷಮೆಯಾಚಿಸಲಿ ಎಂದು ಬಿಜೆಪಿ ಮಹಾನಗರ ಯುವ ಮೋರ್ಚಾ ಅಧ್ಯಕ್ಷ ಸಪ್ತಗಿರಿ ಗೌಡ ಹೇಳಿದ್ದಾರೆ.

ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರು ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿದ್ದರಿಂದ ಅವರನ್ನು ಪೊಲೀಸರು ಬಂಧಿಸಿ ವಾಹನದಲ್ಲಿ ಠಾಣೆಗೆ ಕರೆದೊಯ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ