ಆ್ಯಪ್ನಗರ

ಪರಿಹಾರ ಘೋಷಣೆಯಾದರೂ ಕೈಗೆ ಸಿಕ್ಕಿಲ್ಲ! ಬೆಂಗಳೂರಿನಲ್ಲಿ ಆಟೋ, ಟ್ಯಾಕ್ಸಿ ಚಾಲಕರ ಪ್ರತಿಭಟನೆ

ಲಾಕ್‌ಡೌನ್‌ನಿಂದ ಸಂಷಕ್ಟಕ್ಕೊಳಗಾದ ಆಟೋ, ಟ್ಯಾಕ್ಸಿ ಚಾಲಕರಿಗೆ ಪರಿಹಾರ ಘೋಷಣೆಯಾದರೂ ಕೈಗೆ ಸಿಕ್ಕಿಲ್ಲ ಎಂದು ಆರೋಪಿಸಿ ಬೆಂಗಳೂರು ನಗರ ಸಾರಿಗೆ ಆಯುಕ್ತರ ಕಚೇರಿ ಮುಂದೆ ಚಾಲಕರು ಪ್ರತಿಭಟನೆ ನಡೆಸಿದರು.

Vijaya Karnataka Web 18 May 2020, 5:22 pm
ಬೆಂಗಳೂರು: ಕೊರೊನಾ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವ ಆಟೋ, ಟ್ಯಾಕ್ಸಿ ಚಾಲಕರಿಗೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಪರಿಹಾರ ಘೋಷಣೆ ಮಾಡಿದ್ದಾರೆ. ಚಾಲಕರಿಗೆ 5000 ಪರಿಹಾರ ನೀಡುತ್ತವೆ ಎಂದು ಸರ್ಕಾರ ಘೋಷಣೆ ಮಾಡಿ 11 ದಿನ ಕಳೆದರೂ ಪರಿಹಾರ ಕೈಗೆ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಆಟೋ, ಟ್ಯಾಕ್ಸಿ ಚಾಲಕರ ಸಂಘಟನೆಗಳು ಬೆಂಗಳೂರಿನಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
Vijaya Karnataka Web protest


ಬೆಂಗಳೂರಿನ ಸಾರಿಗೆ ಆಯುಕ್ತರ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ ಆಟೋ, ಟ್ಯಾಕ್ಸಿ ಚಾಲಕರು ತಿಥಿ ಕಾರ್ಯಮಾಡಿ ಎಳ್ಳುನೀರು ಬಿಡುವ ಮೂಲಕ ವಿಭಿನ್ನವಾಗಿ ಸರ್ಕಾರದ ನಡೆಯನ್ನು ಖಂಡಿಸಿದರು.

ಕೊರೊನಾ ಸಂಕಷ್ಟ: ಬಿಎಸ್‌ವೈ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾದ ಕೈ ಪಾಳಯ!

ಲಾಕ್‌ಡೌನ್ ಹೆಸರಿನಲ್ಲಿ ದಿನೇದಿನೇ ಹೊಸ ಹೊಸ ಮಾನದಂಡಗಳು ನಿಬಂಧನೆಗಳನ್ನು ಸರ್ಕಾರ ಚಾಲಕರ ಮೇಲೆ ಹೇರುತ್ತಾ ಬರುತ್ತಿದೆ. 7 ಲಕ್ಷದ 75 ಸಾವಿರ ಚಾಲಕರಿಗೆ ತಲಾ 5 ಸಾವಿರ ರೂಪಾಯಿ ನೀಡುತ್ತೇವೆ ಎಂದು ಹೇಳಿ ಈಗ ಕೇವಲ 20 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ ಇದರಿಂದ ಪ್ರತಿ ಚಾಲಕನಿಗೆ ಕೇವಲ 40 ರೂಪಾಯಿಗಳು ಮಾತ್ರ ಬರುತ್ತದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಪರಿಹಾರ ಹಣ ಚಾಲಕರಿಗೆ ಸಿಗಬಾರದು ಎಂದು ಸರ್ಕಾರ ಕುತಂತ್ರವನ್ನು ನಡೆಸುತ್ತಿದೆ. ಇದನ್ನು ಖಂಡಿಸಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ