ಆ್ಯಪ್ನಗರ

Bomb Blast: ಕೈ ಶಾಸಕ ಮುನಿರತ್ನ ನಿವಾಸದ ಬಳಿ ಸ್ಪೋಟ - ವ್ಯಕ್ತಿ ದೇಹ ಛಿದ್ರ ಛಿದ್ರ

ಕಾಂಗ್ರೆಸ್ ಶಾಸಕ ಮುನಿರತ್ನ ನಿವಾಸದ ಬಳಿ ಸ್ಪೋಟ ಸಂಭವಿಸಿದ್ದು, ವ್ಯಕ್ತಿಯೊಬ್ಬರ ದೇಹ ಛಿದ್ರ ಛಿದ್ರವಾಗಿದೆ ಎಂದು ವರದಿಯಾಗಿದೆ.

Vijaya Karnataka Web 19 May 2019, 3:07 pm
ಬೆಂಗಳೂರು: ಕಾಂಗ್ರೆಸ್ ಶಾಸಕ ಮುನಿರತ್ನ ನಿವಾಸದ ಬಳಿ ಸ್ಪೋಟ ಸಂಭವಿಸಿದ್ದು, ವ್ಯಕ್ತಿಯೊಬ್ಬರ ದೇಹ ಛಿದ್ರ ಛಿದ್ರವಾಗಿದೆ ಎಂದು ವರದಿಯಾಗಿದೆ.
Vijaya Karnataka Web bomba


ಮನೆ ಕೆಲಸಗಾರ ವೆಕಂಟೇಶ್ ಮೃತ ದುರ್ದೈವಿ. ವಯಾಲಿಕಾವಲ್‌ನ 8ನೇ ಮುಖ್ಯರಸ್ತೆಯಲ್ಲಿರುವ ಶಾಸಕರ ನಿವಾಸದ ಬಳಿ ಈ ದುರ್ಘಟನೆ ಸಂಭವಿಸಿದೆ.

ಸಿಲಿಂಡರ್ ಸ್ಪೋಟದಿಂದ ಈ ಘಟನೆ ಸಂಭವಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಆಯುಕ್ತರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಶಾಸಕ ಮುನಿರತ್ನ ಸಹೋದರ ರೌಡಿ ಶೀಟರ್ ಕೊರಂಗು ಕೃಷ್ಣ ತನ್ನ ಸುರಕ್ಷತೆಗಾಗಿ ಯಾವಾಗಲೂ ಬಾಂಬ್‌ಗಳನ್ನು ಇಟ್ಟುಕೊಂಡು ಓಡಾಡುವುದು ಮಾಮೂಲು. ಆತ ಏನಾದರೂ ಬಂದಿದ್ದನೇ ಎನ್ನುವ ಕೋನದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಶಾಸಕ ಮುನಿರತ್ನ ಸಹೋದರ ರೌಡಿ ಶೀಟರ್ ಕೊರಂಗು ಕೃಷ್ಣ ತನ್ನ ಸುರಕ್ಷತೆಗಾಗಿ ಯಾವಾಗಲೂ ಬಾಂಬ್‌ಗಳನ್ನು ಇಟ್ಟುಕೊಂಡು ಓಡಾಡುವುದು ಮಾಮೂಲು. ಆತ ಏನಾದರೂ ಬಂದಿದ್ದನೇ ಎನ್ನುವ ಕೋನದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ