ಕಟ್ಟಡದಿಂದ ಬಿದ್ದು ಬಾಣಸಿಗ ಸಾವು
ಕೆಳಗೆ ಬಿದ್ದ ಶಬ್ದ ಕೇಳಿ ಸ್ಥಳೀಯರು ಬಂದು ನೋಡಿದಾಗ ರಾಜ್ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದ. ಮೃತನ ಕುಟುಂಬಕ್ಕೆ ಮಾಹಿತಿ ನೀಡಲಾಗಿದ್ದು, ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಎಚ್ಎಎಲ್ ಪೊಲೀಸರು ತಿಳಿಸಿದರು.
Vijaya Karnataka 7 May 2019, 5:00 am
ವಿಕ ಸುದ್ದಿಲೋಕ ಬೆಂಗಳೂರು
ಮದ್ಯದ ಅಮಲಿನಲ್ಲಿ ಪೋನ್ನಲ್ಲಿ ಮಾತನಾಡುವ ವೇಳೆ ಮೂರನೇ ಮಹಡಿಯಿಂದ ಬಿದ್ದು ಬಾಣಸಿಗ ಮೃತಪಟ್ಟಿರುವ ಘಟನೆ ಎಚ್ಎಎಲ್ ಪ್ರದೇಶದಲ್ಲಿ ನಡೆದಿದೆ.
ಬಿಹಾರ ಮೂಲದ ರಾಜ್ಕುಮಾರ್ (23) ಮೃತರು. ಎಚ್ಎಎಲ್ನ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ರಾಜ್ಕುಮಾರ್, ಸ್ನೇಹಿತರ ಜತೆ ಕೊಠಡಿಯೊಂದರಲ್ಲಿ ವಾಸಿಸುತ್ತಿದ್ದ. ಭಾನುವಾರ ರಾತ್ರಿ 10.40ರ ಸುಮಾರಿಗೆ ಮದ್ಯಪಾನ ಮಾಡಿದ ಬಳಿಕ ಮೂರನೇ ಮಹಡಿಯಲ್ಲಿರುವ ಸಿಟ್ ಔಟ್ನಲ್ಲಿ ಮೊಬೈಲ್ನಲ್ಲಿ ಮಾತನಾಡುತ್ತಿದ್ದ. ಈ ವೇಳೆ ತಡೆಗೋಡೆ ಮೇಲೆ ಕುಳಿತುಕೊಂಡಿದ್ದಾಗ ಆಯತಪ್ಪಿ ಕೆಳಗಿ ಬಿದ್ದಿದ್ದಾನೆ ಎನ್ನಲಾಗಿದೆ.
ಕೆಳಗೆ ಬಿದ್ದ ಶಬ್ದ ಕೇಳಿ ಸ್ಥಳೀಯರು ಬಂದು ನೋಡಿದಾಗ ರಾಜ್ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದ. ಮೃತನ ಕುಟುಂಬಕ್ಕೆ ಮಾಹಿತಿ ನೀಡಲಾಗಿದ್ದು, ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಎಚ್ಎಎಲ್ ಪೊಲೀಸರು ತಿಳಿಸಿದರು.
ಮದ್ಯದ ಅಮಲಿನಲ್ಲಿ ಪೋನ್ನಲ್ಲಿ ಮಾತನಾಡುವ ವೇಳೆ ಮೂರನೇ ಮಹಡಿಯಿಂದ ಬಿದ್ದು ಬಾಣಸಿಗ ಮೃತಪಟ್ಟಿರುವ ಘಟನೆ ಎಚ್ಎಎಲ್ ಪ್ರದೇಶದಲ್ಲಿ ನಡೆದಿದೆ.
ಬಿಹಾರ ಮೂಲದ ರಾಜ್ಕುಮಾರ್ (23) ಮೃತರು. ಎಚ್ಎಎಲ್ನ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ರಾಜ್ಕುಮಾರ್, ಸ್ನೇಹಿತರ ಜತೆ ಕೊಠಡಿಯೊಂದರಲ್ಲಿ ವಾಸಿಸುತ್ತಿದ್ದ. ಭಾನುವಾರ ರಾತ್ರಿ 10.40ರ ಸುಮಾರಿಗೆ ಮದ್ಯಪಾನ ಮಾಡಿದ ಬಳಿಕ ಮೂರನೇ ಮಹಡಿಯಲ್ಲಿರುವ ಸಿಟ್ ಔಟ್ನಲ್ಲಿ ಮೊಬೈಲ್ನಲ್ಲಿ ಮಾತನಾಡುತ್ತಿದ್ದ. ಈ ವೇಳೆ ತಡೆಗೋಡೆ ಮೇಲೆ ಕುಳಿತುಕೊಂಡಿದ್ದಾಗ ಆಯತಪ್ಪಿ ಕೆಳಗಿ ಬಿದ್ದಿದ್ದಾನೆ ಎನ್ನಲಾಗಿದೆ.
ಕೆಳಗೆ ಬಿದ್ದ ಶಬ್ದ ಕೇಳಿ ಸ್ಥಳೀಯರು ಬಂದು ನೋಡಿದಾಗ ರಾಜ್ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದ. ಮೃತನ ಕುಟುಂಬಕ್ಕೆ ಮಾಹಿತಿ ನೀಡಲಾಗಿದ್ದು, ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಎಚ್ಎಎಲ್ ಪೊಲೀಸರು ತಿಳಿಸಿದರು.