ಆ್ಯಪ್ನಗರ

ಕಾಂಗ್ರೆಸ್ ಗೆ ಅಭ್ಯರ್ಥಿಗಳೇ ಸಿಗ್ತಿಲ್ಲ, ಸಚಿವರು ಸ್ಪರ್ಧೆಗೆ ಒಪ್ತಿಲ್ಲ : ಡಿಕೆಶಿಗೆ ಬಿವೈ ವಿಜಯೇಂದ್ರ ಟಾಂಗ್

ಬಿಜೆಪಿಯಲ್ಲಿ ಟಿಕೆಟ್ ಕೈತಪ್ಪಿದ ಸಂಸದರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂಬ ಉಫಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಗೆ ಇಂತಹ ದಯನೀಯ ಸ್ಥಿತಿ ಬಂದಿದೆ. ಅವರಿಗೆ ಚುನಾವಣೆಯಲ್ಲಿ ಕಣಕ್ಕಿಳಿಸಲು ಅಭ್ಯರ್ಥಿಗಳೇ ಸಿಗ್ತಿಲ್ಲ. ಸಚಿವರೂ ಸ್ಪರ್ಧಿಸಲು ಒಪ್ಚಿಲ್ಲ ಎಂದು ಕಾಲೆಳೆದಿದ್ದಾರೆ. ಇನ್ನು ಟಿಕೆಟ್ ಹಂಚಿಕೆ ವಿಚಾರವಾಗಿ ಆಗಿರುವ ಅಸಮಾಧಾನಕ್ಕೆ ಸಂಬಂಧಿಸಿ, ಸಣ್ಣಪುಟ್ಟ ವ್ಯತ್ಯಾಸ ಸಹಜ. ಆದರೆ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಲು ಮೂಲಕ ಎಲ್ಲದಕ್ಕೂ ಉತ್ತರ ಸಿಗುತ್ತದೆ ಎಂದಿದ್ದಾರೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಪರಿಸ್ಥಿತಿ ದಯನೀಯವಾಗಿದೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳು ಸಿಗ್ತಿಲ್ಲ. ಅಷ್ಟೇ ಅಲ್ಲ, ಸಚಿವರು ಕೂಡಾ ಸ್ಪರ್ಧೆಗೆ ಸಿದ್ದರಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
Vijaya Karnataka Web vijayendra
ಬಿವೈ ವಿಜಯೇಂದ್ರ(ಸಂಗ್ರಹ ಚಿತ್ರ)


ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಕೆಟ್ ಕೈತಪ್ಪಿದ ಬಿಜೆಪಿ ಸಂಸದರು ನಮ್ಮ ಜೊತೆ ಸಂಪರ್ಕದಲ್ಲಿ ಇದ್ದಾರೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ, ‌ ಕಾಂಗ್ರೆಸ್ ಗೆ ಇಂತಹ ಕೆಟ್ಟ ಪರಿಸ್ಥಿತಿ ಕಾಂಗ್ರೆಸ್ ಗೆ ಬಂದಿದೆ ಎಂದರು.

ಟಿಕೆಟ್ ಗೊಂದಲ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಸಣ್ಣ ಪುಟ್ಟ ವ್ಯತ್ಯಾಸ ಇರುತ್ತದೆ. ಆದರೆ ನಮ್ಮ ಅಭ್ಯರ್ಥಿ ಗೆಲ್ಲಿಸುವ ಮೂಲಕ ಉತ್ತರ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂವಿಧಾನ ಬದಲಾವಣೆ ಹೇಳಿಕೆ ವಿವಾದ: ಅನಂತ್ ಕುಮಾರ್ ಹೆಗಡೆ ವಿರುದ್ಧ ಸಿಡಿದೆದ್ದ ಕಾಂಗ್ರೆಸ್

ಈಶ್ವರಪ್ಪ ಜೊತೆ ಹಿರಿಯರು ಸಂಪರ್ಕದಲ್ಲಿ

ಇನ್ನು ಪುತ್ರ ಕಾಂತೇಶ್ ಅವರಿಗೆ ಹಾವೇರಿ ಟಿಕೆಟ್ ಸಿಗದ್ದಕ್ಕೆ ಅಸಮಾಧಾನಗೊಂಡಿರುವ ಪಕ್ಷದ ಹಿರಿಯ ಮುಖಂಡ ಕೆ.ಎಸ್ ಈಶ್ವರಪ್ಪ ಜೊತೆ ಹಿರಿಯರು‌ ಅವರ ಜೊತೆ ಸಂಪರ್ಕದಲ್ಲಿ ಇದ್ದಾರೆ. 28 ಕ್ಷೇತ್ರ ಗೆಲ್ಲಬೇಕು ಎಂಬ ನಿಟ್ಟಿನಲ್ಲಿ ಟಿಕೆಟ್ ನೀಡಲಾಗಿದೆ. ಎಲ್ಲದಕ್ಕೂ ಲೋಕಸಭಾ ಚುನಾವಣೆಯ ಫಲಿತಾಂಶ ಉತ್ತರ ಸಿಗಲಿದೆ‌ ಎಂದರು.

ಟಿಕೆಟ್ ಸಿಗದವರಿಗೆ ಗೆಲ್ಲುವ ಸಾಮರ್ಥ್ಯ ಇಲ್ಲವೇ ಎಂಬ ಪ್ರಶ್ನೆಗೆ, ಸಾಮರ್ಥ್ಯ ಇಲ್ಲ ಅಂದಲ್ಲ, ಪಕ್ಷಕ್ಕೆ ಅವರದ್ದೇ ಆದ ಕೊಡುಗೆ ಇದೆ. ಆದರೆ ಕೆಲವು ಸಂದರ್ಭಗಳಲ್ಲಿ ವರಿಷ್ಠರು ತೀರ್ಮಾನ ಮಾಡ್ತಾರೆ ಎಂದು ಹೇಳಿದರು.

ಜಗದೀಶ್ ಶೆಟ್ಟರ್ ಕುರಿತಾದ ಗೊಂದಲಕ್ಕೆ ಮೂರು ನಾಲ್ಕು ದಿನಗಳಲ್ಲಿ ಉತ್ತರ ಸಿಗಲಿದೆ. ಬೆಂಗಳೂರು ಉತ್ತರದಿಂದ ಸ್ಪರ್ಧೆ ಮಾಡಿರುವ ಶೋಭಾ ಕರಂದ್ಲಾಜೆ ಅವರನ್ನು ಗೆಲ್ಲಿಸುತ್ತೇವೆ ಎಂದರು.

ಪಾಕಿಸ್ತಾನ ಜಿಂದಾಬಾದ್ ಘೋಷಣೆಯ ಮುಂದುವರಿದ ಭಾಗ ರಾಮೇಶ್ವರ ಕೆಫೆ ಸ್ಫೋಟ: ವಿಜಯೇಂದ್ರ ಆರೋಪ

ಹಿಂದುಳಿದ ವರ್ಗಗಳಿಗೆ ನ್ಯಾಯ

20 ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳ ಘೋಷಣೆ ಆಗಿದೆ. ಕೆಲವು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಣೆ ಆಗಿದೆ. ಆದರೆ ಹೊಸ ಮುಖಗಳಿಗೆ ಟಿಕೆಟ್ ಕೊಡಲಾಗಿದೆ. ಮೂರು ಜನ ವೀಕ್ಷಕರ ಅಭಿಪ್ರಾಯ, ಕೋರ್ ಕಮಿಟಿ ಚರ್ಚೆಯ ಬಳಿಕ ಮೂರು ಹೆಸರು ‌ಕಳಿಸಿಕೊಟ್ಟಿದ್ದೆವು. ಹಿಂದುಳಿದ ವರ್ಗಗಳಿಗೆ ನ್ಯಾಯ ಕೊಡಿಸುವ ಕೆಲಸ ಆಗಿದೆ.

ಬೆಂಗಳೂರು ಗ್ರಾಮಾಂತರ ಕ್ಕೆ ಬಿಜೆಪಿ ಅಚ್ಚರಿಯ ಆಯ್ಕೆ ಮಾಡಿದೆ. ಖ್ಯಾತ ಹೃದ್ರೋಗ ತಜ್ಞರನ್ನು ಆಯ್ಕೆ ಮಾಡಿದ್ದು ಸಂತೋಷ ತಂದಿದೆ. ಬಿಜೆಪಿ ಹಾಗೂ ಜೆಡಿ ಎಸ್ ಒಂದಾಗಿ ಚುನಾವಣೆ ಎದುರಿಸಿ ಹೊಸ‌ ದಾಖಲೆ ಸೃಷ್ಟಿ ಮಾಡಬೇಕು ಹಾಗೂ ಮೋದಿ ಕೈ ಬಲಪಡಿಸಬೇಕು ಎಂಬ ನಿಟ್ಟಿನಲ್ಲಿ ಉತ್ತಮ ಅಭ್ಯರ್ಥಿ ಘೋಷಣೆ ಮಾಡಲಾಗಿದೆ ಎಂದರು.



ಯಾರೋ ಇಬ್ಬರು ಕೂತು ಮಾಡಿದ ತೀರ್ಮಾನ ಅಲ್ಲ, ಕೇಂದ್ರದ ವರಿಷ್ಠರು ಕುಳಿತು ತೀರ್ಮಾನ ಮಾಡಿ ಗುರಿ ಮುಟ್ಟುವ ಸಲುವಾಗಿ ಒಳ್ಳೆಯ ಅಭ್ಯರ್ಥಿ ಆಯ್ಕೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಪದೇ ಪದೇ ಹೇಳುತ್ತಿದ್ದಾರೆ ``ಯಾವಾಗ ಸ್ಪಷ್ಟ ಬಹುಮತ'' ಎಂದು . ಈ ನಿಟ್ಟಿನಲ್ಲಿ ಮುಂದಿನ ವಿಧಾನಸಭೆ ಚುನಾವಣೆ ದೃಷ್ಟಿಯಿಂದಲೂ ಈ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ