ಆ್ಯಪ್ನಗರ

ಬೆಂಗಳೂರಿಗೆ ಜಾಗತಿಕ ಮಟ್ಟದ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧ, ಬಿಎಸ್‌ವೈ ಭರವಸೆ

ಬೆಂಗಳೂರು ನಗರಕ್ಕೆ ಜಾಗತಿಕ ಮಟ್ಟದ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು ಈ ಕುರಿತಾಗಿ ಹೇಳಿದ್ದಿಷ್ಟು.

Vijaya Karnataka Web 18 Jan 2021, 2:18 pm
ಬೆಂಗಳೂರು: ಬೆಂಗಳೂರು ನಗರಕ್ಕೆ ಜಾಗತಿಕ ಮಟ್ಟದ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಬಿಡಿಎ ಕಚೇರಿಯಲ್ಲಿ ಸೋಮವಾರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯವೈಖರಿ ಪರಿಶೀಲನೆ ನಡೆಸಿ ಮಾತನಾಡಿದ ಅವರು ಬೆಂಗಳೂರು ಮಹಾನಗರ ವಿಶ್ವಮಾನ್ಯ ನಗರಗಳಲ್ಲಿ ಒಂದಾಗಿದೆ ಎಂದರು.
Vijaya Karnataka Web bsy


ವಿಶ್ವದ 4 ತಾಂತ್ರಿಕ ನೆಲೆಗಳಲ್ಲಿ ಬೆಂಗಳೂರು ನಗರ ಮೊದಲ ಸ್ಥಾನ ಪಡೆದಿದೆ. ವಿಶ್ವ ಮಾನ್ಯ ಬೆಂಗಳೂರು ಮಹಾನಗರಕ್ಕೆ ಅಗತ್ಯ ಜಾಗತಿಕ ಮಟ್ಟದ ಸೌಲಭ್ಯಗಳನ್ನು ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಹ ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿ ಕುರಿತಂತೆ ಆಗಾಗ ಸಲಹೆ ಮಾರ್ಗದರ್ಶನ ನೀಡುತ್ತಲೇ ಬಂದಿದ್ದಾರೆ ಎಂದು ತಿಳಿಸಿದರು.

ಬಿಎಸ್‌ವೈ ನೇತೃತ್ವದಲ್ಲಿ ಸರ್ಕಾರ ಸಮರ್ಥವಾಗಿ ಮುನ್ನಡೆಯಲಿದೆ: ಬಿಸಿ ಪಾಟೀಲ್ ಭರವಸೆ!

ಕಳೆದ ತಿಂಗಳು ಬೆಂಗಳೂರು ಮಿಷನ್ 2022 ಯೋಜನೆಯನ್ನು ಘೋಷಿಸಲಾಗಿದೆ. ಬಡಾವಣೆ ನಿಮಾಣಕ್ಕೆ ರೈತರಿಂದ ಪಡೆದ ಜಮೀನಿಗೆ ಬದಲಾಗಿ ಶೇ. 40 ರಷ್ಟು ಅಭಿವೃದ್ಧಿ ಹೊಂದಿದ ಜಮೀನು ನೀಡುವಂತೆ ಸೂಚಿಸಲಾಗಿದೆ. ರೈತರು ಬಯಸುವ ಕಡೆಯಲ್ಲೇ ಈ ನಿವೇಶನಗಳನ್ನು ನೀಡಲಾಗುವುದು. ಅದೇ ರೀತಿ ಬಿಡಿಎ ನಲ್ಲಿ ಸುಮಾರು 24 ಮಂದಿ ಎಂಜಿನಿಯರುಗಳು ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಕಾರ್ಯಭಾರವನ್ನು ಪರಿಶೀಲಿಸಿ, ಅಗತ್ಯವಿಲ್ಲದಿದ್ದರೆ ಅವರ ಸೇವೆಯನ್ನು ಮಾತೃ ಇಲಾಖೆಗೆ ಹಿಂದಿರುಗಿಸಲಾಗುವುದು ಎಂದು ಹೇಳಿದರು.

ಬಿಡಿಎನಲ್ಲಿ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. 196 ಮಂದಿ ವಕೀಲರು ಇದ್ದಾರೆ. ಹೆಚ್ಚಿನ ಕಾರ್ಯಭಾರ ಇಲ್ಲದ ವಕೀಲರನ್ನು ಪ್ಯಾನೆಲ್ ನಿಂದ ಕೈ ಬಿಡಲಲು ಸೂಚನೆ ನೀಡಲಾಗಿದೆ ತಿಳಿಸಿದರು. ಇನ್ನು ಪೆರಿಫೆರಲ್ ರಿಂಗ್ ರಸ್ತೆಯನ್ನು 21,091 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲು ಅನುಮೋದನೆ ದೊರೆತಿದ್ದು, ಕಾಲಮಿತಿಯಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಕ್ರಮ ವಹಿಸುವಂತೆ ಇದೇ ವೇಳೆ ನಿರ್ದೇಶನ ನೀಡಲಾಯಿತು.

ಈಗಾಗಲೇ ನಿರ್ಮಿಸಲಾಗಿರುವ ನಿವೇಶನಗಳು, ವಸತಿ ಯೋಜನೆಗಳ ವಿತರಣೆಗೆ ಕ್ರಮ ಕೈಗೊಳ್ಳಬೇಕು ಹಾಗೂ ಏಜೆಂಟರ ಹಾವಳಿ ನಿಯಂತ್ರಿಸಲು ಸಿಎಂ ಸೂಚನೆ ನೀಡಿದರು. ಪ್ರಗತಿಯಲ್ಲಿರುವ ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಚುರುಕುಗೊಳಿಸಿ, ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದ ಅವರು, ಎರಡು ತಿಂಗಳ ನಂತರ ಮತ್ತೊಮ್ಮೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ