ಆ್ಯಪ್ನಗರ

ವಸತಿ ಇಲಾಖೆ ಅಧಿಕಾರಿ ವಿರುದ್ಧ ಕೇಸ್‌ ದಾಖಲು

ಲೋಕಸಭೆ ಚುನಾವಣೆ ತರಬೇತಿ ಕಾರ್ಯಾಗಾರಕ್ಕೆ ತಡವಾಗಿ ಬಂದಿದ್ದನ್ನು ಪ್ರಶ್ನಿಸಿದ ಸಹಾಯಕ ಚುನಾವಣಾಧಿಕಾರಿಗೆ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ವಸತಿ ಇಲಾಖೆ ಅಧಿಕಾರಿಯೊಬ್ಬರು ನಿಂದಿಸಿರುವ ಆರೋಪ ಕೇಳಿ ಬಂದಿದೆ.

Vijaya Karnataka 13 Apr 2019, 5:00 am
ಬೆಂಗಳೂರು: ಲೋಕಸಭೆ ಚುನಾವಣೆ ತರಬೇತಿ ಕಾರ್ಯಾಗಾರಕ್ಕೆ ತಡವಾಗಿ ಬಂದಿದ್ದನ್ನು ಪ್ರಶ್ನಿಸಿದ ಸಹಾಯಕ ಚುನಾವಣಾಧಿಕಾರಿಗೆ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ವಸತಿ ಇಲಾಖೆ ಅಧಿಕಾರಿಯೊಬ್ಬರು ನಿಂದಿಸಿರುವ ಆರೋಪ ಕೇಳಿ ಬಂದಿದೆ.
Vijaya Karnataka Web fir


ಈ ಸಂಬಂಧ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಡಾ.ಎಂ. ದಾಸೇಗೌಡ, ಏ.11ರಂದು ಬಸವನಗುಡಿ ಠಾಣೆಗೆ ದೂರು ನೀಡಿದ್ದಾರೆ. ವಸತಿ ಇಲಾಖೆ ಹಿರಿಯ ಸಹಾಯಕ ಎಚ್‌. ರಾಜಶೇಖರ್‌ ಎಂಬುವರ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

''ಏ.11ರಂದು ಬಸನವಗುಡಿ ಬ್ಯೂಗಲ್‌ ಪಾರ್ಕ್‌ ಬಳಿಯ ಬಿಎಂಎಸ್‌ ಮಹಿಳಾ ಕಾಲೇಜಿನಲ್ಲಿ ಚುನಾವಣಾ ಸಿಬ್ಬಂದಿಗೆ 2ನೇ ಸುತ್ತಿನ ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಎಲ್ಲರೂ ಬೆಳಗ್ಗೆ 9.30ಕ್ಕೆ ಬರಬೇಕಿತ್ತು. ಆದರೆ, ರಾಜಶೇಖರ್‌ ಅವರು 11.30ಕ್ಕೆ ಆಗಮಿಸಿದ್ದಾರೆ. ಹೀಗಾಗಿ, ಗೇಟ್‌ನಲ್ಲಿ ಕಾವಲಿಗಿದ್ದ ಗೃಹರಕ್ಷಕ ಸಿಬ್ಬಂದಿ ಅವರನ್ನು ತಡೆದು ನಿಲ್ಲಿಸಿದ್ದರು. ಇದರಿಂದ ಕೆರಳಿದ ರಾಜಶೇಖರ್‌, ಗೃಹ ರಕ್ಷಕ ಸಿಬ್ಬಂದಿ ಮತ್ತು ಅಲ್ಲೇ ಇದ್ದ ಚುನಾವಣಾ ಸಿಬ್ಬಂದಿ ಜೊತೆ ಜಗಳ ಮಾಡಿ ನಿಂದಿಸಿದ್ದಾರೆ. ಜಗಳದ ಸದ್ದು ಕೇಳಿಸಿಕೊಂಡು ಅಲ್ಲಿಗೆ ತೆರಳಿದ ನನಗೂ ಏಕವಚನದಲ್ಲಿ ಅವಾಚ್ಯವಾಗಿ ಮಾತನಾಡಿ ಚುನಾವಣಾ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ'' ಎಂದು ದೂರಿನಲ್ಲಿ ದಾಸೇಗೌಡ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ