ಆ್ಯಪ್ನಗರ

ವಿಶೇಷಚೇತನ ನೌಕರರ ಹಾಜರಿಗೆ ಸುತ್ತೋಲೆ; ಮರುಪರಿಶೀಲನೆಗೆ ಹೈಕೋರ್ಟ್‌ ನಿರ್ದೇಶನ

ಕೋವಿಡ್‌ ಹಿನ್ನೆಲೆಯಲ್ಲಿ ಸರಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದೃಷ್ಟಿ ವಿಶೇಷಚೇತನರು ಹಾಗೂ ಇತರೆ ವಿಶೇಷಚೇತನ ನೌಕರರ ಹಾಜರಿಗೆ ಸಂಬಂಧಪಟ್ಟಂತೆ ಜ.5ರಂದು ಹೊರಡಿಸಿರುವ ಸುತ್ತೋಲೆಯನ್ನು ಮರುಪರಿಶೀಲಿಸುವಂತೆ ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

Vijaya Karnataka Web 17 Jan 2021, 12:13 pm
ಬೆಂಗಳೂರು: ಕೋವಿಡ್‌ ಹಿನ್ನೆಲೆಯಲ್ಲಿ ಸರಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದೃಷ್ಟಿ ವಿಶೇಷಚೇತನರು ಹಾಗೂ ಇತರೆ ವಿಶೇಷಚೇತನ ನೌಕರರಲ್ಲಿ ಶೇ. 50 ಮಂದಿ ಪರ್ಯಾಯ ದಿನಗಳ ಆಧಾರದಲ್ಲಿ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಿ ಜ. 5ರಂದು ಹೊರಡಿಸಿರುವ ಸುತ್ತೋಲೆಯನ್ನು ಮರುಪರಿಶೀಲಿಸುವಂತೆ ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.
Vijaya Karnataka Web ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ


ಕರ್ನಾಟಕ ಅಂಧರ ಒಕ್ಕೂಟ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ಎಲ್ಲ ಸರಕಾರಿ, ಅರೆ ಸರಕಾರಿ, ಸ್ವಾಯತ್ತ ಸಂಸ್ಥೆ, ನಿಗಮ-ಮಂಡಳಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದೃಷ್ಟಿ ವಿಶೇಷಚೇತನ ಹಾಗೂ ಇತರೆ ವಿಶೇಷಚೇತನರ ಅಧಿಕಾರಿ, ಸಿಬ್ಬಂದಿ ಪರ್ಯಾಯ ದಿನಗಳ ಆಧಾರದ ಮೇಲೆ ಪ್ರತಿದಿನ ಶೇ. 50 ಮಂದಿ ಕರ್ತವ್ಯಕ್ಕೆ ಹಾಜರಾಗುವಂತೆ ನಿರ್ದೇಶಿಸಿ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌ ಜ.5ರಂದು ಹೊರಡಿಸಿರುವ ಸುತ್ತೋಲೆಯನ್ನು ಸರಕಾರದ ಪರ ವಕೀಲರು ನ್ಯಾಯಪೀಠಕ್ಕೆ ಸಲ್ಲಿಸಿದರು.
ವಾಟ್ಸ್‌ಆ್ಯಪ್‌ ಹೊಸ ನೀತಿಯಿಂದ ರಾಷ್ಟ್ರೀಯ ಭದ್ರತೆಗೆ ತೊಡಕು: ದೆಹಲಿ ಹೈ ಕೋರ್ಟ್‌ಗೆ ಪಿಐಎಲ್‌

ಅದನ್ನು ಪರಿಶೀಲಿಸಿದ ಪೀಠವು, ಶೇ.50ರಷ್ಟು ದೃಷ್ಟಿ ವಿಶೇಷಚೇತನ ನೌಕರರು ಕರ್ತವ್ಯಕ್ಕೆ ಹಾಜರಾಗಬೇಕೆಂದು ಸೂಚಿಸಿರುವ ಸರಕಾರದ ತರ್ಕವೇ ನಮಗೆ ಅರ್ಥವಾಗುತ್ತಿಲ್ಲ. ಗರ್ಭಿಣಿಯರು ಹಾಗೂ ವಿಶೇಷಚೇತನರು ಮನೆಯಿಂದಲೇ ಕೆಲಸ ಮಾಡಬಹುದು ಎಂದು ಕೇಂದ್ರ ಸರಕಾರವೇ ತಿಳಿಸಿದೆ. ಹೀಗಿದ್ದರೂ, ರಾಜ್ಯ ಸರಕಾರ ವಿವೇಚನೆ ಬಳಸದೆ ಶೇ 50ರಷ್ಟು ವಿಶೇಷಚೇತನ ನೌಕರರ ಹಾಜರಾತಿಗೆ ನಿರ್ದೇಶಿಸಿ ಸುತ್ತೋಲೆ ಹೊರಡಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತು.
ಪವಾಡ, ಅಲೌಕಿಕ ಜಾಹೀರಾತುಗಳಿಗೆ ನಿಷೇಧ! ಬಾಂಬೆ ಹೈಕೋರ್ಟ್‌ ಮಹತ್ವದ ಆದೇಶ

ನಗರದಲ್ಲಿ ನಿತ್ಯ 400ಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗುತ್ತಿವೆ. ಗರ್ಭಿಣಿಯರು, ವಿಶೇಷಚೇತನ ನೌಕರರು ಸಾರ್ವಜನಿಕ ಸಾರಿಗೆ ಮೂಲಕ ಕಚೇರಿಗೆ ಬಂದು ಹೋಗುವುದಾದರೂ ಹೇಗೆ ಎಂದು ಪ್ರಶ್ನಿಸಿದ ಪೀಠ, ಜ. 5ರಂದು ಹೊರಡಿಸಿರುವ ಸುತ್ತೋಲೆ ಮರುಪರಿಶೀಲಿಸಿ ಜ. 29ರ ಒಳಗೆ ನಿರ್ಧಾರ ಕೈಗೊಳ್ಳುವಂತೆ ಸೂಚಿಸಿ ವಿಚಾರಣೆಯನ್ನು ಫೆ. 1ಕ್ಕೆ ಮುಂದೂಡಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ