ಆ್ಯಪ್ನಗರ

ಆದೇಶ ಪಾಲಿಸದ ಬಿಬಿಎಂಪಿ ವಿರುದ್ಧ ಹೈಕೋರ್ಟ್‌ ಆಕ್ರೋಶ

ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ಪರಿಹಾರ ನೀಡುವ ಕುರಿತಂತೆ ಪತ್ರಿಕೆಗಳಲ್ಲಿ ಜಾಹೀರಾತು ನೀಡುವುದೂ ಸೇರಿದಂತೆ ನೀಡಿರುವ ಆದೇಶಗಳನ್ನು ಪಾಲಿಸದ ಬಿಬಿಎಂಪಿ ವಿರುದ್ಧ ಹೈಕೋರ್ಟ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

Vijaya Karnataka Web 12 Nov 2019, 9:38 am
ಬೆಂಗಳೂರು: ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ಪರಿಹಾರ ನೀಡುವ ಕುರಿತಂತೆ ಪತ್ರಿಕೆಗಳಲ್ಲಿ ಜಾಹೀರಾತು ನೀಡುವುದೂ ಸೇರಿದಂತೆ ಹೈಕೋರ್ಟ್‌ ನೀಡಿರುವ ಆದೇಶಗಳನ್ನು ಇನ್ನೂ ಪಾಲನೆ ಮಾಡದಿರುವ ಕುರಿತು ಸಮಗ್ರ ವಿವರಗಳನ್ನು ಒಳಗೊಂಡ ಪ್ರಮಾಣಪತ್ರ ಸಲ್ಲಿಸುವಂತೆ ಹೈಕೋರ್ಟ್‌ ಬಿಬಿಎಂಪಿಗೆ ಆದೇಶಿಸಿದೆ.
Vijaya Karnataka Web Bengaluru


ಗಡುವು ಮೀರಿದರೂ ಗುಂಡಿ ಮುಚ್ಚುವಲ್ಲಿ ಬಿಬಿಎಂಪಿ ಫೇಲ್‌: ಮುಚ್ಚಿರುವ ಗುಂಡಿಯ ತೇಪೆ ಕಿತ್ತುಹೋಗಿ ಮತ್ತಷ್ಟು ಅಧ್ವಾನ

ಬೆಂಗಳೂರಿನ ರಸ್ತೆ ದುಸ್ಥಿತಿಯ ಬಗ್ಗೆ 2015ರಲ್ಲಿ ಕೋರಮಂಗಲದ ವಿಜಯನ್‌ ಮೆನನ್‌ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಮತ್ತು ನ್ಯಾ.ಎಸ್‌.ಆರ್‌. ಕೃಷ್ಣಕುಮಾರ್‌ ನೇತೃತ್ವದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು. ಪಾಲಿಕೆ ಪರ ವಾದ ಆಲಿಸಿದ ಬಳಿಕ ನ್ಯಾಯಪೀಠ, ''ಈ ಹಿಂದೆ ನೀಡಿರುವ ಆದೇಶಗಳನ್ನು ಪಾಲನೆ ಮಾಡಿಲ್ಲ. ಇದನ್ನು ಲಘುವಾಗಿ ಪರಿಗಣಿಸುವುದಿಲ್ಲ. ಏಕೆ ಬಿಬಿಎಂಪಿ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಬಾರದು'' ಎಂದು ಎಚ್ಚರಿಕೆ ನೀಡಿತು.

ನ. 25ರ ಕಡಲೆಕಾಯಿ ಪರಿಷೆಗೆ ಸಜ್ಜಾಗುತ್ತಿದೆ ಬೆಂಗಳೂರಿನ ಬಸವನಗುಡಿ: ಹೊಸ ಪೀಳಿಗೆಗೆ ಪರಿಷೆ ಪರಿಚಯಿಸಲು ವಿನೂತನ ಕಾರ್ಯಕ್ರಮಗಳು

ವಿಚಾರಣೆ ಆರಂಭವಾಗುತ್ತಿದ್ದಂತೆಯೇ ಬಿಬಿಎಂಪಿ ಪರ ವಕೀಲರು, ''ರಸ್ತೆಯಲ್ಲಿನ ಗುಂಡಿಗಳಿಂದಾಗಿ ಅಪಘಾತಕ್ಕೆ ಒಳಗಾಗಿ ಗಾಯಗೊಂಡವರಿಗೆ ಪರಿಹಾರ ನೀಡುವ ಬಗ್ಗೆ ಕರ್ನಾಟಕ ಪೌರಾಡಳಿತ ಕಾಯಿದೆಯಲ್ಲಿ ಯಾವುದೇ ಸ್ಪಷ್ಟ ವಿವರಣೆ ಇಲ್ಲ. ಆ ಬಗ್ಗೆ ಪಾಲಿಕೆ ಇನ್ನೂ ಮಾರ್ಗದರ್ಶಿ ಸೂತ್ರ ರೂಪಿಸಬೇಕಿದೆ. ಅದಕ್ಕಾಗಿ ತಜ್ಞರ ಅಭಿಪ್ರಾಯ ಕೋರಲಾಗಿದೆ'' ಎಂದರು. ''ರಸ್ತೆ ಗುಂಡಿಗಳಿಂದಾಗಿ ಸಂಭವಿಸುವ ಅಪಘಾತದಲ್ಲಿಗಾಯಗೊಂಡವರಿಗೆ ಪರಿಹಾರ ನೀಡುವ ಕುರಿತು ಜಾಹೀರಾತು ಮೂಲಕ ಸಾರ್ವಜನಿಕರಿಗೆ ಪ್ರಚಾರ ನೀಡಬೇಕೆಂಬ ಹಿಂದಿನ ಆದೇಶ ಹಿಂಪಡೆಯಬೇಕು'' ಎಂದೂ ಅವರು ಕೋರಿದರು.

ಬೆಂಗಳೂರಿನಲ್ಲಿ ರಸ್ತೆ ಅಗೆತಕ್ಕೆ ಬ್ರೇಕ್‌ ಹಾಕಿದ ಬಿಬಿಎಂಪಿ: ರಸ್ತೆಗುಂಡಿ ಮುಚ್ಚಲು ನವೆಂಬರ್ 10 ಡೆಡ್‌ಲೈನ್‌

''ಅಪಘಾತಗಳು ರಸ್ತೆ ಗುಂಡಿಗಳಿಂದಲೇ ಆಗಿವೆಯೇ ಎಂಬ ಬಗ್ಗೆ ನಿರ್ದಿಷ್ಟ ಸಾಕ್ಷ್ಯಗಳಿರಬೇಕು ಮತ್ತು ಇಂತಹ ಅರ್ಜಿಗಳನ್ನು ಸ್ವೀಕರಿಸುವ ಹಾಗೂ ವಿಲೇವಾರಿ ಮಾಡುವ ಬಗ್ಗೆ ಕಾನೂನು ಮತ್ತು ನಿಯಮಗಳಲ್ಲಿ ಸ್ಪಷ್ಟತೆ ಇಲ್ಲ. ಆದರೂ ನ್ಯಾಯಪೀಠದ ಆದೇಶದ ಅನುಸಾರ ಶೇ100ರಷ್ಟು ಗುಂಡಿ ಮುಕ್ತ ಮಾಡಲು ಪಾಲಿಕೆ ಶ್ರಮ ವಹಿಸುತ್ತದೆ'' ಎಂದು ಅವರು ವಿವರಿಸಿದರು.

ಕಚೇರಿಗೆ ಅಧಿಕಾರಿ, ಸಿಬ್ಬಂದಿ ಗೈರು: ಮೇಯರ್‌ ತರಾಟೆ

ಕಳೆದ ಅ.24ರಂದು 'ಬೆಂಗಳೂರು ನಗರದಲ್ಲಿರಸ್ತೆ ಗುಂಡಿಗಳಿಂದಾದ ಅಪಘಾತಕ್ಕೆ ಬಿಬಿಎಂಪಿಯೇ ಹೊಣೆ' ಎಂದು ಪುನರುಚ್ಚರಿಸಿದ್ದ ಹೈಕೋರ್ಟ್‌, ಅಂತಹ ಅಪಘಾತಗಳ ಗಾಯಾಳುಗಳಿಗೆ ಪರಿಹಾರ ನೀಡುವ ಕುರಿತು ಸಾರ್ವಜನಿಕ ಪ್ರಕಟಣೆ ಮೂಲಕ ವ್ಯಾಪಕ ಪ್ರಚಾರ ನೀಡಬೇಕು. ಗಾಯಾಳುಗಳಿಗೆ ಪರಿಹಾರದ ಬಗ್ಗೆ 10 ದಿನಗಳಲ್ಲಿ ಬಿಬಿಎಂಪಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಆದೇಶಿಸಿತ್ತು.

ಮುಂದಿನ ಲೇಖನ