ಆ್ಯಪ್ನಗರ

ಗಾಯಾಳುವಿಗೆ ನೆರವಾದ ಬಿಎಂಟಿಸಿ ಸಿಬ್ಬಂದಿಗೆ ಗೌರವ

ಅಪಘಾತದಲ್ಲಿ ಗಾಯಗೊಂಡು ರಸ್ತೆ ಬದಿ ಬಿದ್ದಿದ್ದ ಗಾಯಾಳುವನ್ನು ಸಕಾಲಕ್ಕೆ ಆಸ್ಪತೆಗೆ ಸೇರಿಸಿ ಮಾನವೀಯತೆ ಮೆರೆದ ಬಿಎಂಟಿಸಿ ಚಾಲಕ ವೈ.ಎನ್‌. ಗಂಗಾಧರ್‌ ಮತ್ತು ನಿರ್ವಾಹಕ ಟಿ. ಶ್ರೀನಿವಾಸ್‌ ಅವರು ಹಾಸ್‌ಮ್ಯಾಟ್‌ ಆಸ್ಪತ್ರೆ ವತಿಯಿಂದ ನೀಡಲಾಗುವ ಪರೋಪಕಾರಿ (ಗುಡ್‌ ಸಮರಿಟನ್‌) ಪ್ರಶಸ್ತಿಗೆ ಭಾಜನರಾಗಿದ್ದಾರೆ.

Vijaya Karnataka 3 Feb 2019, 5:00 am
ಬೆಂಗಳೂರು: ಅಪಘಾತದಲ್ಲಿ ಗಾಯಗೊಂಡು ರಸ್ತೆ ಬದಿ ಬಿದ್ದಿದ್ದ ಗಾಯಾಳುವನ್ನು ಸಕಾಲಕ್ಕೆ ಆಸ್ಪತೆಗೆ ಸೇರಿಸಿ ಮಾನವೀಯತೆ ಮೆರೆದ ಬಿಎಂಟಿಸಿ ಚಾಲಕ ವೈ.ಎನ್‌. ಗಂಗಾಧರ್‌ ಮತ್ತು ನಿರ್ವಾಹಕ ಟಿ. ಶ್ರೀನಿವಾಸ್‌ ಅವರು ಹಾಸ್‌ಮ್ಯಾಟ್‌ ಆಸ್ಪತ್ರೆ ವತಿಯಿಂದ ನೀಡಲಾಗುವ ಪರೋಪಕಾರಿ (ಗುಡ್‌ ಸಮರಿಟನ್‌) ಪ್ರಶಸ್ತಿಗೆ ಭಾಜನರಾಗಿದ್ದಾರೆ.
Vijaya Karnataka Web bmtc driver facilitated by hospital
ಗಾಯಾಳುವಿಗೆ ನೆರವಾದ ಬಿಎಂಟಿಸಿ ಸಿಬ್ಬಂದಿಗೆ ಗೌರವ


ನಗರದ ಪ್ರೆಸ್‌ಕ್ಲಬ್‌ನಲ್ಲಿ ಹಾಸ್‌ಮ್ಯಾಟ್‌ ಆಸ್ಪತ್ರೆ ವತಿಯಿಂದ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ಥಾಮಸ್‌ ಚಾಂಡಿ ಅವರು ಗಂಗಾಧರ್‌ ಮತ್ತು ಶ್ರೀನಿವಾಸ್‌ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

''ಆಸ್ಪತ್ರೆಯ ಕಳೆದ 18 ವರ್ಷಗಳಿಂದ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ,''ಎಂದು ತಿಳಿಸಿದರು.

ಘಟನೆ ವಿವರ: ಕಳೆದ ಡಿ. 28ರ ರಾತ್ರಿ 8 ಗಂಟೆಯ ವೇಳೆ ಯಲಹಂಕ - ನೆಲಮಂಗಲ ಮಾರ್ಗದಲ್ಲಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಪೇದೆ ಸಿದ್ದರಾಜು ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದರೂ ಯಾರೂ ನೆರವಿಗೆ ಧಾವಿಸಿರಲಿಲ್ಲ. ಈ ವೇಳೆ ರೂಟ್‌ ನಂ.407ರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗಂಗಾಧರ್‌ ಮತ್ತು ಶ್ರೀನಿವಾಸ್‌, ಸಿದ್ದರಾಜು ಸ್ಥಿತಿ ನೋಡಿ ಆಸ್ಪತ್ರೆಗೆ ಸೇರಿಸಲು ಮುಂದಾದಾಗ, ಅಪಘಾತಕ್ಕೆ ಇವರೇ ಕಾರಣ ಎಂದು ಸಾರ್ವಜನಿಕರು ಅವರ ಮೇಲೆ ಮುಗಿಬಿದ್ದಿದ್ದರು. ಆಗ ಬಸ್‌ನಲ್ಲಿದ್ದ ಪ್ರಯಾಣಿಕರು ಘಟನೆಯ ಕುರಿತು ಮನವರಿಕೆ ಮಾಡಿಕೊಟ್ಟಿದ್ದಾರೆ. ನಂತರ ಬಸ್‌ನಲ್ಲಿಯೇ ಸಿದ್ದರಾಜುರನ್ನು ಆಸ್ಪತ್ರೆಗೆ ಕರೆದು ಸಕಾಲಕ್ಕೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.

ಕಾರ್ಯಕ್ರಮದಲ್ಲಿ ಆಸ್ಪತ್ರೆಯ ವೈದ್ಯ ನಿರ್ದೇಶಕ ಡಾ. ಅಜಿತ್‌ ಬಿ. ರಾಯನ್‌, ಡಾ. ವಿವೇಕ್‌ ಮೊದಲಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ