ಆ್ಯಪ್ನಗರ

ಬೆಂಗಳೂರಿನಲ್ಲಿ ಮಳೆ ಹಾನಿ, ತೊಂದರೆಗೊಳಗಾದವರಿಗೆ ಪರಿಹಾರದ ಭರವಸೆ ನೀಡಿದ ಬಿಎಸ್‌ವೈ

ಬೆಂಗಳೂರಿನ ಮಳೆಯಿಂದಾಗಿ ತೊಂದರೆಗೆ ಒಳಗಾದವರಿಗೆ ಸೂಕ್ತ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಏನು ಹೇಳಿದ್ದಾರೆ ಎಂಬ ವಿವರ ಇಲ್ಲಿದೆ.

Vijaya Karnataka Web 25 Oct 2020, 11:44 am
ಬೆಂಗಳೂರು: ಭಾರೀ ಮಳೆಯಿಂದಾದ ಹಾನಿಯಿಂದಾಗಿ ಸಮಸ್ಯೆ ಅನುಭವಿಸುತ್ತಿರುವ ಜನರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
Vijaya Karnataka Web BS Yediyurappa


ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರು ಮಳೆ ಹಾನಿಯಿಂದ ತೊಂದರೆಯಾದವರಿಗೆ ಕೂಡಲೇ ಸೂಕ್ತ ಪರಿಹಾರ ನೀಡಲಾಗುವುದು ಹಾಗೂ ಈಗಾಗಲೇ 25 ಸಾವಿರ ಹಣವನ್ನು ಪರಿಹಾರವಾಗಿ ನೀಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

ಯತ್ನಾಳ್ ವಿರುದ್ಧ‌ ನೋಟಿಸ್ ಜಾರಿಯಾಗಿಲ್ಲ, ಶಿಸ್ತು ಕ್ರಮವೂಇಲ್ಲ ! ವರಿಷ್ಠರ ಮೌನಕ್ಕೆ ಕಾರಣವೇನು?

ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ದೊಡ್ಡ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ತೊಂದರೆ ಅನುಭವಿಸುತ್ತಾರೆ. ಮಳೆ ಮತ್ತೆ ಮುಂದುವರಿಯುವ ಸಾಧ್ಯತೆ ಇದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಅಕ್ಟೋಬರ್ 30 ಕ್ಕೆ ಶಿರಾ ಪ್ರಚಾರ

ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಉಪಚುನಾವಣೆಯ ಹಿನ್ನೆಲೆಯಲ್ಲಿ ಅಕ್ಟೋಬರ್‌ 30 ರಂದು ಶಿರಾಗೆ ತೆರಳಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುವುದಾಗಿ ಸಿಎಂ ಬಿಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ. ಶಿರಾದಲ್ಲಿ ಒಂದು ದಿನ ಬಿಜೆಪಿ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ ನಡೆಸುವುದಾಗಿ ತಿಳಿಸಿದರು.

ಈಗಾಗಲೇ ಕಲಬುರಗಿ ಸೇರಿದಂತೆ ನೆರೆ ಪೀಡಿತ ಪ್ರದೇಶಗಳಿಗೆ ತೆರಳಿ ಸಮೀಕ್ಷೆ ನಡೆಸಿದ್ದು ಅಗತ್ಯ ಬಿದ್ದರೆ ಮತ್ತೊಮ್ಮೆ ನೆರೆ ಪೀಡಿತ ಪ್ರದೇಶಗಳಿಗೆ ತೆರಳುವುದಾಗಿ ಸಿಎಂ ಬಿಎಸ್‌ವೈ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ