ಆ್ಯಪ್ನಗರ

ಬಿಎಂಟಿಸಿ ಬಸ್‌ಗಳಲ್ಲಿ ಕಳವು ಮಾಡುತ್ತಿದ್ದವರ ಬಂಧನ

ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಕರ ಪರ್ಸ್‌, ಮೊಬೈಲ್‌ಫೋನ್‌, ಚಿನ್ನಾಭರಣ ದೋಚುತ್ತಿದ್ದ ಮೂವರನ್ನು ಮಾರತ್ತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Vijaya Karnataka 17 Apr 2019, 5:00 am
ಬೆಂಗಳೂರು: ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಕರ ಪರ್ಸ್‌, ಮೊಬೈಲ್‌ಫೋನ್‌, ಚಿನ್ನಾಭರಣ ದೋಚುತ್ತಿದ್ದ ಮೂವರನ್ನು ಮಾರತ್ತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
Vijaya Karnataka Web pick pocket


ಗೋರಿಪಾಳ್ಯದ ಸೈಯದ್‌ ಅಕ್ಮಲ್‌(51), ಪಾದರಾಯನಪುರದ ಫೈಜಾನ್‌(25) ಮತ್ತು ಅಸ್ಲಂ ಪಾಷಾ (46) ಬಂಧಿತರು. ಇವರಿಂದ 6 ಲಕ್ಷ ರೂ. ಮೌಲ್ಯದ 22 ಮೊಬೈಲ್‌ಫೋನ್‌ಗಳು ಮತ್ತು 113 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿರುವುದಾಗಿ ವೈಟ್‌ಫೀಲ್ಡ್‌ ಡಿಸಿಪಿ ಅಬ್ದುಲ್‌ ಅಹದ್‌ ತಿಳಿಸಿದರು.

ಜೆ.ಜೆ.ನಗರ ಪೊಲೀಸ್‌ ಠಾಣೆ ರೌಡಿಶೀಟರ್‌ ಆಗಿರುವ ಗೋರಿಪಾಳ್ಯದ ಅಸ್ಲಂ ಪಾಷಾ, ತನ್ನ ಮಗ ಅಫ್ಜಲ್‌ ಎಂಬಾತನ ಜೊತೆ ಸೇರಿ ಒಂದು ಗ್ಯಾಂಗ್‌ ಕಟ್ಟಿಕೊಂಡಿದ್ದ. ಆರೋಪಿಗಳು ಹೊಸೂರು ರಸ್ತೆ, ಕೆ.ಆರ್‌.ಪುರ, ಮಾರತ್ತಹಳ್ಳಿ ಸೇರಿದಂತೆ ರಿಂಗ್‌ ರಸ್ತೆಗಳಲ್ಲಿ ಸಂಚರಿಸುವ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ಓಡಾಡುತ್ತಿದ್ದರು. ದಟ್ಟಣೆ ಇರುವ ಬಸ್‌ಗಳಲ್ಲಿ ಓಡಾಡುತ್ತಿದ್ದ ಆರೋಪಿಗಳು, ಪ್ರಯಾಣಿಕರ ಪರ್ಸ್‌, ಮೊಬೈಲ್‌, ಸರಗಳನ್ನು ದೋಚುತ್ತಿದ್ದರು.

ಮಫ್ತಿಯಲ್ಲಿ ಪೊಲೀಸರ ತಂಡ ಪ್ರಮುಖ ಬಸ್‌ ನಿಲ್ದಾಣದಲ್ಲಿ ನಿಗಾವಹಿಸಿ ಪ್ರಯಾಣ ಮಾಡಿದಾಗ ಆರೋಪಿಗಳ ಸುಳಿವು ಸಿಕಿದ್ದವು. ನಂತರ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳವು ಕೇಸ್‌ಗಳು ಬೆಳಕಿಗೆ ಬಂದಿವೆ. ಪ್ರಮುಖ ಆರೋಪಿ ಅಫ್ಜಲ್‌ ಸೇರಿದಂತೆ ಹಲವರು ತಲೆಮರೆಸಿಕೊಂಡಿದಾರೆ. ಅವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ಆರೋಪಿಗಳು ಕದ್ದ ಮೊಬೈಲ್‌ಫೋನ್‌ಗಳನ್ನು ನಗರದಲ್ಲಿ ಅಥವಾ ರಾಜ್ಯದಲ್ಲೇ ಮಾರಾಟ ಮಾಡಿದರೆ ಸಿಕ್ಕಿ ಬೀಳುತ್ತೇವೆ ಎಂದು ಮುಂಬಯಿಯ ಕಾಳಸಂತೆಯಲ್ಲಿ ಮಾರುತ್ತಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ